ಸಿನಿಮಾ ಪ್ರಭಾವಶಾಲಿ ಮಾಧ್ಯಮ: ನಾಗತಿಹಳ್ಳಿ

ದಸರಾ ವಿಶೇಷವಾಗಿ ಹಲವಾರು ವೇದಿಕೆಗಳು ಸಿದ್ಧಗೊಳ್ಳುತ್ತದೆ.

Team Udayavani, Sep 23, 2022, 6:19 PM IST

ಸಿನಿಮಾ ಪ್ರಭಾವಶಾಲಿ ಮಾಧ್ಯಮ: ನಾಗತಿಹಳ್ಳಿ

ಮೈಸೂರು: ಸಿನಿಮಾ ಸಾವಿರಾರು ವರ್ಷಗಳಿಂದ ಬೆಳೆದು ಬಂದಿದ್ದ ಸಂಗೀತ, ಸಾಹಿತ್ಯ, ನಾಟಕಗಳನ್ನು ಮೊಸಕುಗೊಳಿಸಿ ಅದರ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮವಾಗಿದೆ ಎಂದು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅಭಿಪ್ರಾಯಪಟ್ಟರು.

ಮಾನಸಗಂಗೋತ್ರಿ ಆವರಣದಲ್ಲಿನ ರಾಣಿ ಬಹದ್ದೂರ್‌ ಸಭಾಂಗಣದಲ್ಲಿ ಗುರುವಾರ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ ಆಯೋಜಿಸಿದ್ದ ಚಿತ್ರ ನಿರ್ಮಾಣ ಪೂರ್ವ ತಯಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಎಂಬುದು ಇಂದು ಎಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ಸಾವಿರಾರು ವರ್ಷಗಳಿಂದ ಬಂದಿದ್ದ ಸಂಗೀತ, ಸಾಹಿತ್ಯ, ನಾಟಕಗಳನ್ನು ಮೊಸಕುಗೊಳಿಸಿ ಅದರ ಮೇಲೆ ನಿಂತು ವಿಜೃಂಭಿಸುತ್ತಿರುವ ಒಂದು ಪ್ರಭಾವಶಾಲಿ ಮಾಧ್ಯಮವಾಗಿದೆ. ಅದರ ಭಾಗವಾಗಿ ವೆಬ್‌ ಸಿರೀಸ್‌, ಡ್ಯಾಕುಮೆಂಟರಿ, ಕಿರುಚಿತ್ರಗಳಿವೆ. ಇವುಗಳಲ್ಲಿ ನೀವು ತೊಡಗಿಸಿಕೊಳ್ಳಲು ಹಾಗೂ ಬೆಳೆಯಲು ಸಾಕಷ್ಟು
ಅವಕಾಶಗಳಿವೆ ಅಷ್ಟೇ ಕಠಿಣವಾದ ಸ್ಪರ್ಧೆ ಇದೆ. ಹೀಗಾಗಿ ಇದರಲ್ಲಿ ಯಶಸ್ಸು ಪಡೆಯಲು ಬಯಸುವವರು ಶ್ರಮ ಪಡಬೇಕು ಎಂದು ತಿಳಿ ಹೇಳಿದರು.

ಸಿನಿಮಾಕ್ಕೆ ಅದರದ್ದೇ ಆದ ವ್ಯಾಕರಣ ಹಾಗೂ ಮಾನದಂಡಗಳಿವೆ. ಇಂತಹ ಕಡೆಗೆ ತರುಣ ವಿದ್ಯಾರ್ಥಿಗಳು, ಆಸಕ್ತರು ಗಮನ ಹರಿಸಬೇಕು. ಸಿನಿಮಾ ಎಂಬುದು ಸಾಹಿತ್ಯ, ಸಂಗೀತ, ನೃತ್ಯ, ಶಿಲ್ಪಕಲೆ ಹಾಗೂ ಚಿತ್ರಕಲೆಗಳಿಗಿಂತ ತುಂಬಾ ಭಿನ್ನವಾದದ್ದು. ಇದೊಂದು ಬಹುಪ್ರತಿಭೆಗಳನ್ನು ಬೆಳಕಿಗೆ ತರುವ ಮಾಧ್ಯಮವಾಗಿದೆ ಎಂದು ಹೇಳಿದರು.

ಸಿನಿಮಾ ತಯಾರಿ ಕಲಿಕೆಗಳಿಗಾಗಿಯೇ ಬೆಂಗಳೂರಿನಲ್ಲಿ ಒಂದು ಪುಟ್ಟ ಸಿನಿಮಾ ಶಾಲೆಯನ್ನು ನಡೆಸುತ್ತೆನೆ. ಇದರ ಕಷ್ಟನಷ್ಟಗಳ ಬಗ್ಗೆ ನನಗೆ ಅರಿವಿದೆ. ನಿಶಂಶಯವಾಗಿ ಕಲಿಕೆಯನ್ನು 3 ದಿನಗಳಲ್ಲಿ ಕಲಿಯಲು ಸಾಧ್ಯವಿಲ್ಲ. ದಸರಾ ವಿಶೇಷವಾಗಿ ಹಲವಾರು ವೇದಿಕೆಗಳು ಸಿದ್ಧಗೊಳ್ಳುತ್ತದೆ.

ಅಂತಹ ವೇದಿಕೆಗಳನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಇಲ್ಲಿಗೆ ಬಂದರೆ ಯಾರೇ ಆಗಲಿ ಬರಿ ಕೈಯಲ್ಲಿ ಹೋಗ ಬಾರದು. ಏನನ್ನಾದರೂ ಕಲಿತು ಹಾಗೂ ಪಡೆದುಕೊಂಡು ಹೋಗಬೇಕು. ಕಾರಣ ಅರಿವು ಎಂದು ತುಂಬಾ ಮುಖ್ಯ. ಪ್ರತಿಭೆಯು ವ್ಯಕ್ತಿಗತವಾದದ್ದು, ಇದನ್ನು ಯಾರು ಹೇಳಿಕೊಡಲು ಸಾಧ್ಯವಿಲ್ಲ. ಹೀಗಾಗಿ ಪ್ರತಿಭೆಯನ್ನು ಆಸಕ್ತಿಯಿಂದ ಕಲಿಯಬೇಕು ಹಾಗೂ ಸಮಾಜದ ಜೊತೆ ಒಡನಾಟವಿಟ್ಟುಕೊಳ್ಳುವುದರಿಂದ ಪ್ರತಿಭೆಯನ್ನು ಮೊನಚುಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್‌.ಶೇಷ ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್‌ ಕುಮಾರ್‌ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪ ಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್‌, ನಿರ್ದೇಶಕರಾದ ಮಂಸೋರೆ, ಪ್ರವೀಣ್‌ ಕೃಪಾಕರ್‌ ಇದ್ದರು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.