ಮುಂದುವರಿದ ಬ್ಯಾಂಕ್‌ ನೌಕರರ ಮುಷ್ಕರ


Team Udayavani, Feb 2, 2020, 3:00 AM IST

munduvareda

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ಕರೆನೀಡಿದ್ದ ಮುಷ್ಕರದ ಎರಡನೇ ದಿನ ಶನಿವಾರ ನಗರದ ವಿನೋಬಾ ರಸ್ತೆಯಲ್ಲಿರುವ ಕಾರ್ಪೋರೇಷನ್‌ ಬ್ಯಾಂಕ್‌ ವಲಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ವೇತನ ಪರಿಷ್ಕರಣೆ, ಐದು ದಿನಗಳ ಬ್ಯಾಂಕಿಂಗ್‌ ವ್ಯವಸ್ಥೆ ಜಾರಿ, ಪಿಂಚಣಿ ಮತ್ತು ಕುಟುಂಬ ಪಿಂಚಣಿಯಲ್ಲಿ ಸುಧಾರಣೆ, ಹೊಸ ಪಿಂಚಣಿ ಯೋಜನೆ ರದ್ದುಪಡಿಸುವುದು, ವ್ಯವಹಾರದ ಸಮಯ, ಊಟದ ಸಮಯ ಮತ್ತು ಅಧಿಕಾರಿಗಳ ಕೆಲಸದ ಸಮಯವನ್ನು ನಿಗದಿಪಡಿಸುವುದು,

ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ವಿಲೀನ ಮಾಡಬಾರದು, ಬ್ಯಾಂಕ್‌ ಖಾಸಗೀಕರಣ ಮಾಡಬಾರದು, ನಿವೃತ್ತಿ ಸೌಲಭ್ಯಗಳ ಮೇಲೆ ಸಂಪೂರ್ಣ ತೆರಿಗೆ ವಿನಾಯಿತಿ, ಗುತ್ತಿಗೆ ಕಾರ್ಮಿಕರಿಗೆ ಸಮಾನ ಕೆಲಸ-ಸಮಾನ ವೇತನ ಜಾರಿಗೊಳಿ ಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಬ್ಯಾಂಕ್‌ ನೌಕರರ ವೇತನ ಪರಿಷ್ಕರಣೆಯು ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುತ್ತಿದ್ದು, 2017ರ ಮೇ ನಲ್ಲಿ ಬ್ಯಾಂಕ್‌ ನೌಕರರು ವೇತನ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದು, ಈವರೆಗೆ ಈ ಸಂಬಂಧ 36 ಸಭೆ ನಡೆದಿದ್ದರೂ ಐಬಿಎ ನಮ್ಮ ಮನವಿಗೆ ನಿಧಾನಗತಿಯ ಧೋರಣೆ ತೋರುತ್ತಿದ್ದು, ಈ ಕಾರಣದಿಂದಾಗಿ ಮುಷ್ಕರವನ್ನು ಹಮ್ಮಿಕೊಂಡಿರುವುದಾಗಿ ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆಯ ವಲಯ ಕಾರ್ಯದರ್ಶಿ ಅಮರ್‌ ತಿಳಿಸಿದರು.

2010ರ ಏಪ್ರಿಲ್‌ ಬಳಿಕ ಬ್ಯಾಂಕ್‌ ನೌಕರಿಗೆ ಸೇರಿದವರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ, ಎಲ್ಲಾ ಹುದ್ದೆಗಳ ನೇಮಕಾತಿ, ಠೇವಣಿ ಮೇಲಿನ ಹೆಚ್ಚಿನ ಬಡ್ಡಿದರ ಹಾಗೂ ಹೆಚ್ಚಿದ ಸೇವಾ ಶುಲ್ಕಗಳನ್ನು ಇಳಿಸುವಂತೆ ಒತ್ತಾಯಿಸುತ್ತಿದ್ದು, ಇದಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ನಮ್ಮ ಬೇಡಿಕೆಗಳನ್ನು ಬ್ಯಾಂಕ್‌ ಆಡಳಿತ ವರ್ಗಗಳು ಮತ್ತು ಐಬಿಎ ಈಡೇರಿಸಲು ಮುಂದಾಗದಿದ್ದಲ್ಲಿ ಮಾರ್ಚ್‌ 11, 12, 13ರಂದು ಮತ್ತೆ ಮುಷ್ಕರ ನಡೆಸಲಾಗುವುದು. ಆಗಲೂ ಬೇಡಿಕೆ ಈಡೇರದಿದ್ದರೆ ಏಪ್ರಿಲ್‌ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ಬ್ಯಾಂಕ್‌ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆಯ ಸಂಚಾಲಕ ಎಚ್‌.ಬಾಲಕೃಷ್ಣ, ಅಮರ್‌,ಜಯರಾಂ ಸೇರಿದಂತೆ ನೂರಾರು ಬ್ಯಾಂಕ್‌ ನೌಕರರು ಮುಷ್ಕರದಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.