ಸಹಕಾರ ಸಂಘಗಳು ಸರ್ವರ ಉದ್ಧಾರದ ಸಂಜೀವಿನಿ


Team Udayavani, Sep 26, 2019, 3:00 AM IST

sahakara-sang

ಕೆ.ಆರ್‌.ನಗರ: ಸಹಕಾರ ಸಂಘಗಳಲ್ಲಿ ಕೆಲಸ ನಿರ್ವಹಿಸುವವರು ವೈಮನಸ್ಸು ಮರೆತು ಅಭಿವೃದ್ಧಿ ಮತ್ತು ಸಂಘಟನೆಯನ್ನು ಪ್ರಮುಖವಾಗಿ ಪರಿಗಣಿಸಿ ದುಡಿಯಬೇಕು ಎಂದು ಪಟ್ಟಣದ ಕಾಗಿನೆಲೆ ಕನಕ ಗುರುಪೀಠದ ಕಿರಿಯ ಶ್ರೀಗಳಾದ ರೇವಣಸಿದ್ದೇಶ್ವರ ಸ್ವಾಮೀಜಿ ಸಲಹೆ ನೀಡಿದರು.

ಪಟ್ಟಣದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಮತನಾಡಿದ ಅವರು, ಸಹಕಾರ ಸಂಘಗಳು ಸರ್ವರ ಉದ್ಧಾರದ ಸಂಜೀವಿನಿಯಾಗಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡರೆ ಆರ್ಥಿಕವಾಗಿ ಸದೃಢರಾಗಬಹುದು ಎಂದು ಹೇಳಿದರು.

ಆರ್ಥಿಕವಾಗಿ ಸಬಲರಾಗಿರುವವರು ಸಹಕಾರ ಸಂಘಗಳಲ್ಲಿ ಠೇವಣಿ ಇಟ್ಟರೆ ಆ ಹಣವು ಸಂಘದ ಸದಸ್ಯರು ಮತ್ತು ವ್ಯವಹಾರ ಮಾಡುವವರಿಗೆ ಅನುಕೂಲವಾಗಲಿದ್ದು, ಈ ವಿಚಾರದಲ್ಲಿ ಹಣವಂತರು ಚಿಂತಿಸಬೇಕು ಎಂದು ಸಲಹೆ ನೀಡಿದ ಶ್ರೀಗಳು, ಸಂಘಟನೆಯಿಂದ ಎಲ್ಲವೂ ಸಾಧ್ಯವಾಗಲಿದೆ ಎಂದರು.

ತಾಲೂಕು ಮಟ್ಟದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿ ಹೆಸರು ಗಳಿಸಿರುವ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿಯೂ ತನ್ನ ಶಾಖೆಗಳನ್ನು ಆರಂಭಿಸಿ ಒಳ್ಳೆಯ ಹೆಸರು ಮಾಡಲಿ ಎಂದು ಶುಭ ಹಾರೈಸಿದ ರೇವಣಸಿದ್ದೇಶ್ವರಸ್ವಾಮಿಗಳು ಸಂಘದ ಏಳಿಗೆಗೆ ತಾವೂ ಸಹಾಯ ಮತ್ತು ಸಹಕಾರ ನೀಡುವುದಾಗಿ ಘೋಷಿಸಿದರು.

ಸಂಘದ ಅಧ್ಯಕ್ಷ ಕೆ.ಹೆಚ್‌.ಕೃಷ್ಣೇಗೌಡ ಮಾತನಾಡಿ, ಕಳೆದ ಎರಡು ವರ್ಷಗಳ ಹಿಂದೆ ಆರಂಭವಾದ ಸಂಘವು ಸರ್ವ ಸದಸ್ಯರ ಪರವಾಗಿ ಕೆಲಸ ಮಾಡುತ್ತಿದ್ದು, ಉತ್ತಮ ಆದಾಯದ ನಿರೀಕ್ಷೆಯಲ್ಲಿದೆ ಎಂದು ತಿಳಿಸಿದರು. ಜಿಪಂ ಸದಸ್ಯ ಡಿ.ರವಿಶಂಕರ್‌, ಕಾಂಗ್ರೆಸ್‌ ಮುಖಂಡರಾದ ಐಶ್ವರ್ಯಮಹದೇವ್‌ ಮಾತನಾಡಿ, ಸಂಘದ ಏಳಿಗೆ ಮತ್ತು ಉನ್ನತಿಗೆ ಪರಸ್ಪರ ಸಹಕಾರ ಅಗತ್ಯವಿದ್ದು, ಆಡಳಿತ ಮಂಡಳಿ ಮತ್ತು ಸದಸ್ಯರು ಇದನ್ನು ಮನಗಂಡು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಪಂ ಮಾಜಿ ಸದಸ್ಯ ಜಿ.ಆರ್‌.ರಾಮೇಗೌಡ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್‌.ಎಂ.ಮಾಲೇಗೌಡ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಸಂಘದ ಉಪಾಧ್ಯಕ್ಷ ನಟರಾಜು, ನಿರ್ದೇಶಕರಾದ ರವಿ, ಜಿ.ಎಂ.ಲೋಹಿತ್‌, ಜೆ.ಮಂಜುನಾಥ್‌, ಎಂ.ಎಸ್‌.ಹರೀಶ್‌, ಕುಮಾರ, ಕೆ.ಎನ್‌.ಪ್ರಸನ್ನಕುಮಾರ, ಪ್ರೇಮಕುಮಾರ, ಮುಬೀನಾಬಾನು, ಮಂಜುಳ, ಮಹೇಶ್‌ಗೌಡ, ಕೆ.ಬಿ.ಭಾಸ್ಕರ, ಎಸ್‌.ಎಂ.ಯೋಗೇಶ್‌, ಪಿ.ಎಸ್‌.ದೇವರಾಜು, ಸಿಇಒ ಕೆ.ಎಸ್‌.ಕೃಷ್ಣಪ್ರಸಾದ್‌ ಸೇರಿದಂತೆ ಷೇರುದಾರ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.