ವರ್ಷಾಂತ್ಯಕ್ಕೂ ಮಕ್ಕಳಿಗೆ ಸೈಕಲ್ ಸಿಗೋದು ಡೌಟು!

ಬಿಡಿಭಾಗಗಳನ್ನು ಜೋಡಿಸುವ ಕಾರ್ಯವೇ ನಡೆದಿಲ್ಲ • ಸೈಕಲ್ಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ವಿದ್ಯಾರ್ಥಿಗಳು

Team Udayavani, Aug 23, 2019, 3:30 PM IST

mysuru-tdy-1

ನಂಜನಗೂಡು ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಗುರುಭವನದ ಎದುರು ರಾಶಿ ಹಾಕಿರುವ ಸೈಕಲ್ ಬಿಡಿಭಾಗಗಳು.

ನಂಜನಗೂಡು: ಶಾಲೆಗಳು ಪ್ರಾರಂಭವಾಗಿ ಮೂರು ತಿಂಗಳು ಕಳೆದಿವೆ. ಜೊತೆಗೆ ದಸರಾ ರಜೆ ಕೂಡ ಸಮೀಪಿಸುತ್ತಿದೆ. ಆದರೂ ಸಹ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಿಲ್ಲ.

ತಾಲೂಕಿನ 78 ಸರ್ಕಾರಿ ಪ್ರೌಢಶಾಲೆಗಳ 8ನೇ ತರಗತಿಯ 3,242 ವಿದ್ಯಾರ್ಥಿಗಳು ಚಾತಕ ಪಕ್ಷಿಯಂತೆ ಸೈಕಲ್ಗಾಗಿ ಮೂರು ತಿಂಗಳಿನಿಂದ ಕಾಯುತ್ತಿದ್ದಾರೆ. ಶಾಲಾ ಆರಂಭವಾದಾಗಿನಿಂದಲೂ ಸೈಕಲ್ ಇಂದು ಬರುತ್ತದೆ, ನಾಳೆ ಬರುತ್ತದೆ ಎಂಬ ಭರವಸೆಯನ್ನಿಟ್ಟುಕೊಂಡಿದ್ದರು. ಆದರೆ, ನೂರು ದಿನಗಳು ಕಳೆದರೂ ಅವರ ಆಸೆ ಈಡೇರಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾತಿನ ಪ್ರಕಾರ, ಇನ್ನೂ 3 ತಿಂಗಳು ಕಾಯಬೇಕಾಗಿದೆ. ವರ್ಷಾಂತ್ಯಕ್ಕಾದರೂ ಮಕ್ಕಳಿಗೆ ಸೈಕಲ್ ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಬೇಜವಾಬ್ದಾರಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಗಳು ಸಕಾಲದಲ್ಲಿ ಶಾಲೆಗಳಿಗೆ ತೆರಳುವ ನಿಟ್ಟಿನಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಸೈಕಲ್ ವಿತರಿಸುವ ಯೋಜನೆ ರೂಪಿಸಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿ ವರ್ತನೆಯಿಂದ ಸೌಲಭ್ಯಗಳ ಸಕಾಲದಲ್ಲಿ ಸಿಗದೇ ಪರದಾಡುವಂತಾಗಿದೆ.

ಪರದಾಟ: ಸಕಾಲದಲ್ಲಿ ಬೈಸಿಕಲ್ ಸಿಗದ ಪರಿಣಾಮ ಮಕ್ಕಳು ಮಳೆ, ಗಾಳಿ, ಬಿಸಿಲಿನಲ್ಲೇ ಸಂಚರಿಸು ವಂತಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸರಿಯಾಗಿ ಬಸ್‌ ಸೌಲಭ್ಯವಿಲ್ಲದ ಕಾರಣ ಸರಿಯಾದ ಸಮಯಕ್ಕೆ ಹಾಜರಾಗುವುದು ಕಷ್ಟವಾಗುತ್ತಿದೆ ಎಂದು ವಿದ್ಯಾರ್ಥಿ ಗಳು ಅವಲತ್ತುಕೊಂಡಿದ್ದಾರೆ.

ಸೈಕಲ್ ಬಿಡಿಭಾಗ ಜೋಡಣೆ: ತಾಲೂಕಿನ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ನೀಡಲೆಂದು ತಂದಿರುವ ಈ ಸೈಕಲ್ ಬಿಡಿ ಭಾಗಗಳನ್ನು ನಗರದ ರಾಷ್ಟ್ರಪತಿ ರಸ್ತೆಯಲ್ಲಿನ ನಾಗಮ್ಮ ಶಾಲಾ ಆವರಣದ ಹಿಂಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಗುರು ಭವನದ ಎದುರು ಗುಡ್ಡೆ ಹಾಕಲಾಗಿದೆ. ಬಿಡಿ ಭಾಗಗಳನ್ನು ಜೋಡಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಕೆಲಸ ಆಗಿಲ್ಲ. ಇದರಿಂದ ಬಿಡಿ ಭಾಗಗಳು ಬಿಸಿಲು, ಗಾಳಿ ಮಳೆಗೆ ತುಕ್ಕು ಹಿಡಿಯುವ ಹಂತಕ್ಕೆ ತಲುಪಿವೆ.

ಅವುಗಳನ್ನು ಜೋಡಿಸಲು ಪರವಾನಿಗೆ ಪಡೆದವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕೃಪಾಕಟಾಕ್ಷೆ ಪಡೆಯಬೇಕು. ಬಳಿಕ ಶಾಲಾವಾರು ಇವುಗಳ ರವಾನೆಯಾಬೇಕು. ಅದಾದ ಮೇಲೆ ಜನಪ್ರತಿ ನಿಧಿಗಳ ಉದ್ಘಾಟನಾ ಕಾರ್ಯಕ್ರಮ ನಿಗದಿಯಾಗಿ ಮಕ್ಕಳಿಗೆ ವಿತರಿಸಬೇಕು. ಈ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲು ಇನ್ನು ಎರಡು ಮೂರು ತಿಂಗಳು ಕಾಯಬೇಕಾಗುತ್ತದೆ. ಈಗಾದರೆ ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನವಾಗದೇ ಹಳ್ಳ ಹಿಡಯುತ್ತವೆ.

ಶೈಕ್ಷಣಿಕ ವರ್ಷದ ಆರಂಭದಲ್ಲೇ ಸಕಲ ಸಿದ್ಧತೆ ಮಾಡಿಕೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಈ ರೀತಿಯ ಅವ್ಯವಸ್ಥೆ ಉಂಟಾಗಿದೆ. ಈಗಲಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ತ್ವರಿತವಾಗಿ ಸೈಕಲ್ ವಿತರಿಸಬೇಕು ಎಂದು ವಿದ್ಯಾಥಿಗಳು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

 

● ಶ್ರೀಧರ್‌ ಆರ್‌.ಭಟ್

ಟಾಪ್ ನ್ಯೂಸ್

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.