ಮೈಸೂರು : ಕೋವಿಡ್ ; ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ


Team Udayavani, Sep 21, 2020, 3:19 PM IST

ಕೋವಿಡ್: ಶಾಲೆ ಇಲ್ಲದ್ದಕ್ಕೆ ಬಾಲ್ಯ ವಿವಾಹ ದ್ವಿಗುಣ

ಮಧ್ಯರಾತ್ರಿ ಸಮಯದಲ್ಲಿ ಬಾಲ್ಯ ವಿವಾಹ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ, ಮದುವೆ ನಿಲ್ಲಿಸುತ್ತಿರುವ ಅಧಿಕಾರಿಗಳು.

ಮೈಸೂರು: ಸಾಮಾಜಿಕ ಅನಿಷ್ಟ ಪದ್ಧತಿಗಳಲ್ಲಿ ಒಂದಾದ ಬಾಲ್ಯ ವಿವಾಹ ಇಂದಿಗೂ ಸಮಾಜದಲ್ಲಿ ನಡೆಯುತ್ತಿದ್ದು, ಲಾಕ್‌ಡೌನ್‌ ನಂತರ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಬೆಳಕಿಗೆ ಬಂದ ಸಂಖ್ಯೆ ದ್ವಿಗುಣವಾಗಿದೆ. ಪ್ರತಿ ವರ್ಷ ಸಾಮಾನ್ಯವಾಗಿ 60-80 ಬಾಲ್ಯವಿವಾಹ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇವುಗಳನ್ನು ತಡೆಯಲಾಗುತ್ತಿತ್ತು. ಆದರೂ 7-8 ಬಾಲ್ಯ ವಿವಾಹಗಳು ನಡೆಯುತ್ತಿದ್ದವು. ಆದರೆ, ಈ ವರ್ಷ ಈ ಸಂಖ್ಯೆ ದ್ವಿಗುಣವಾಗಿದೆ.

ಮಾರ್ಚ್‌ ಅಂತ್ಯದಲ್ಲಿ ಲಾಕ್‌ಡೌನ್‌ ಜಾರಿಯಾದಂತೆ ಈವರೆಗೆ ಜಿಲ್ಲೆಯಲ್ಲಿ 149 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದೆ. ಇವುಗಳಲ್ಲಿ 131 ವಿವಾಹಗಳನ್ನು ತಡೆಯಲಾಗಿದ್ದು, 18 ಬಾಲ್ಯ ವಿವಾಹಗಳು ನಡೆದಿವೆ.ಈ ಸಂಬಂಧ ಜಿಲ್ಲೆಯ ವಿವಿಧ ಭಾಗಗಳಲ್ಲಿ 18 ಪ್ರಕರಣ ದಾಖಲಾಗಿದೆ. ಈ ನಡುವೆ ಬೆಳಕಿಗೆ ಬಾರದೆ ಹಲವು ಪ್ರಕರಣಗಳು ಉಳಿದಿರುವುದು ಇದೆ. ಬಾಲ್ಯ ವಿವಾಹ ತಡೆ ಕಾಯಿದೆ ಜಾರಿ ಮಾಡಿ ಹಲವು ವರ್ಷಗಳೇ ಕಳೆದರೂ, ಮಕ್ಕಳ ಪೋಷಕರು ತಮ್ಮ ಮರ್ಯಾದೆಗೆ ಅಂಜಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ.

ಬಡತನ,ಕಾಯಿದೆ ಸಂಬಂಧ ಅರಿವಿನ ಕೊರತೆ ಜೊತೆಗೆ ತಮ್ಮ ಮಕ್ಕಳು ಬೇರೆ ಯುವಕನನ್ನು ಪ್ರೀತಿಸುವ ವಿಷಯ ಬೆಳಕಿಗೆ ಬಂದಾಕ್ಷಣ ಹಾಗೂ ಲಾಕ್‌ಡೌನ್‌ ಸಮಯದಲ್ಲಿ ಶಾಲಾ ಕಾಲೇಜು ಇಲ್ಲದಿದ್ದರಿಂದ ಮಕ್ಕಳು ಮನೆಯಲ್ಲೇ ಉಳಿದ ಪರಿಣಾಮ ಪೋಷಕರು18 ವರ್ಷ ತುಂಬದೇ ಇರುವ ಮಗಳಿಗೆ ರಾತ್ರೋರಾತ್ರಿ ವರನನ್ನು ಹುಡುಕಿ ಮದುವೆ ಮಾಡುವ ಪ್ರಸಂಗಗಳು ಹೆಚ್ಚಾಗಿ ನಡೆದಿವೆ.

18 ಬಾಲಕಿಯರ ರಕ್ಷಣೆ: ಮಾರ್ಚ್‌ನಿಂದ ಈವರೆಗೆ ಜಿಲ್ಲೆಯಲ್ಲಿ ಮಧ್ಯರಾತ್ರಿ, ಬೆಳಗಿನ ಜಾವವೇ 18 ಬಾಲ್ಯ ವಿವಾಹಗಳು ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಮದುವೆ ಮಾಡಿದ ಪೋಷಕರು ಹಾಗೂ ವರನ ಮೇಲೆ ದೂರು ದಾಖಲಿಸಿ ಕ್ರಮ ಕೈಗೊಂಡಿರುವುದು ಒಂದೆಡೆಯಾದರೆ, ಹುಡುಗಿಯನ್ನು ರಕ್ಷಣೆ ಮಾಡಿ, ಮೈಸೂರಿನಲ್ಲಿರುವ ಬಾಲಕಿಯರ ಬಾಲ ಮಂದಿರದಲ್ಲಿ ಇಡಲಾಗಿದೆ. ಬಾಲ ಮಂದಿರದಲ್ಲಿಡಲಾದ ಹೆಣ್ಣಮಕ್ಕಳಿಗೆ ಉಚಿತ ಶಿಕ್ಷಣ,ಊಟಹಾಗೂವಸತಿನೀಡಲಾಗುತ್ತಿದ್ದು,ಅವರಸ್ವಾವಲಂಬನೆಗಾಗಿ ಕೌಶಲ್ಯಾಧಾರಿತ ತರಬೇತಿಯನ್ನು ನೀಡಲಾಗುತ್ತಿದೆ.

ಮಾಹಿತಿ ಇದ್ದರೆ ಕರೆ ಮಾಡಿ: ಜಿಲ್ಲೆಯ ಬಾಲ್ಯ ವಿವಾಹ ತಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ, ಶಿಶು ಅಭಿವೃದ್ಧಿ ಇಲಾಖೆ ಹಾಗೂಪೊಲೀಸರು ಸನ್ನದ್ಧರಾಗಿದ್ದು, ಇವರ ಜೊತೆಗೆಮಕ್ಕಳ ಸಹಾಯವಾಣಿ ಎಂಬ ಸರ್ಕಾರೇತರಸಂಸ್ಥೆಯು ಕೈಜೋಡಿಸಿದೆ. ಜಿಲ್ಲೆಯ ಯಾವುದೇ ಭಾಗದಲ್ಲಿಯಾದರೂ ಬಾಲ್ಯ ವಿವಾಹ ಪ್ರಕರಣಗಳು ಜರುಗುತ್ತಿದ್ದರೆ ಮೈಸೂರಿನ ಮಕ್ಕಳ ಸಹಾಯವಾಣಿ (ಎನ್‌ಜಿಒ) ಸಂಸ್ಥೆ 1098 ಸಂಖ್ಯೆಗೆ ಕರೆ ಮಾಡಿ ತಿಳಿಸಿ ಎಂಬುದು ಉದಯವಾಣಿ ಪತ್ರಿಕೆಯಕಳಕಳಿ. ಬಾಲ ಮಂದಿರದಲ್ಲಿ ರಕ್ಷಣೆ: ಲಾಕ್‌ಡೌನ್‌ ಸಂದರ್ಭವನ್ನೆ ಅವಕಾಶವನ್ನಾಗಿ ಮಾಡಿಕೊಂಡ ಮಕ್ಕಳ ಪೋಷಕರು ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ.

ಈ ಸಂಬಂಧ ದೂರು ಬಂದಾಕ್ಷಣ ಸ್ಥಳಕ್ಕೆ ತೆರಳಿ ಪೋಷಕರ ಮನವೊಲಿಸಿ ಮದುವೆ ನಿಲ್ಲಿಸಿದ್ದೇವೆ. ಅಲ್ಲದೇ ಬಾಲ್ಯ ವಿವಾಹ ನಡೆಸಿರುವ ಎರಡೂ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ರಕ್ಷಣೆ ಮಾಡಲಾದ ಹುಡುಗಿರನ್ನು ಬಾಲಕಿಯರ ಬಾಲ ಮಂದಿರದಲ್ಲಿ ಇಡಲಾಗಿದೆ. ಬಾಲ್ಯವಿವಾಹ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಎಂದು ಉಪನಿರ್ದೇಶಕಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿಕೆ. ಪದ್ಮಾ ತಿಳಿಸಿದ್ದಾರೆ.

ಯಾವ ತಿಂಗಳು ಎಷ್ಟು ಪ್ರಕರಣ? : ದೇಶಾದ್ಯಂತ ಲಾಕ್‌ಡೌನ್‌ ಜಾರಿಯಾದ ನಂತರ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿರುವುದು ಬೆಳಕಿಗೆ ಬಂದಿದ್ದು, ಏಪ್ರಿಲ್‌ನಲ್ಲಿ21, ಮೇ-43, ಜೂನ್‌-58,ಜುಲೈ- 6 ಹಾಗೂ ಆಗಸ್ಟ್‌ನಲ್ಲಿ21 ಪ್ರಕರಣಗಳು ಸೇರಿದಂತೆ ಒಟ್ಟು149 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ131 ಮದುವೆಗಳನ್ನು ತಡೆಯಲಾಗಿದ್ದು,18 ವಿವಾಹಗಳು ನಡೆದಿವೆ. ಈ 18 ಮದುವೆಗಳಿಗೆ ಸಂಬಂಧಿಸಿದಂತೆ ವಧು-ವರಕುಟುಂಬಗಳ ಮುಖ್ಯಸ್ಥರ ಮೇಲೆ ಪ್ರಕರಣ ದಾಖಲಾಗಿದೆ.

ಮಕ್ಕಳ ಮೇಲೆ ಪೋಷಕರಲ್ಲಿ ನಂಬಿಕೆ ಇಲ್ಲ  :  ಲಾಕ್‌ಡೌನ್‌ ಸಮಯದಲ್ಲಿ ಜಿಲ್ಲೆಯಲ್ಲಿ ಹೆಚ್ಚು ಬಾಲ್ಯ ವಿವಾಹಗಳು ನಡೆದಿದೆ. ಆದರೆ,149 ಪ್ರಕರಣಗಳಷ್ಟೇ ಬೆಳಕಿಗೆ ಬಂದಿದೆ. ಜನರು ಬಡತನ, ತಿಳಿವಳಿಕೆ ಇಲ್ಲ ಎಂಬ ನೆಪ ಹೇಳುತ್ತಾರೆಯಷ್ಟೇ. ಮಕ್ಕಳ ಮೇಲೆ ಪೋಷಕರಲ್ಲಿ ನಂಬಿಕೆ ಇಲ್ಲವಾದ್ದರಿಂದ ಈ ರೀತಿಯಾಗುತ್ತಿದೆ. ಬೇರೊಬ್ಬ ಯುವಕನನ್ನು ಮಕ್ಕಳು ಪ್ರೀತಿ ಮಾಡುವ ವಿಚಾರ ತಿಳಿಯುತ್ತಿದ್ದಂತೆ ಯಾರಿಗೂ ತಿಳಿಯದಂತೆ ರಾತ್ರೋ ರಾತ್ರಿ ವಿವಾಹ ಮಾಡಿಬಿಡುವಕೆಲಸ ಆಗುತ್ತಿದೆ ಎಂದು ಮಕ್ಕಳ ಸಹಾಯ ವಾಣಿ ಸಂಯೋಜಕ ಎಸ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಮಧ್ಯರಾತ್ರಿಯೇ ವಿವಾಹ :  ಮೈಸೂರು ಜಿಲ್ಲೆಯಲ್ಲಿಕಳೆದ ಆರು ತಿಂಗಳಿನಲ್ಲಿ ನಡೆದ 18 ಬಾಲ್ಯ ವಿವಾಹಗಳು ಮಧ್ಯರಾತ್ರಿ ಅಥವಾ ಮುಂಜಾನೆಯೇ ನಡೆದಿರುವುದು ವಿಶೇಷ. ಮಕ್ಕಳಿಗೆ ಮದುವೆ ಮಾಡುತ್ತಿರುವ ಬಗ್ಗೆ ಇತರರಿಗೆ ತಿಳಿಯದಂತೆ ಹಾಗೂ ಅಧಿಕಾರಿಗಳು ಬಂದು ವಿವಾಹವನ್ನು ತಡೆಯೊಡ್ಡಬಾರದೆಂಬ ಕಾರಣಕ್ಕೆ ಪೋಷಕರು ಮಧ್ಯರಾತ್ರಿ ಅಥವಾ ಮುಂಜಾನೆಯನ್ನೇ ಆಯ್ಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 

ಸತೀಶ್‌ ದೇಪುರ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.