ಕಾಂಗ್ರೆಸ್ನದ್ದು ಪರಿವಾರವಾದ, ನಮ್ಮದು ರಾಷ್ಟ್ರವಾದ: ನಳಿನ್ ಕುಮಾರ್ ಕಟೀಲ್
Team Udayavani, Sep 12, 2022, 10:52 PM IST
ಮೈಸೂರು: ಕಾಂಗ್ರೆಸ್ನದ್ದು ಪರಿವಾರವಾದ, ನಮ್ಮದು ರಾಷ್ಟ್ರವಾದ. ಹೀಗಾಗಿ ಪರಿವಾರವಾದಕ್ಕೆ ತಿಲಾಂಜಲಿ ಇಟ್ಟು, ಪರಮವೈಭವ ಸ್ಥಿತಿಗೆ ತಾಯಿ ಭಾರತಾಂಬೆಯನ್ನು ತೆಗೆದುಕೊಂಡು ಹೋಗುವುದೇ ನಮ್ಮ ಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಬಿಜೆಪಿ ರಾಜ್ಯ ಅಲ್ಪಸಂಖ್ಯಾಕ ಮೋರ್ಚಾದಿಂದ ನಗರದ ಖಾಸಗಿ ಹೊಟೇಲ್ನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಪ್ರಶಿಕ್ಷಣ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ನಮ್ಮ ಪರಿಕಲ್ಪನೆ. ಸ್ವಾತಂತ್ಯದ ಬಳಿಕ ಭಾರತ ಹೇಗಿರಬೇಕು ಎಂಬ ಪರಿಕಲ್ಪನೆಯನ್ನು ಗಾಂಧೀಜಿ ಕೊಟ್ಟಿದ್ದರು. ಸುದೀರ್ಘ ಅವಧಿಗೆ ಕಾಂಗ್ರೆಸ್ ಆಳಿದರೆ ಮನೆ ಮನೆಗಳಲ್ಲಿ ರಾವಣರು ನಿರ್ಮಾಣವಾಗುತ್ತಾರೆ ಎನ್ನುವುದು ಗಾಂಧೀಜಿಗೆ ಗೊತ್ತಿತ್ತು. ಹೀಗಾಗಿ ರಾಮರ ಅವಶ್ಯವಿದೆ ಎಂದು ಬಯಸಿದ್ದರು. ಆದ್ದರಿಂದ ರಾಜ್ಯದ ಪರಿಕಲ್ಪನೆ ಕೊಟ್ಟರು ಎಂದರು.
ಜನಸಂಘ ಪ್ರಾರಂಭವಾದಾಗ ಯಾವ ವಿಚಾರಧಾರೆ ಸಿದ್ಧಾಂತ ಇದ್ದವೋ ಈಗಲೂ ಇವೆ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಅಧಿಕಾರ ಹಿಡಿದ ಮೇಲೂ ಸಿದ್ಧಾಂತದಲ್ಲಿ ರಾಜಿಯಾಗಿಲ್ಲ. ರಾಜಕಾರಣದ ಸುದೀರ್ಘ ಪಯಣದಲ್ಲಿ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳದ ಏಕೈಕ ಪಕ್ಷವಿದ್ದರೆ ಬಿಜೆಪಿ. ಸಚ್ಚಾರಿತ್ರ್ಯವಂತ ರಾಜಕಾರಣ ಸೃಷ್ಟಿ ನಮ್ಮ ಗುರಿ ಎಂದು ಹೇಳಿದರು.
ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸಯ್ಯದ್ ಸಲಾಂ, ಸಂಸದ ಪ್ರತಾಪ ಸಿಂಹ, ವಿಧಾನಪರಿಷತ್ ಸದಸ್ಯ ರವಿಕುಮಾರ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು