ಮುಸ್ಲಿಮರನ್ನು ವರಿಸಿರುವ ಆರ್‌ಎಸ್‌ಎಸ್‌ ನಾಯಕರ ಮಕ್ಕಳನ್ನು ಜೈಲಿಗೆ ಹಾಕುವಿರಾ?


Team Udayavani, Dec 24, 2021, 12:50 PM IST

vishwanath

ಮೈಸೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆಯಾಗಿರುವ ಮತಾಂತರ ನಿಷೇಧ ಮಸೂದೆಯನ್ನು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ವಿರೋಧಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್‌, ಶಾಸಕಾಂಗ ಸಮಿತಿ ಮಠಾಧೀಶರನ್ನು ಭೇಟಿ ಮಾಡಿ ಮತಾಂತರ ನಿಷೇಧ ಮಸೂದೆ ಕುರಿತು ಅಭಿ ಪ್ರಾಯ ಸಂಗ್ರಹಿಸಬೇಕು.

ಬಸವೇಶ್ವರರ ಮೂಲ ತತ್ವಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ವಿಧೇಯಕ ತರುವುದರಿಂದ ರಾಜ್ಯ ಅಭಿವೃದ್ಧಿಯಾಗುತ್ತದೆಯೇ? ಜಾರಿಗೆ ತರುವ ಮೊದಲು ಅಭಿಪ್ರಾಯ ಸಂಗ್ರಹಿಸಬೇಕು ಎಂದು ಆಗ್ರಹಿಸಿದರು. ಆರ್‌ಎಸ್‌ಎಸ್‌ ನಾಯಕರ ಮಕ್ಕಳು ಮುಸ್ಲಿಮರ ಮಕ್ಕಳನ್ನು ಮದುವೆಯಾಗಿದ್ದಾರೆ. ಇವರುಗಳನ್ನು ಜೈಲಿಗೆ ಹಾಕಲು ಸಾಧ್ಯವೇ? ಸಿನಿಮಾ ನಟರು ಬ್ರಾಹ್ಮಣರನ್ನು ಮದುವೆಯಾಗಿದ್ದಾರೆ. ಇವರನ್ನು ಜೈಲಿಗೆ ಹಾಕಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಭಾರತ ಬಹುತ್ವವುಳ್ಳ ದೇಶ. ಅಂಬೇಡ್ಕರ್‌ ಅವರು ಸಂವಿಧಾನ ನೀಡಿದ್ದಾರೆ. ತಮ್ಮ ಇಷ್ಟ ಬಂದ ಧರ್ಮ, ದೇವರನ್ನು ಪೂಜೆ ಮಾಡಲು ಅವಕಾಶ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುತ್ವದ ಬಗ್ಗೆ ಎಲ್ಲಿಯೂ ಹೇಳಿಲ್ಲ. ಬಸವೇಶ್ವರರು ಕಟ್ಟಿದ ಮಾನವ ಧರ್ಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಒಡೆಯುವ ಕೆಲಸವಾಗಿರುವುದು ವಿಪರ್ಯಾಸ. ಇದನ್ನು ಯಾರೂ ಮೆಚ್ಚುವುದಿಲ್ಲ ಎಂದು ವಿಶ್ವನಾಥ್‌ ಹೇಳಿದರು. ಬಸವಣ್ಣನವರ ತತ್ವವನ್ನು ಅಳವಡಿಸಿಕೊಂಡಿರುವ ಮಠಾಧೀಶರು ಯಾರೂ ಈ ಮಸೂದೆ ಕುರಿತು ಮಾತನಾಡುತ್ತಿಲ್ಲ. ಸರ್ಕಾರದ ಅನುದಾನ ಬಾಯಿ ಮುಚ್ಚಿಸಿದೆ.

ಇದನ್ನೂ ಓದಿ: ಕುಷ್ಟಗಿ: ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಕಾಂಗ್ರೆಸ್ ಸದಸ್ಯರ ಆಕ್ರೋಶ

ಅಹಿಂದ ಮಠಗಳು ಮಾತನಾಡುತ್ತಿಲ್ಲ. ನಿಮ್ಮ ಬಾಯಿ ಕಟ್ಟಿರುವುದು ಯಾರು? ಸಾಹಿತಿಗಳು, ಚಿಂತಕರು ಬಾಯಿ ಬಿಡುತ್ತಿಲ್ಲ. ಅವರು ರಾಜ್ಯೋತ್ಸವ ಪ್ರಶಸ್ತಿಗಷ್ಟೇ ಸೀಮಿತವಾಗಿದ್ದಾರೆ ಎಂದು ವಿಶ್ವನಾಥ್‌ ಟೀಕಿಸಿದರು. ಬೆಳಗಾವಿಯಲ್ಲಿ ನಡೆದಿರುವ ಎಂಇಎಸ್‌ ದಾಂಧಲೆ ಬಗ್ಗೆ ಪ್ರಸ್ತಾಪಿಸಿದ ಅವರು, ಬೆಳಗಾವಿ ಜಿಲ್ಲಾ ನಾಯಕರು ಯಾರೂ ಈ ಬಗ್ಗೆ ಮಾತನಾಡುತ್ತಿಲ್ಲ. ಅವರಿಗೆ ಕನ್ನಡಿಗರು ವೋಟು ಹಾಕಿಲ್ಲವೇ? ಮರಾಠಿ ಮತದಾರರೇ ಹೆಚ್ಚಾದರಾ? ಎಂಇಎಸ್‌ ಅನ್ನು ನಿಷೇಧಿಸಬೇಕು ಎಂದು ವಿಶ್ವ ನಾಥ್‌ ಒತ್ತಾಯಿಸಿದರು.

ರಂಗಾಯಣದಲ್ಲಿ ತತ್ವ ಸಿದ್ಧಾಂತ ಹೇರಬೇಡಿ

ರಂಗಾಯಣ ವಿವಾದ ಕುರಿತು ಪ್ರಸ್ತಾಪಿಸಿದ ಎಚ್‌.ವಿಶ್ವನಾಥ್‌, ತಾವು ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದಾಗ ರಂಗಾಯಣಕ್ಕೆ ರೂಪ ಕೊಟ್ಟಿದ್ದೆ. ರಂಗಾಯಣ ನೋಂದಣಿಯಾಗಿಲ್ಲ ಎಂದು ಬಿ.ವಿ. ಕಾರಂತರು ಹೇಳಿದಾಗ ಅಂದಿನ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರೊಂದಿಗೆ ಮಾತನಾಡಿ ಕೆಲಸ ಮಾಡಿಸಿದೆವು.

ಈವರೆಗೂ ಹತ್ತು ಮಂದಿ ರಂಗಾಯಣ ನಿರ್ದೇಶಕರಾಗಿ ದ್ದಾರೆ. ಯಾರೂ ತತ್ವ , ಸಿದ್ಧಾಂತವನ್ನು ಹೇರಿರಲಿಲ್ಲ. ಅಡ್ಡಂಡ ಸಿ. ಕಾರ್ಯಪ್ಪ ಅವರು ಈಗಿನ ನಿರ್ದೇಶಕರು. ಅವರು ಪದ ಪ್ರಯೋಗ ಮಾಡುವಾಗ ಸಾಮರಸ್ಯದಿಂದ ಮಾಡಬೇಕು. ಈ ಹಿಂದಿನ ನಿರ್ದೇಶಕರು ರಂಗಾಯಣವನ್ನು ಕಾಪಾಡಿಕೊಂಡು ಬಂದಿದ್ದಾರೆ ಎಂದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.