ಮೃಗಾಲಯಗಳ ನಿರ್ವಹಣೆ ಹಣ ನೀಡಲು ಸಿಎಂ ಸಮ್ಮತಿ


Team Udayavani, Apr 29, 2021, 3:21 PM IST

SCCM agreed to pay for the maintenance of the zoo

ಮೈಸೂರು: ಮೃಗಾಲಯಗಳ ನಿರ್ವಹಣೆ ಹಾಗೂ ಖರ್ಚು-ವೆಚ್ಚಗಳಿಗೆ ಹಣ ಮಂಜೂರು ಮಾಡಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌.ಆರ್‌.ಮಹದೇವಸ್ವಾಮಿ ತಿಳಿಸಿದರು.

ಮೈಸೂರಿನ ಚಾಮರಾಜೇಂದ್ರ ಮೃಗಾಲಯ ಸಭಾಂಗಣದಲ್ಲಿ ಬುಧವಾರ ಆನ್‌ಲೈನ್‌ ವೇದಿಕೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ ಆಡಳಿತ ಮಂಡಳಿಸಭೆಯಲ್ಲಿ ಮಾತನಾಡಿದ ಅವರು, ಎಲ್ಲಮೃಗಾಲಯಗಳ ನಿರ್ವಹಣೆಗೆ 17 ಕೋಟಿ ರೂ.ಹಣ ಮಂಜೂರು ಮಾಡಲು ಸಿಎಂ ಸಮ್ಮತಿಸಿದ್ದು,ಶೀಘ್ರವೇ ಹಣ ಮಂಜೂರಾಗಲಿದೆ ಎಂದರು.

ಬಳಿಕ ನಡೆದ ಆಡಳಿತ ಮಂಡಳಿ ಸಭೆಯಲ್ಲಿ2021 -22ನೇ ಸಾಲಿನ ಮೃಗಾಲಯ ಪ್ರಾಧಿಕಾರದ ಆದಾಯ ಮತ್ತು ವೆಚ್ಚಗಳ ಅಂದಾಜು ಬಜೆಟ್‌ ಅನುಮೋದನೆ ನೀಡುವುದು, ಗದಗ ಮತ್ತು ಹಂಪಿ ಮೃಗಾಲಯಗಳ ಪ್ರಾಣಿ-ಪಕ್ಷಿಗಳಿಗೆ ಚಿಕಿತ್ಸೆ ನೀಡುವ ಬಗ್ಗೆ ಅಗತ್ಯವಾದ ವೈದ್ಯಕೀಯ ಉಪಕರಣ ಖರೀದಿಸಿ, ಮೃಗಾಲಯಗಳಿಗೆ ನೀಡಿರುವ ಕಾರ್ಯಕ್ಕೆ ಘಟನೋತ್ತರ ಮಂಜೂರಾತಿ ನೀಡುವ ಸಂಬಂಧಸಭೆಯಲ್ಲಿ ಚರ್ಚಿಸಲಾಯಿತು.

ಕೋವಿಡ್‌ ಹಿನ್ನೆಲೆ ಪ್ರವಾಸಿಗರ ಹಿತದೃಷ್ಟಿಯಿಂದ ಇಳಿಸಿದ್ದ ಬ್ಯಾಟರಿ ಚಾಲಿತ ವಾಹನ ದರಗಳನ್ನು ಪರಿಷ್ಕರಿಸಲು ಅನುಮೋದನೆ ನೀಡುವುದು, ಮೈಸೂರು ಮೃಗಾಲಯದ ನೇರ ಗುತ್ತಿಗೆ ನೌಕರರಿಗೆ ಮಾಡಿಸಿರುವ ಗ್ರೂಪ್‌ ಗ್ರಾಜುಟಿ ಸ್ಕೀಮ್‌ ನವೀಕರಣಮಾಡುವುದು, ಕಾರಂಜಿ ಕೆರೆ ದೋಣಿ ವಿಹಾರಗುತ್ತಿಗೆ ಅವಧಿ ವಿಸ್ತರಣೆ, ಮೈಸೂರು ಮೃಗಾಲಯದಪ್ರವೇಶ ಟಿಕೆಟ್‌ ಮತ್ತು ವಿದ್ಯಾರ್ಥಿಗಳ ರಿಯಾಯಿತಿ ಟಿಕೆಟ್‌ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನದ ಪ್ರವೇಶ ಟಿಕೆಟ್‌ ದರಗಳನ್ನು ಪರಿಷ್ಕರಿಸಲು ಅನುಮೋದನೆ ನೀಡುವ ಸಂಬಂಧ ಪ್ರಾಧಿಕಾರದ ಸದಸ್ಯರು ಹಾಗೂ ಅಧಿಕಾರಿಗಳು ವಿಷಯ ಪ್ರಸ್ತಾಪಿಸಿಚರ್ಚೆ ನಡೆಸಿದರು.

ಶೀಘ್ರವೇ ಒರಾಂಗುಟನ್‌: ಪ್ರಾಣಿ ವಿನಿಮಯದಡಿ 02 ಒರಾಂಗುಟನ್‌ಗಳನ್ನು ಸಿಂಗಾಪುರ್‌ ಮೃಗಾಲಯದಿಂದ ಮೈಸೂರು ಮೃಗಾಲಯಕ್ಕೆತರಲು ಸಭೆಯಲ್ಲಿ ಚರ್ಚಿಸಿ ಒಪ್ಪಿಗೆಪಡೆಯಲಾಯಿತು. ಜೊತೆಗೆ ಅವುಗಳ ಸಾಕಾಣಿಕೆ ಬಗ್ಗೆ ತರಬೇತಿ ಪಡೆಯಲು ಪಶುವೈದ್ಯಾಧಿಕಾರಿ ಡಾ.ಕೆ.ವಿ. ಮದನ್‌ ಸಿಂಗಾಪುರ ಮೃಗಾಲಯಕ್ಕೆ ಭೇಟಿ ನೀಡಲು ಅನುಮತಿ ನೀಡಲಾಯಿತು.ಕೇಂದ್ರ ಮೃಗಾಲಯ ಪ್ರಾಧಿಕಾರದ 10 ವರ್ಷವಿಶನ್‌ ಪ್ಲಾನ್‌ ಅಡಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರು ಮೃಗಾಲಯವನ್ನುಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ಮೃಗಾಲಯ ಹಾಗೂ ಕೆನಡಾದ ಟೊರೆಂಟೊ ಮೃಗಾಲಯ ನಡುವಿನ ಸಹಭಾಗಿತ್ವಕ್ಕೆ ಅನುಮೋದನೆ ನೀಡುವ ಸಂಬಂಧ ಚರ್ಚೆ ನಡೆಸಲಾಯಿತು.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಫಾರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ವಿಶೇಷ ಸಫಾರಿಗಾಗಿ ವಾಹನಗಳನ್ನು ಖರೀದಿಸುವುದು, ಉದ್ಯಾನವನದ ಪ್ರಾಣಿ-ಪಕ್ಷಿಗಳಿಗೆ ಹಾಗೂ ಪ್ರವಾಸಿಗರಿಗೆಅನುಕೂಲವಾಗುವಂತೆ ಕಾವೇರಿ ನೀರನ್ನು ಒದಗಿಸುವ ಸಲುವಾಗಿ ಪ್ರತ್ಯೇಕ ಕೊಳವೆ ಅಳವಡಿಸುವ ಕಾಮಗಾರಿ ಕುರಿತು, ಗದಗಮೃಗಾಲಯದ ವಾಹನ ನಿಲ್ದಾಣ ಹಾಗೂಉಪಾಹಾರ ಗೃಹದ ಬಾಡಿಗೆ ಮೊತ್ತವನ್ನುಪಾವತಿಸುವ ಬಗ್ಗೆ ಚರ್ಚೆ ನಡೆಸಲಾಯಿತು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.