ಬೆಂಬಿಡದ ಮಳೆ‌; ನಿತ್ಯ ಜನತೆಗೆ ರಗಳೆ


Team Udayavani, Oct 14, 2017, 5:03 PM IST

MYS.jpg

ಮೈಸೂರು: ನಗರದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪಡುವಾರಹಳ್ಳಿ ಸೇರಿದಂತೆ ತಗ್ಗುಪ್ರದೇಶದ ಅನೇಕ ಬಡಾವಣೆಗಳ ಮನೆಗಳಿಗೆ ಮಳೆ ನೀರು ನುಗ್ಗಿ ರಾತ್ರಿಯಿಡೀ ಇಲ್ಲಿನ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

ಇತ್ತ ದಸರಾ ವಸ್ತುಪ್ರದರ್ಶನ ಬಳಿಯ ದೊಡ್ಡ ಮೋರಿ ಮಳೆ ನೀರಿನಿಂದ ತುಂಬಿ ಹರಿದ ಪರಿಣಾಮ ವಸ್ತುಪ್ರದರ್ಶನ ಪ್ರಾಧಿಕಾರದ ಅಂಗಳದಲ್ಲೂ ಮಂಡಿಯುದ್ದ ನೀರು ನಿಂತು ಮಳಿಗೆ ಪಡೆದಿರುವ ವ್ಯಾಪಾರಸ್ಥರು ಪರಿತಪಿಸುವಂತಾಯಿತು. ವಸ್ತುಪ್ರದರ್ಶನ ಆವರಣದ ದೊಡ್ಡ ಮೋರಿ ತಡೆಗೋಡೆ ಕುಸಿದಿದ್ದರೂ ಅಧಿಕಾರಿಗಳು ದುರಸ್ತಿ ಮಾಡಿಸಿಲ್ಲ. ಬದಲಿಗೆ ಗೋಡೆ ಕುಸಿದು ಬಿದ್ದಿರುವ ಜಾಗಕ್ಕೆ ಮರಳು ಮೂಟೆ ಪೇರಿಸಿದ್ದರಿಂದ ಭಾರೀ ಮಳೆಯಿಂದ ನುಗ್ಗಿದ ಮರಳು ಮೂಟೆಗಳನ್ನು ನೀರು ಹೊತ್ತು ತಂದು ಅಂಗಳಕ್ಕೆ ಭಾರೀ ನೀರು ನುಗ್ಗಿದೆ.

 ಸ್ಥಳಕ್ಕೆ ಧಾವಿಸಿದ ಶಾಸಕ ವಾಸು ನೆರವಿಗೆ ನಿಂತರು. ಅಭಯ ತಂಡದ ಸಿಬ್ಬಂದಿ ಮನೆಗಳಿಗೆ ನುಗ್ಗಿದ್ದ ನೀರನ್ನು ಕುಕ್ಕರಹಳ್ಳಿ ಕೆರೆಗೆ ಹರಿಸಲು ಹುಣಸೂರು ರಸ್ತೆ ಅಗೆದಿದ್ದರಿಂದ ರಾಷ್ಟ್ರೀಯ ಹೆದ್ದಾರಿ 275ರಲ್ಲಿದ್ದ ಕಿರು ಸೇತುವೆ ಒಡೆದ ಪರಿಣಾಮ ಹುಣಸೂರು ರಸ್ತೆಯಲ್ಲಿ ಸಂಚಾರ ಬಂದ್‌ ಮಾಡಲಾಗಿದೆ. ಹುಣಸೂರು ರಸ್ತೆ ಹಾಗೂ ವಾಲ್ಮೀಕಿ ರಸ್ತೆಗೆ ಹೊಂದಿಕೊಂಡಂತೆ ಇದ್ದ ನಿವೇಶನದಲ್ಲಿ ಮಹಾರಾಣಿ ಕಾಲೇಜಿನ ನೂತನ ಕಟ್ಟಡ ನಿರ್ಮಿಸುತ್ತಿದ್ದು, ಇದಕ್ಕಾಗಿ ಕುಕ್ಕರಹಳ್ಳಿ ಕೆರೆಗೆ ನೀರು ಹರಿಯಲು ಇದ್ದ ದೊಡ್ಡ ಮೋರಿಯನ್ನು ಮುಚ್ಚಲಾಗಿದೆ. ಇದೇ ಹುಣಸೂರು ರಸ್ತೆ ಬಂದ್‌ ಆಗಲು ಕಾರಣವಾಗಿದೆ. 

ಜತೆಗೆ ಶ್ರೀರಾಂಪುರ 2ನೇ ಹಂತ, ಕುವೆಂಪುನಗರ ವಾಟರ್‌ಟ್ಯಾಂಕ್‌, ರಾಮಕೃಷ್ಣ ನಗರ ವಾಸು ಬಡಾವಣೆ, ಮಧುವನ ಬಡಾವಣೆ ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುವಂತಾಯಿತು. 

ಮೇಯರ್‌ ಪರಿಶೀಲನೆ: ಭಾರೀ ಮಳೆಯಿಂದ ನಗರದ ಜನ ಜೀವನ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ನಗರ ಪ್ರದಕ್ಷಿಣೆ ನಡೆಸಿದ ಮೇಯರ್‌ ಎಂ.ಜೆ.ರವಿಕುಮಾರ್‌, ನಗರದ ಹಾರ್ಡಿಂಜ್‌ ವೃತ್ತ, ಕೆಎಸ್‌ಆರ್‌ ಟಿಸಿ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಒಂಟಿಕೊಪ್ಪಲ್‌, ಚಂದ್ರಕಲಾ ಆಸ್ಪತ್ರೆ, ಹುಣಸೂರು ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ನ್ಯೂ ಕಾಂತರಾಜೇ ಅರಸ್‌ ರಸ್ತೆ, ಆರ್‌ಟಿಒ ವೃತ್ತ, ಗನ್‌ ಹೌಸ್‌, ಮೃಗಾಲಯ ಎದುರಿನ ರಸ್ತೆಗಳ ಪರಿಶೀಲನೆ ನಡೆಸಿದರು.

ಇದೇ ವೇಳೆ ರಸ್ತೆಗಳಲ್ಲಿನ ಗುಂಡಿಗಳನ್ನು ಕೂಡಲೇ ಮುಚ್ಚುವಂತೆ ಅಧಿಕಾರಿಗಳಿಗೆ ತಿಳಿಸಿದರು. ನಗರದ ರಸ್ತೆಗಳಲ್ಲಿ ಅಲ್ಲಲ್ಲಿ ಗುಂಡಿ ಬಿದ್ದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಅನಾಹುತ ಸಂಭವಿಸುವ ಮುನ್ನ ರಸ್ತೆಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. 

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.