ಅಂಬೇಡ್ಕರ್‌ ಮರೆತಿದ್ದೇ ಕಾಂಗ್ರೆಸ್‌ ಗೆ ಶಾಪವಾಯ್ತು; ನಳೀನ್‌ ಕುಮಾರ್‌ ಕಟೀಲ್‌

ದೇಶ ಎಲ್ಲ ರಂಗಗಳಲ್ಲೂ ಪ್ರಗತಿ ಹೊಂದುತ್ತಿದೆ

Team Udayavani, Jan 9, 2023, 2:39 PM IST

ಅಂಬೇಡ್ಕರ್‌ ಮರೆತಿದ್ದೇ ಕಾಂಗ್ರೆಸ್‌ ಗೆ ಶಾಪವಾಯ್ತು; ನಳೀನ್‌ ಕುಮಾರ್‌ ಕಟೀಲ್‌

ಮೈಸೂರು: ದೇಶದಲ್ಲಿ ಕಾಂಗ್ರೆಸ್‌ ಅಂಬೇಡ್ಕರ್‌ ಅವರ ಭಾವಚಿತ್ರ ಇಟ್ಟುಕೊಂಡು ರಾಜಕಾರಣ ಮಾಡಿದೆಯೇ ಹೊರತು ಬೇರೇನೂ ಮಾಡಿಲ್ಲ. ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಮರೆತಿತ್ತು. ಇದೇ ಆ ಪಕ್ಷಕ್ಕೆ ಶಾಪವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ನಗರದ ಲಲಿತಮಹಲ್‌ ಪ್ಯಾಲೇಸ್‌ ಹೋಟೆಲ್‌ನಲ್ಲಿ ನಡೆದ ಬಿಜೆಪಿ ದಲಿತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮೊದಲಿನಿಂದಲೂ ವಂಶ ಪಾರಂಪರ್ಯ ಆಡಳಿತ ನಡೆಸಿಕೊಂಡು ಬಂದಿದೆ.

ಹಳ್ಳಿಯಿಂದ ಬಂದ ನಾನು ಸೇರಿದಂತೆ ನಗರಪಾಲಿಕೆ ಸದಸ್ಯರಾಗಿದ್ದ ಮುನಿಸ್ವಾಮಿ ಸಂಸದರಾಗಲು ಸಂವಿಧಾನ ಕಾರಣ. ಅದೇ ರೀತಿ ಚಹಾ ಮಾರುವವನೊಬ್ಬ ದೇಶದ ಪ್ರಧಾನಮಂತ್ರಿಯಾಗಿ ಕೆಲಸ ಮಾಡಲು ಸಂವಿಧಾನ ಕೊಟ್ಟ ಕೊಡುಗೆಯಾಗಿದೆ. ಇಂತಹ ಶ್ರೇಷ್ಠ ಸಂವಿಧಾನ ನೀಡಿದವರು ಡಾ.ಬಿ.ಆರ್‌. ಅಂಬೇಡ್ಕರ್‌. ಆದರೆ ಕಾಂಗ್ರೆಸ್‌ ಅಂಬೇಡ್ಕರ್‌ ಅವರ ಭಾವಚಿತ್ರ ಇಟ್ಟುಕೊಂಡು ರಾಜಕಾರಣ ಮಾಡಿದೆಯೇ ಹೊರತು ಬೇರೇನೂ ಮಾಡಿಲ್ಲ ಎಂದು ಕಿಡಿಕಾರಿದರು.

1952 ಮತ್ತು 1954ರ ಲೋಕಸಭಾ ಚುನಾವಣೆಯಲ್ಲಿ ಅಂಬೇಡ್ಕರ್‌ ಅವರನ್ನು ಸೋಲಿಸಿದ ಕಾಂಗ್ರೆಸ್‌, ದೆಹಲಿಯಲ್ಲಿ ಅಂತ್ಯಸಂಸ್ಕಾರಕ್ಕಾಗಿ 6 ಅಡಿ ಜಾಗ ಕೊಡದೆ ಅವಮಾನ ಮಾಡಿತು. ಆದರೆ ಮೋದಿ ಸರ್ಕಾರ ಅವರ ಪಂಚಸ್ಥಳಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನ ಮಾಡಿ ಗೌರವ ಕೊಡುವ ಕೆಲಸ ಮಾಡುತ್ತಿದೆ ಎಂದರು.

ದೇಶದ ಅಭಿವೃದ್ಧಿ: ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಸಂವಿಧಾನದ ಆಶಯಕ್ಕೆ ತಕ್ಕಂತೆ ಆಡಳಿತ ನಡೆಸಲಾಗುತ್ತಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ರಾಜಾಡಳಿತದಲ್ಲಿ ಸಕ್ಕರೆ ಕಾರ್ಖಾನೆ, ವಿದ್ಯುತ್‌ ಕಾರ್ಖಾನೆ, ವಿಶ್ವವಿದ್ಯಾಲಯ ಮೊದಲಾದ ಕೊಡುಗೆಗಳನ್ನು ನೀಡಿದರೆ, ಈಗ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಮಾಡುತ್ತಿದ್ದಾರೆ. ದೇಶ ಎಲ್ಲ ರಂಗಗಳಲ್ಲೂ ಪ್ರಗತಿ ಹೊಂದುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್‌ಸಿಂಗ್‌ ಆರ್ಯ, ಕೇಂದ್ರ ಸಚಿವ ವೀರೇಂದ್ರ ಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಬಿಜೆಪಿ ಎಸ್‌.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ಮೈಸೂರು ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್‌ ಇದ್ದರು.

ಕಾರ್ಯಕಾರಿಣಿ ನಿರ್ಣಯಗಳು
ಪ್ರಮುಖವಾಗಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯದ ಮೀಸಲಾತಿ ಹೆಚ್ಚಳ, ಕೇಂದ್ರ ಸರ್ಕಾರ ಅಂಬೇಡ್ಕರ್‌ ಜನ್ಮಸ್ಥಳ, ಬೌದ್ಧ ಧರ್ಮ ಸ್ವೀಕರಿಸಿದ ಸ್ಥಳ ಅಭಿವೃದ್ಧಿಪಡಿಸಿದಂತೆ ರಾಜ್ಯದಲ್ಲಿ ಅಂಬೇಡ್ಕರ್‌ ಭೇಟಿ ನೀಡಿದ ಏಳು ಸ್ಥಳಗಳಾದ ಬೆಂಗಳೂರು, ಕೆಜಿಎಫ್, ಧಾರವಾಡ, ಹಾಸನ, ವಿಜಯಪುರ, ಬೆಳಗಾವಿ ಮತ್ತು ಗುಲ್ಬರ್ಗಾ ನಗರಗಳಲ್ಲಿ ಸ್ಮಾರಕ ನಿರ್ಮಾಣಕ್ಕೆ ಪ್ರಾರಂಭಿಕ ಅನುದಾನವಾಗಿ 20 ಕೋಟಿ ನೀಡಿರುವುದು, ಬಡವರಿಗೆ 75 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಿರುವುದು, ರಾಜ್ಯದಲ್ಲಿ ದಲಿತರಿಗಾಗಿ 100 ಹಾಸ್ಟೆಲ್‌ ತೆರೆಯಲು ಅನುದಾನ ಬಿಡುಗಡೆಗೊಳಿಸಿರುವುದನ್ನು ಸ್ವಾಗತಿಸಲಾಗಿದೆ ಎಂದರು.

ಕಾಂಗ್ರೆಸ್‌ನದ್ದು ವಂಶ ಪಾರಂಪರ್ಯ, ಪರಿವಾರ ರಾಜಕಾರಣವಾದರೆ, ನಮ್ಮದು ಅಂಬೇಡ್ಕರ್‌ ಅವರು ನೀಡಿದ ಸಂವಿಧಾನ ಆಶಯದ ಆಡಳಿತ.
● ನಳೀನ್‌ ಕುಮಾರ್‌ ಕಟೀಲ್‌,
ರಾಜ್ಯಾಧ್ಯಕ್ಷ ಬಿಜೆಪಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.