ಮಹಿಳಾ ದಸರಾದಲ್ಲಿ ಚಪ್ಪಾಳೆ ಗಿಟ್ಟಿಸಿದ ಮಕ್ಕಳು
Team Udayavani, Sep 25, 2017, 1:13 PM IST
ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ನಡೆಯುತ್ತಿರುವ ಮಹಿಳಾ ದಸರೆಯಲ್ಲಿ ಭಾನುವಾರ ಮಹಿಳೆಯರ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ಜೋರಾಗಿತ್ತು. ನಗರದ ಜೆ.ಕೆ.ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರೆಯ 3ನೇ ದಿನದಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳು ನೃತ್ಯ ಕಾರ್ಯಕ್ರಮದ ಮೂಲಕ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ನಂದ ನಂದ ನಾ ಕೇಳು ಶ್ರೀಕಷ್ಣ, ಮುಸ್ಸಂಜೆ ಮಾತಲ್ಲಿ ಮನಸ್ಸುಗಳು ಬೆರೆಯಲಿ ಎಂಬಿತ್ಯಾದಿ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ನೆರೆದಿದ್ದವರ ಚಪ್ಪಾಳೆ ಗಿಟ್ಟಿಸಿಕೊಂಡರು. ಬೆಳಗ್ಗೆ 10.30ರಿಂದಲೇ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳ ನೃತ್ಯ ಹಾಗೂ ಸಂಗೀತದ ಆಕರ್ಷಣೆ ಜೋರಾಗಿತ್ತು.
ಸ್ವಯಂ ಸೇವಾ ಸಂಸ್ಥೆಗಳಾದ ವಿ-ಲೀಡ್ ಸಂಸ್ಥೆ, ಸುರûಾ ಟ್ರಸ್ಟ್, ಕಲಾಧಾರೆ ಕಲ್ಚರಲ್ ಟ್ರಸ್ಟ್ನ 60ಕ್ಕೂ ಹೆಚ್ಚು ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಇದಕ್ಕೂ ಮುನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಉದ್ಘಾಟಿಸಿದರು.
ಮಹಿಳಾ ದಸರಾ ಅಧ್ಯಕ್ಷೆ ಲತಾ ಮೋಹನ್, ಉಪಾಧ್ಯಕ್ಷೆ ಸುಶೀಲ ಮರೀಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೆ.ರಾಧಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ