Karnataka Polls ಶೆಟ್ಟರ್ ದುರ್ಜನರ ಸಂಗ ಮಾಡಿದ್ದಾರೆ: ಸಿಎಂ ಬೊಮ್ಮಾಯಿ ಕಿಡಿ
Team Udayavani, Apr 17, 2023, 1:36 PM IST
ಮೈಸೂರು: ಜಗದೀಶ್ ಶೆಟ್ಟರ್ ಇಷ್ಟು ದಿನ ಸಜ್ಜನರ ಸಂಗದಲ್ಲಿದ್ದರು. ಈಗ ದುರ್ಜನರ ಸಂಗ ಮಾಡಿದ್ದಾರೆ. ಬಸವಣ್ಣ ದುರ್ಜನ ಸಂಗ ಮಾಡಬೇಡಿ ಎಂದು ಹೇಳಿದ್ದರು. ಇದನ್ನ ಎಲ್ಲರೂ ನೆನಪಿಟ್ಟುಕೊಳ್ಳಿ. ನಾನು ಶೆಟ್ಟರ್ ಬಲಿಪಶು ಆಗುತ್ತಿದ್ದಾರೆ ಎಂಬ ಪದ ಬಳಸುವುದಿಲ್ಲ. ಆದರೆ ಅವರು ಈಗ ಮಾಡಿರುವ ಸಂಗ ಸರಿಯಿಲ್ಲ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತದೆ. ಶೆಟ್ಟರ್ ರಾಜೀನಾಮೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ ಎಂದರು.
ವರುಣ ಕ್ಷೇತ್ರದಲ್ಲಿ ಫೈಟ್ ಬಹಳ ಬಿಗಿಯಾಗಿದೆ. ನಾವು ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕಾರಣಕ್ಕೆ ನಾವು ಸೋಮಣ್ಣನಂತಹ ನಾಯಕನನ್ನು ಅಲ್ಲಿ ಕಣಕ್ಕಿಳಿಸಿದ್ದೇವೆ. ರಾಜ್ಯ ಹಾಗೂ ರಾಷ್ಟ್ರ ನಾಯಕರು ಪ್ರಚಾರಕ್ಕೆ ಬರುತ್ತಾರೆ. ಮೋದಿ ಅವರ ಚುನಾವಣಾ ಪ್ರಚಾರದ ದಿನಾಂಕಗಳು ಇನ್ನೂ ನಿಗದಿಯಾಗಿಲ್ಲ. ಬಹುತೇಕ ನಾಮಪತ್ರ ಪ್ರಕ್ರಿಯೆ ಮುಗಿದ ಮೇಲೆ ದಿನಾಂಕಗಳು ನಿರ್ಧಾರವಾಗುತ್ತದೆ ಎಂದರು.
ಇದನ್ನೂ ಓದಿ:ಅರ್ಜುನ್ ಜನ್ಯ ನಿರ್ದೇಶನದಲ್ಲಿ ‘ರೋಸಿ 45’: ಯೋಗಿಗೆ ಸಿಗಲ್ವಾ ‘ರೋಸಿ’ ಟೈಟಲ್
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಬಹಳವಿತ್ತು. 60 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅವರಿಗೆ ಅಭ್ಯರ್ಥಿಗಳೇ ಇರಲಿಲ್ಲ. ಮೊದಲ ಪಟ್ಟಿಯನ್ನು ಮಾತ್ರ ವೀರಾವೇಶದಿಂದ ಬಿಡುಗಡೆ ಮಾಡಿದರು. ಈಗ ಅವರ ಸ್ಥಿತಿ ಗೊತ್ತಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ