ನಿನ್ನೆ ಉಗ್ರಗಾಮಿ ಹೇಳಿಕೆ; ಇಂದು ಪದೇ, ಪದೇ ಉಲ್ಟಾ ಹೊಡೆದ ಸಿಎಂ!
Team Udayavani, Jan 11, 2018, 1:30 PM IST
ಮೈಸೂರು/ಎಚ್.ಡಿ.ಕೋಟೆ:ಬಿಜೆಪಿ, ಆರ್ ಎಸ್ ಎಸ್ ಹಾಗೂ ಬಜರಂಗದಳ ಒಂಥರ ಉಗ್ರಗಾಮಿಗಳೇ ಎಂದು ನೀಡಿರುವ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ, ಪದೇ ಹೇಳಿಕೆಯನ್ನು ಬದಲಿಸುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರು ಉಗ್ರಗಾಮಿ ಎಂಬ ಹೇಳಿಕೆ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ ಕುರಿತು ಪ್ರಶ್ನಿಸಿದಾಗ, ನಾನು ಉಗ್ರಗಾಮಿ ಸಂಘಟನೆ ಎಂದು ಹೇಳಿಲ್ಲ. ಬಿಜೆಪಿಯವರು ಹಿಂದುತ್ವದ ಉಗ್ರವಾದಿಗಳು ಎಂದು ಹೇಳಿರುವುದಾಗಿ ಸಮಜಾಯಿಷಿ ನೀಡಿದರು.
ಬಳಿಕ ಎಚ್ ಡಿ ಕೋಟೆ ಸರಗೂರಿನಲ್ಲಿಯೂ ಪತ್ರಕರ್ತರು ಪ್ರಶ್ನಿಸಿದಾಗ, ಆರ್ ಎಸ್ ಎಸ್ ಉಗ್ರಗಾಮಿ ಸಂಘಟನೆ ಎಂದು ಹೇಳಿಲ್ಲ, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ಳಬೇಕು. ಆರ್ ಎಸ್ ಎಸ್ ಉಗ್ರವಾದಿ ಎಂದು ಹೇಳಿದ್ದೆ.
ನಾನು ಹಿಂದೂವೇ, ಆದರೆ ಮನುಷ್ಯತ್ವ ಇರುವ ಹಿಂದು. ಕೆಲವರಿಗೆ ಮನುಷ್ಯತ್ವವೇ ಇಲ್ಲ. ಆದ್ರೆ ಹಿಂದೂ ಸಂಘಟನೆಯಲ್ಲಿರುವವರ ರೀತಿ ರಾಕ್ಷಸಿ ಪ್ರವೃತ್ತಿಯವರಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ