ಪ್ರತಿ ಗ್ರಾಮದಲ್ಲೂ ಸಹಪಂಕ್ತಿ ಭೋಜನ ನಡೆಯಲಿ


Team Udayavani, May 9, 2019, 3:00 AM IST

prati

ಹುಣಸೂರು: ಸಾಮಾಜಿಕ ಕ್ರಾಂತಿ ಹರಿಕಾರ ಬಸವಣ್ಣನ ಜಯಂತಿ ಅಂಗವಾಗಿ ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಸಹ ಪಂಕ್ತಿ ಭೋಜನ ನಡೆಯಿತು.

ಗ್ರಾಮದ ಆದಿಜಾಂಬವ ಸಮುದಾಯದ ಆಂಜನೇಯರ ಮನೆಯಲ್ಲಿ ದಸಂಸ ವತಿಯಿಂದ ಅಯೋಜಿಸಿದ್ದ ಬಸವಜಯಂತಿ ಹಾಗೂ ಸಹಪಂಕ್ತಿ ಭೋಜನದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಮಾತನಾಡಿ, ದೇಶದಲ್ಲಿ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ ತೊಲಗದ ಹೊರತು ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ.

ಈ ನಿಟ್ಟಿನಲ್ಲಿ ಕಟ್ಟೆಮಳಲವಾಡಿಯಲ್ಲಿ ಇಂತಹದ್ದೊಂದು ಅರ್ಥಪೂರ್ಣ ಕಾರ್ಯಕ್ರಮ ನಡೆದಿರುವುದು ಸ್ವಾಗತಾರ್ಹ. ಈ ರೀತಿಯ ಕಾರ್ಯಕ್ರಮ ಪ್ರತಿ ಗ್ರಾಮದಲ್ಲೂ ನಡೆದರೆ ಜಾತೀಯತೆ, ಅಸ್ಪೃಶ್ಯತೆ ತೊಲಗಲು ಸಾಧ್ಯ. ಇಂತಹ ಅನಿಷ್ಟ ಪದ್ಧಗಳ ವಿರುದ್ದ ಧ್ವನಿ ಎತ್ತ ಬೇಕಾದ್ದೂ ನಮ್ಮೆಲ್ಲರ ಆದ್ಯತೆಯಾಗಬೇಕು ಎಂದರು.

ಅಸ್ಪೃಶ್ಯತೆ ವಿರುದ್ಧ ಧ್ವನಿ: ಬ್ರಾಹ್ಮಣ ಸಮಾಜದಲ್ಲಿ ಹುಟ್ಟಿದ ಬಸವಣ್ಣ ಅಂದೇ ಅಸ್ಪೃಶ್ಯತೆ ವಿರುದ್ಧ ತನ್ನದೇ ಆದ ರೀತಿಯಲ್ಲಿ ದೊಡ್ಡ ಸಾಮಾಜಿಕ ಕ್ರಾಂತಿ ನಡೆಸುವ ಮೂಲಕ ಶೋಷಿತರ ಹಾಗೂ ದಲಿತರ ಸಮುದಾಯಗಳ ಜನರ ಬಾಳಿನಲ್ಲಿ ಬೆಳಕು ಚೆಲ್ಲಿದರು ಎಂದು ಸ್ಮರಿಸಿದರು.

ಕಟ್ಟೆಮಳಲವಾಡಿಯ ಬ್ರಾಹ್ಮಣ ಸಮಾಜದ ಯಜಮಾನರಾದ ಕೇಶವಮೂರ್ತಿ, ರಾಮಮೂರ್ತಿ ಮಾತನಾಡಿ, ಅಸ್ಪೃಶ್ಯತೆ ನಿರ್ಮೂಲನೆ ಆಗಬೇಕು. ಎಲ್ಲರೂ ಸಮಾನತೆಯಿಂದ, ಸೋದರತೆಯಿಂದ ಗ್ರಾಮಗಳಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕಟ್ಟೆಮಳಲವಾಡಿ ಯಜಮಾನರಾದ ಕೃಷ್ಣಶೆಟ್ಟಿ, ಅಂಕಯ್ಯ, ಶಂಕ್ರಯ್ಯ, ಪರಸಯ್ಯ, ಗ್ರಾಪಂ ಸದಸ್ಯರಾದ ಆಂಜನೇಯ, ದೇವರಾಜು, ಶಿವು, ಗಾಯತ್ರಿ, ಮುಖಂಡರಾದ ಬಸವಲಿಂಗಯ್ಯ, ಪಿ.ಪುಟ್ಟರಾಜು, ಮುಸ್ಲಿಂ ಸಮಾಜದ ನಸ್ರುಲ್ಲಾಖಾನ್‌, ಅನ್ಸರ್‌, ಅಗ್ರಹಾರದ ಸಾಕಯ್ಯ, ಮುಖಂಡರಾದ ಸಂತೋಷ,

ದೇವೇಂದ್ರ, ಗಜೇಂದ್ರ, ವೆಂಕಟೇಶ, ನಟರಾಜು, ಕಿರಣ, ರಜನಿ, ಗಾರೆ ಕೆಲಸ ಸಂಘದ ಸೋಮಶೇಖರಮೂರ್ತಿ, ಮಹಿಳೆಯರು ಸೇರಿದಂತೆ ಹಲವರು ಸಹಪಂಕ್ತಿ ಭೋಜನ ಮಾಡಿದರು. ಹೊನ್ನೇನಹಳ್ಳಿ ವಸಂತ ಕಲಾ ತಂಡದವರು ಜಾಗೃತಿ ಹಾಡುಹಾಡಿದರು. ಇದೇ ವೇಳೆ 30 ನಿರ್ಗತಿಕ ಮಹಿಳೆಯರಿಗೆ ಬಟ್ಟೆ ವಿತರಿಸಲಾಯಿತು.

ದಲಿತರ ಮನೆಯಲ್ಲಿ ಬಸವ ಜಯಂತಿ: ಕಾರ್ಯಕ್ರಮದ ಆಯೋಜಕ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ್‌ ಮಲ್ಲಾಡಿ ಮಾತನಾಡಿ, ಬಸವಣ್ಣನ ಜಯಂತಿಯನ್ನು ದಲಿತರ ಮನೆಯಲ್ಲಿ ಆಚರಣೆ ಮಾಡುತ್ತಿರುವುದು ದಲಿತ ಸಮಾಜಕ್ಕೆ ಉತ್ತಮ ಸಂದೇಶ ನೀಡಿದಂತಾಗಿದೆ.

ಈ ನಿಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತ ಸಂಘರ್ಷ ಸಮಿತಿಯು ತಾಲೂಕಿನ ಬಿಳಿಗೆರೆ, ಹುಣಸೂರು ನಗರ ಮತ್ತಿತರೆಡೆಗಳಲ್ಲಿ ಸಹ ಪಂಕ್ತಿ ಭೋಜನ ಆಯೋಜಿಸುತ್ತಿದೆ. ಅಸ್ಪೃಶ್ಯತೆಯನ್ನು ಕೇವಲ ಕಾನೂನಿಂದ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ.

ಸಮಾಜದ ಎಲ್ಲಾ ಜಾತಿಯ ಜನರಿಂದ ಈ ಅನಿಷ್ಟ ಪದ್ಧತಿ ತೊಲಗಿಸಲು ಸಾಧ್ಯವಿದೆ. ದಲಿತರು ಇಂದಿಗೂ ಕೆಲ ಗ್ರಾಮಗಳಲ್ಲಿ ದೇವಸ್ಥಾನಗಳಿಗೆ, ಹೋಟೆಲ್‌ಗ‌ಳಿಗೆ, ಕ್ಷೌರದ ಅಂಗಡಿಗಳಲ್ಲಿ ನಿರ್ಬಂಧ ಹೇರಲಾಗಿದೆ. ಇದರ ವಿರುದ್ಧ ಇತರೆ ಸಮಾಜದ ಜನರು ಧ್ವನಿ ಎತ್ತಿ ಸಾಮಾಜಿಕ ನ್ಯಾಯ ಕೊಡಿಸಬೇಕಿದೆ ಎಂದು ಕೋರಿದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.