ಹುಣಸೂರಲ್ಲಿ ಒಂದಾದ ಕಾಂಗ್ರೆಸ್‌-ಜೆಡಿಎಸ್‌ ನಾಯಕರು


Team Udayavani, Apr 9, 2019, 3:00 AM IST

hunase

ಹುಣಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ ಪರವಾಗಿ ಹುಣಸೂರಿನಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಜಂಟಿ ಸಭೆ ನಡೆಸುವ ಮೂಲಕ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.

ನಗರದ ಅಕ್ಕಪಕ್ಕದಲ್ಲಿರುವ ಕಾಂಗ್ರೆಸ್‌-ಜೆಡಿಎಸ್‌ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ದೇಶದ ಹಿತದೃಷ್ಟಿಯಿಂದ ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುತ್ತಿವೆ. ಈ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಜಿದ್ದಾಜಿದ್ದಿ ಹೋರಾಟ ನಡೆದಿತ್ತು. ಬದಲಾದ ಪರಿಸ್ಥಿತಿಯಲ್ಲಿ ಒಟ್ಟಾಗಿದ್ದೇವೆ ಎಂದರು.

ಕಾಂಗ್ರೆಸ್‌ ಬೆಂಬಲದಿಂದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಇನ್ನು 4 ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಹಾಗೂ ರಾಹುಲ್‌ಗಾಂಧಿ ಪ್ರಧಾನಿಯಾಗಲೆಂಬ ಆಶಯದೊಂದಿಗೆ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿದ್ದು, ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಕೋರಿದರು.

ವಿಶ್ವನಾಥ್‌ಗೆ ಶಕ್ತಿ ನೀಡಿ: ಶಾಸಕ, ಸಂಸದ, ಮಂತ್ರಿಯಾಗಿ ವಿಜಯಶಂಕರ್‌ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರು ಇಲ್ಲಿಯವರೇ ಆಗಿದ್ದು, ಇಲ್ಲಿಂದ ಅತಿ ಹೆಚ್ಚಿನ ಮತ ಕೊಡಿಸಬೇಕು. ಹಾಗಾದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಶಾಸಕ ವಿಶ್ವನಾಥರಿಗೆ ಹೆಚ್ಚು ಶಕ್ತಿ ಬರಲಿದೆ. ಇಲ್ಲಿನ ಚುನಾವಣಾ ಉಸ್ತುವಾರಿಯನ್ನು ವಿಶ್ವನಾಥ್‌ ಹಾಗೂ ಮಂಜುನಾಥ್‌ ವಹಿಸಲಿದ್ದಾರೆಂದು ಜಿಟಿಡಿ ಪ್ರಕಟಿಸಿದರು.

ತ್ರಿಮೂರ್ತಿಗಳು: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಮಾತನಾಡಿ, ದೇಶದಲ್ಲಿ ಜಾತ್ಯತೀತ ಶಕ್ತಿಗಳು, ಬಹುತ್ವವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಮಹತ್ತರ ಆಶಯದ ಈ ಚುನಾವಣೆಯಲ್ಲಿ ಪರಸ್ಪರ ತ್ಯಾಗಮಾಡಿಕೊಂಡು ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ.

80 ಶಾಸಕರನ್ನು ಹೊಂದಿದ್ದರೂ ಕಾಂಗ್ರೆಸ್‌ ಮುಖ್ಯಮಂತ್ರಿ ಗಾದಿ ಬಿಟ್ಟುಕೊಟ್ಟಿದೆ. ಕುಮಾರಸ್ವಾಮಿ ಮುಖ್ಯಮಂತ್ರಿ, ಡಾ.ಜಿ.ಪರಮೇಶ್ವರ್‌ ಉಪಮುಖ್ಯಮಂತ್ರಿ ಹಾಗೂ ಸಮನ್ವಯಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದು, ಈ ತ್ರಿಮೂರ್ತಿಗಳು ಉತ್ತಮ ರೀತಿಯಲ್ಲಿ ಸರ್ಕಾರ‌ವನ್ನು ಮುನ್ನಡೆಸುತ್ತಿದ್ದಾರೆ ಎಂದರು.

ಮೋದಿಗೆ ರೆಫೇಲ್‌ ಮುಳುಗು: 1989ರಲ್ಲಿ ಕೇವಲ 30 ಕೋಟಿ ರೂ. ಭ್ರಷ್ಟಾಚಾರದ ಆರೋಪದಡಿ ರಾಜೀವಗಾಂಧಿ ಅಧಿಕಾರ ಕಳೆದುಕೊಂಡರೆ, 2019ರಲ್ಲಿ ರೆಫೇಲ್‌ ಯುದ್ದ ವಿಮಾನ ಖರೀದಿ ವ್ಯವಹಾರದಲ್ಲಿ 35 ಸಾವಿರ ಕೋಟಿ ರೂ. ಅವ್ಯವಹಾರದ ಅಡಿಯಲ್ಲಿ ಮೋದಿ ಅಧಿಕಾರ ಕಳೆದುಕೊಳ್ಳುತ್ತಾರೆಂದು ಭವಿಷ್ಯ ನುಡಿದರು.

ಇಲ್ಲಿ ಅಭ್ಯರ್ಥಿ ವಿಜಯಶಂಕರ್‌ ನೆಪಮಾತ್ರ, ವಾಸ್ತವವಾಗಿ ಇದು ನಮ್ಮೆಲ್ಲರ ಚುನಾವಣೆ ಎಂದು ತಿಳಿದು ದುಡಿಯಿರಿ ಎಂದು ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಸಭೆಯಲ್ಲಿ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ಎಸ್ಸಿ, ಎಸ್ಟಿ ಘಟಕದ ಉಪಾಧ್ಯಕ್ಷ ಡಾ.ತಿಮ್ಮಯ್ಯ,

ಜಿಪಂ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಸಾವಿತ್ರಿ, ಸುರೇಂದ್ರ, ಕಟ್ಟನಾಯಕ, ಅಮಿತ್‌ದೇವರಹಟ್ಟಿ, ಮಾಜಿ ಸದಸ್ಯರಾದ ಫಜಲುಲ್ಲಾ, ಪರಮೇಶ್‌, ಬಿಳಿಕೆರೆ ಮಂಜುನಾಥ್‌, ತಾಪಂ ಅಧ್ಯಕ್ಷೆ ಪದ್ಮಮ್ಮ, ಮೈಮುಲ್‌ ನಿರ್ದೇಶಕ ಕುಮಾರ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಮಾದೇಗೌಡ, ಕಾರ್ಯದರ್ಶಿ ಆರ್‌.ಸ್ವಾಮಿ,

ಕಾಂಗ್ರೆಸ್‌ ಅಧ್ಯಕ್ಷರಾದ ನಾರಾಯಣ್‌, ಶಿವಯ್ಯ, ಬಸವರಾಜೇಗೌಡ, ಮಾಜಿ ಅಧ್ಯಕ್ಷ ಅಸ್ವಾಳು ಕೆಂಪೇಗೌಡ, ಮುಖಂಡರಾದ ವಕೀಲರಾಮಕೃಷ್ಣ, ಹಜರತ್‌ಜಾನ್‌, ಬಿಳಿಕೆರೆರಾಜು, ಎ.ಪಿ.ಸ್ವಾಮಿ, ಹರಿಹರ ಆನಂದಸ್ವಾಮಿ, ಬಿ.ಎನ್‌.ಜಯರಾಂ, ಗಣೇಶಗೌಡ ಇತರರಿದ್ದರು.ಹಿಂದೆ ಗುದ್ದಾಡಿದ್ದೇವೆ, ಈಗ ಒಂದಾಗಿದ್ದೇವೆ
ಈ ಚುನಾವಣೆ ನಮಗೆಲ್ಲಾ ಸವಾಲಾಗಿದೆ. ಹಿಂದೆ ತಾಲೂಕಿನಲ್ಲಿ ಎದುರು ಬದುರು ಗುದ್ದಾಡಿ ಒಂದಾಗಿದ್ದೇವೆ. ಎರಡು ಮನಸ್ಸುಗಳು ಒಂದಾಗಿವೆ, ಸಿದ್ದರಾಮಯ್ಯ-ಜಿ.ಟಿ.ದೇವೇಗೌಡರ ಮನಸ್ಸುಗಳೇ ಒಂದಾದ ಮೇಲೆ, ನಾವು-ನೀವು ಒಂದಾಗುವುದರಲ್ಲಿ ತಪ್ಪೇನಿದೆ ಎಂದು ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ಪ್ರಶ್ನಿಸಿದರು. ನಾವೆಲ್ಲ ಮುಂದೆಯೂ ಒಟ್ಟಾಗಿ ಹೋಗೋಣ, ಉಳಿದೆಲ್ಲಿ ವಿಚಾರದಲ್ಲಿ ಮುಂದಿರುವ ಜೆಡಿಎಸ್‌-ಕಾಂಗ್ರೆಸ್‌ ಪ್ರಚಾರದಲ್ಲಿ ಹಿಂದಿದ್ದೇವೆ. ವಿಜಯಶಂಕರ್‌ ತಮ್ಮ ಅವಧಿಯಲ್ಲಿ ಸಾಕಷ್ಟು ಕೆಲಸ ಮಾಡಿದ್ದು, ಅದನ್ನು ಮುಂದಿಟ್ಟು ಕೆಲಸ ಮಾಡೋಣ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.