ರಾಜ್ಯ ಸರ್ಕಾರ ನೀಡುತ್ತಿರುವ ಕೋವಿಡ್ ಪರಿಹಾರಕ್ಕೆ ವ್ಯಂಗ್ಯವಾಡಿದ ಡಿಕೆಶಿ
Team Udayavani, Jun 15, 2021, 6:24 PM IST
ಮೈಸೂರು: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದಕ್ಕೆ ಮೈಸೂರಿನಲ್ಲಿ ನಡೆದ ಐಎಎಸ್ ಅಧಿಕಾರಿಗಳ ಗಲಾಟೆಯೆ ಸಾಕ್ಷಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನಂತಹ ಜಿಲ್ಲೆಯ ಆಡಳಿತವೆ ಕುಸಿದ ಮೇಲೆ ಬೇರೆ ಜಿಲ್ಲೆಯ ಸ್ಥಿತಿ ಹೇಗಿರಬೇಡಾ?. ಈ ಸರ್ಕಾರ ಕುಸಿದಿರುವುದಕ್ಕೆ ಮೈಸೂರಿನ ಘಟನೆ ಪ್ರತಿಬಿಂಬದ ರೀತಿ ಕಾಣುತ್ತಿದೆ ಎಂದರು.
ಸಚಿವರು ಹಾಗೂ ಸಿಎಂ ನಡುವೆ ಸಮನ್ವಯತೆ ಇಲ್ಲ. ಸಿಎಂ ಅಲ್ಲಿ ಇಲ್ಲಿ ಸಭೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಸಚಿವರು ಏನು ಮಾಡುತ್ತಿದ್ದಾರೆ ನೀವೆ ಹೇಳಿ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರೆಯುತ್ತಾರೋ ಇಲ್ಲವೋ ಎಂಬುದು ನನಗೆ ಸಂಬಂಧಿಸದ ವಿಚಾರ.ನಿನ್ನೆ ಮೊನ್ನೆ ಮಠಕ್ಕೆ ಹೋಗಿ ಬಂದವರನ್ನು ಕೇಳಿದರೆ ಗೊತ್ತಾಗಬಹುದು ಎಂದರು.
ಸತ್ತವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ವಿಚಾರಕ್ಕೆ ವ್ಯಂಗ್ಯವಾಡಿದ ಡಿಕೆಶಿ, ಅಮ್ಮನವರು ಪಟ್ಟಕ್ಕೆ ಬರುವುದರೊಳಗೆ, ಐನೋರು ಚಟ್ಟಕ್ಕೆ ಹೋಗುವ ರೀತಿ. ಲಕ್ಷ ಪರಿಹಾರ ಕೊಡುವುದಕ್ಕಿಂತ, ರೋಗಿಗಳು ಖಾಸಗಿ ಆಸ್ಪತ್ರೆಗೆ ಕಟ್ಟಿರುವ ಬಿಲ್ ನ್ನು ವಾಪಸ್ಸು ಕೊಡಿಸಿ. ಇದು ನಮ್ಮ ಆಗ್ರಹ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!