ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ


Team Udayavani, May 28, 2022, 10:51 AM IST

3school

ಹುಣಸೂರು: ತಾಲೂಕಿನಲ್ಲಿ ಮತ್ತೆ ಮಳೆಯ ರುದ್ರನರ್ತನ ಮುಂದುವರೆದಿದ್ದು, ಭಾರೀ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಉಯಿಗೊಂಡನಹಳ್ಳಿ, ಧರ್ಮಾಪುರ, ಗುರುಪುರ, ಕೊಯಮತ್ತೂರು ಕಾಲೋನಿ, ವಿನೋಬಾ ಕಾಲೋನಿ, ಬಿಳಿಕೆರೆ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳಲ್ಲಿ ಅಪಾರ ಹಾನಿ ಸಂಭವಿಸಿ, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ಸಂಜೆ ಮತ್ತೆ ಮಳೆ ಮುಂದುವರೆದಿದ್ದು, ಮತ್ಯಾವ ಅನಾಹುತ ಸೃಷ್ಟಿಸುವುದೋ ಎಂಬ ಆತಂಕ ಎದುರಾಗಿದೆ.

ಶಾಲೆಗೆ ನುಗ್ಗಿದ ನೀರುಅಪಾಯದಲ್ಲಿ ಕಟ್ಟಡ

ಉಯಿಗೊಂಡನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಹುಂಡಿಮಾಳದಲ್ಲಿ ಹೆಚ್ಚು ಹಾನಿಯಾಗಿದ್ದು, ಶಾಲಾ ಕೊಠಡಿಗಳಿಗೆ ನೀರು ನುಗ್ಗಿದೆ, ಗೆಂಡೆಕಟ್ಟೆ ಭರ್ತಿಯಾಗಿ ತೋಟ, ಹೊಲಗಳಿಗೆ ನೀರು ನುಗ್ಗಿ ಅಪಾರ ಬೆಳೆ ನಷ್ಟ ಉಂಟಾಗಿದೆ. 20ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದೆ. ರಸ್ತೆ-ಮನೆ, ಕೊಟ್ಟಿಗೆಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

ಹುಂಡಿಮಾಳದ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳ ಕೊಠಡಿಗಳಿಗೆ ನೀರು ನುಗ್ಗಿ ಜಲಾವೃತವಾಗಿದ್ದರೆ, ಹೈಸ್ಕೂಲ್‌ನ ಕಾಂಪೌಂಡ್ ಬಿದ್ದು ಹೋಗಿದೆ. ಶಾಲೆಯ ಆರು ಕೊಠಡಿಗಳು ಸಂಪೂರ್ಣ ಸೋರುತ್ತಿದ್ದು, ತರಗತಿ ನಡೆಸಲಾಗದ ಸ್ಥಿತಿ ಎದುರಾಗಿದೆ. ಯಾವಾಗ ಕಟ್ಟಡ ಬಿದ್ದು ಹೋಗುತ್ತದೋ ಎನ್ನುವ ಭೀತಿಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಇದ್ದಾರೆ. ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಹೈಸ್ಕೂಲ್ ಮುಖ್ಯ ಶಿಕ್ಷಕ ರವಿ ಹೇಳಿದ್ದಾರೆ.

ಇದನ್ನೂ ಓದಿ:ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು

ಅಪಾಯದಲ್ಲಿ ಹುಂಡಿಮಾಳದ ಬುಂಡೆಕಟ್ಟೆ

ಹುಂಡಿಮಾಳದ ಬುಂಡೆಕಟ್ಟೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ, ಅಪಾಯ ತಂದೊಡ್ಡಿದೆ. ಈ ಭಾಗದ ಉಯಿಗೊಂಡನಹಳ್ಳಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮಗಳ ಜಮೀನಿನಲ್ಲಿ ಬೆಳೆದಿದ್ದ ಅರಿಶಿನ, ಹತ್ತಿ, ತಂಬಾಕು, ಚಪ್ಪರದ ಅವರೆ, ಬಾಳೆ ಬೆಳೆ ಸೇರಿದಂತೆ ಅಪಾರ ಬೆಳೆಗೆ ಹಾನಿಯುಂಟಾಗಿದೆ. ಹೊಲಗಳಲ್ಲಿ ಬಿರುಗಾಳಿಗೆ 20ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿದೆ. ಮನೆ-ಕೊಟ್ಟಿಗೆಗಳ ಮೇಲ್ಚಾವಣಿ ಹಾರಿ ಹೋಗಿ ರೈತರ ಬದುಕನ್ನೇ ಬರಡಾಗಿಸಿದೆ. ಸರಕಾರ ಹಾನಿಗೆ ಪರಿಹಾರ ನೀಡುವಂತೆ ಹುಂಡಿಮಾಳ ಸುರೇಶ್, ಒಡಿಪಿ ಸಂಸ್ಥೆಯ ಒತ್ತಾಯಿಸಿದ್ದಾರೆ.

ಗುರುಪುರ, ವಾರಂಚಿ ಕಡೆಗಳಲ್ಲಿ ಹೊಲಗಳಿಗೆ ಅಪಾರ ಪ್ರಮಾಣದ ನೀರು ಹರಿದಿದೆ, ಮನೆಗಳಿಗೂ ಹಾನಿಯಾಗಿದೆ. ಬಿಳಿಕೆರೆ, ಧರ್ಮಾಪುರ, ತರಿಕಲ್‌ಗಳಲ್ಲಿ ಮನೆಗಳ ಗೋಡೆಗಳು ಬಿದ್ದು ಹೋಗಿವೆ. ಬನ್ನಿಕುಪ್ಪೆಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ರಸ್ತೆಗಳು ಕೊಚ್ಚಿ ಹೋಗಿವೆ.

ಶಾಸಕ ಎಚ್.ಪಿ.ಮಂಜುನಾಥರು ಕೊಯಮತ್ತೂರು ಕಾಲೋನಿ, ಧರ್ಮಾಪುರ ಮತ್ತಿತರ ಕಡೆಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ್ದಾರೆ. ತಹಶೀಲ್ದಾರ್ ಡಾ.ಅಶೋಕ್ ಹುಂಡಿಮಾಳ ಶಾಲೆಗಳಿಗೆ ಹಾಗೂ ಧರ್ಮಾಪುರ, ಗುರುಪುರ ಮತ್ತಿತರ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.