ನಸುಕಿನಲ್ಲೇ ಆಧಾರ್‌ ಕೇಂದ್ರ ಸುತ್ತ ಜನಸಂದಣಿ!


Team Udayavani, Jul 3, 2019, 3:00 AM IST

nasuki

ಎಚ್‌.ಡಿ.ಕೋಟೆ: ಅಧಾರ್‌ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿಗಾಗಿ ಪಟ್ಟಣದ ಅಂಚೆ ಕಚೇರಿಯ ಮುಂಭಾಗ ಪ್ರತಿದಿನವೂ ಬೆಳಗಿನ ಜಾವವೇ ಸಹಸ್ರಾರು ಮಂದಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೆಚ್ಚುವರಿ ಕೌಂಟರ್‌ ತೆರೆದು ಆಧಾರ್‌ ನೋಂದಣಿಗೆ ಅವಕಾಶ ಮಾಡಿಕೊಡಬೇಕಾಗಿದೆ.

ಆಧಾರ್‌ ತಿದ್ದುಪಡಿಗಾಗಿ ಅಂಚೆ ಕಚೇರಿಯಲ್ಲಿ ಎಲ್ಲರಿಗೂ ಟೋಕನ್‌ ವಿತರಿಸಲು ಅಂಚೆ ಕಚೇರಿಯ ಬಾಗಿಲು ತೆರೆಯಲು ಸಿಬ್ಬಂದಿ ಬೆಳಗ್ಗೆ 9 ಗಂಟೆಗೆ ಆಗಮಿಸುವಷ್ಟರಲ್ಲಿ ಟೋಕನ್‌ಗಾಗಿ ನಿಂತಿದ್ದ ಕ್ಯೂ ಹನುಮಂತನ ಬಾಲದಂತೆ ಬೆಳೆದು ದಿನಲೂ ಸುಮಾರು 300 ಮೀಟರ್‌ ನಷ್ಟು ಉದ್ದದ ಕ್ಯೂನಲ್ಲಿ ಜನರು ಜಮಾವಣೆಗೊಳ್ಳುತ್ತಿದ್ದಾರೆ.

ಸಂಚಾರ ವ್ಯತ್ಯಯ: ಪಟ್ಟಣದ ಮೊದಲ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಜನರು ಜಮಾವಣೆಗೊಳ್ಳುವುದರಿಂದ ಶಾಲಾ ವಾಹನಗಳು ಮತ್ತು ಸಾರಿಗೆ ಬಸ್‌ ಸಂಚರಿಸಲು ಹರಸಾಹಸ ಪಡುವಂತಾಗಿದೆ. ಟೋಕನ್‌ಗಾಗಿ ಬಂದವರ ದ್ವಿಚಕ್ರ ವಾಹನಗಳು ರಸ್ತೆಯುದ್ದಕ್ಕೂ ಗಂಟಗಟ್ಟಲೇ ನಿಲ್ಲುವುದರಿಂದ ಈ ಭಾಗದ ಶಾಲೆಗಳಿಗೆ ಬರುವ ಶಾಲೆಗಳ ಮಕ್ಕಳು ಹಾಗೂ ಪಾದಚಾರಿಗಳು ರಸ್ತೆ ಮಧ್ಯೆಯೇ ಸಂಚಾರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಮಕ್ಕಳ ಜತೆ ಆಗಮನ: ಇನ್ನೂ ಅಂಚೆ ಕಚೇರಿಯ ಆಧಾರ್‌ ಕೇಂದ್ರದಲ್ಲಿ ಪ್ರತಿದಿನ ಕ್ಯೂನಲ್ಲಿ ನಿಲ್ಲವ ಎಲ್ಲರಿಗೂ ಒಂದೇ ದಿನ ಟೋಕನ್‌ಗಳನ್ನು ನೀಡದೆ ದಿನಾಂಕಗಳನ್ನು ನಿಗದಿ ಮಾಡಿ ಟೋಕನ್‌ ವಿತರಿಸುತ್ತಿದ್ದಾರೆ. ಅದರೂ ತಾಲೂಕಿನ ವಿವಿಧ ಗ್ರಾಮಗಳ ಜನರು ದೈನಂದಿನ ಕೆಲಸ ಕಾರ್ಯಕ್ಕೂ ತೆರಳದೆ, ಮುಂಜಾನೆಯೇ ಬಂದು ಪಟ್ಟಣದ ಅಂಚೆ ಕಚೇರಿಯ ಮುಂಭಾಗ ಮಕ್ಕಳ ಜೊತೆಗೆ ಬಂದು ನಿಲ್ಲುತ್ತಿದ್ದಾರೆ.

ದಿನಕ್ಕೆ ಕನಿಷ್ಠ ನೋಂದಣಿ: ಆಗಸ್ಟ್‌ ತಿಂಗಳ ಅಂತ್ಯದವರೆಗೂ ದಿನಾಂಕವನ್ನು ಬರೆದು ಟೋಕನ್‌ಗಳನ್ನು ಈಗಾಗಲೇ ವಿತರಿಸಿದ್ದಾರೆ. ಅದರೂ ಇಲ್ಲಿ ಪ್ರತಿ ದಿನ ಕೇವಲ 15 ರಿಂದ 20 ಜನರಿಗೆ ಮಾತ್ರ ನೋಂದಣಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ತಾಲೂಕಿನ ಜನರು ತಾಲೂಕು ಆಡಳಿತ ಮತ್ತು ಇಲ್ಲಿನ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಸಾಮಾನ್ಯವಾಗಿದೆ.

ಇನ್ನಾದರೂ ಕ್ಷೇತ್ರದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಆಧಾರ್‌ ತಿದ್ದುಪಡಿ ಹಾಗೂ ನೋಂದಣಿಗೆ ಹೆಚ್ಚುವರಿ ಕೌಂಟರ್‌ಗಳ‌ನ್ನು ತೆರೆದು ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಾರ್ವಜನಿಕರ ಒತ್ತಾಯದಂತೆ ಇಲ್ಲಿ ಜಮಾಯಿಸಿರುವ ಜನರಿಗೆ ಟೋಕನ್‌ ವಿತರಿಸಿದ್ದೇವೆ. ಪ್ರತಿದಿನವೂ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ನೋಂದಣಿ ಮತ್ತು ತಿದ್ದುಪಡಿ ಮಾಡಲು ಕ್ರಮ ವಹಿಸುತ್ತೇವೆ. ಇನ್ನುಳಿದವರು ಟೋಕನ್‌ನಲ್ಲಿ ನಮೂದಿಸಿರುವ ದಿನಾಂಕದ ದಿನದಂದು ಬರಬೇಕು.
-ಶ್ರೀಕಾಂತ್‌, ಅಂಚೆ ಕಚೇರಿ ವ್ಯವಸ್ಥಾಪಕ

ತಾಲೂಕು ಕೇಂದ್ರದಲ್ಲಿ ಆಧಾರ್‌ ಮೇಳವನ್ನು ನಡೆಸಿ ತಾಲೂಕಿನ ಸಾಕಷ್ಟು ಜನರು ಒಂದೇ ಬಾರಿಗೆ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇನೆ.
-ಮಂಜುನಾಥ್‌, ತಹಶೀಲ್ದಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.