Coombing: ಮಳೆ ನಡುವೆಯೇ ಹುಲಿ ಪತ್ತೆಗೆ ಕೂಂಬಿಂಗ್‌!


Team Udayavani, Sep 10, 2023, 3:08 PM IST

TDY-14

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಂಚಿನ ಹುಣ‌ಸೂರು ತಾಲೂಕಿನ ಮುದಗನೂರು ಹಾಗೂ ಶೆಟ್ಟಹಳ್ಳಿ ಲಕ್ಕಪಟ್ಟಣ ಪ್ರದೇಶದಲ್ಲಿ ಕಾಣಿಸಿಕೊಂಡು ಉಪಟಳ ನೀಡುತ್ತಿದ್ದ ಹುಲಿ ಸೆರೆಗೆ ವೀರನಹೊಸಹಳ್ಳಿ, ಹುಣಸೂರು ವನ್ಯಜೀವಿ ವಲಯದ ಅರಣ್ಯ ಸಿಬ್ಬಂದಿ ಶುಕ್ರವಾರದಿಂದ ಕೂಂಬಿಂಗ್‌ ಆರಂಭಿಸಿದ್ದಾರೆ. ಕಳೆದೆರಡು ದಿನಗಳಿಂದ ಮುದಗನೂರು ಗ್ರಾಮದ ಕಾಡಂಚಿನ ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆಯಾದ ಹಿನ್ನೆಲೆ ಸಿಬ್ಬಂದಿ ಹುಲಿ ಹೆಜ್ಜೆ ಜಾಡು ಹಿಡಿದು ಕಾರ್ಯಾಚರಣೆ ನಡೆಸಿದರು. ಆದರೆ, ಎಲ್ಲಿಯೂ ಹುಲಿ ಸುಳಿವು ಸಿಕ್ಕಿಲ್ಲವಾದ್ದರಿಂದ ಜಮೀನು, ಅರಣ್ಯದಂಚಿನಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಿದ್ದಾರೆ.

ಮಳೆ ಅಡ್ಡಿ: ಶುಕ್ರವಾರ ಹುಲಿ ಪತ್ತೆಗೆ ಅರಣ್ಯ ಇಲಾಖೆ ಹುಣಸೂರು ಮತ್ತು ವೀರನಹೊಸಹಳ್ಳಿ ವನ್ಯಜೀವಿ ವಿಭಾಗದ ಸಿಬ್ಬಂದಿ ಕೂಂಬಿಂಗ್‌ ನಡೆಸಿದರಾದರೂ ಆಗಾಗ್ಗೆ ಬಿಟ್ಟು ಬಿಟ್ಟು ಬರುತ್ತಿರುವ ತುಂತುರು ಮಳೆ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಚಳ್ಳೆಹಣ್ಣು ತಿನ್ನಿಸುತ್ತಿರುವ ಹುಲಿ: ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಕಾಡು ಸೇರುವ ಹುಲಿ, ವಾರದ ನಂತರ ಪಕ್ಕದ ಗ್ರಾಮದ ಹೊಲ-ಗದ್ದೆಗಳಲ್ಲಿ ಓಡಾಟ ಆರಂಭಿಸುತ್ತದೆ. ಸಿಕ್ಕ ಬೀದಿ, ಸಾಕುನಾಯಿ, ಮತ್ತಿತರ ಸಾಕು ಪ್ರಾಣಿ ತಿಂದು ಹೊಟ್ಟೆ ತುಂಬಿ ಸಿಕೊಳ್ಳುತ್ತಾ ಲಕ್ಷ್ಮಣತೀರ್ಥ ನದಿಯಂಚಿನ ಗ್ರಾಮಗಳಲ್ಲಿ ತನ್ನ ಇರುವಿಕೆ ಪ್ರಸ್ತುತ ಪಡಿಸುತ್ತಾ, ಅರಣ್ಯ ಇಲಾಖೆ ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ.

ಎಚ್ಚರ ವಹಿಸಿ: ರೈತರು ರಾತ್ರಿ ವೇಳೆ ಜಮೀನುಗಳಲ್ಲಿ ಜಾಗರೂಕತೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಎಚ್ಚರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವೀರನಹೊಸಹಳ್ಳಿ ವನ್ಯಜೀವಿ ವಿಭಾಗದ ನವೀನ್‌, ದೇವರಾಜ್‌, ಹುಣಸೂರು ವಲಯದ ಕೃಷ್ಣಮಾದರ್‌, ಅಕ್ಷಯ್‌ ಕುಮಾರ್‌, ಹಲವಾರು ಸಿಬ್ಬಂದಿ ಇದ್ದರು.

2 -3 ಹುಲಿ: ಅನುಮಾನ: ಹನಗೋಡು ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಹುಲಿ ಒಂದೇ ಇದೆಯೋ ಅಥವಾ 2-3 ಇದೆಯೇ ಎಂಬುದು ಸ್ಥಳೀಯರಲ್ಲಿ ಅನುಮಾನಕ್ಕೆಡೆ ಮಾಡಿದೆ. ಹಾಗೆಯೇ ಕೂಂಬಿಂಗ್‌ ಆರಂಭಿಸುವ ವೇಳೆ ನಾಪತ್ತೆಯಾಗುವ ಹುಲಿ ಮತ್ತು ಪಕ್ಕದ ಗ್ರಾಮದ ಹೊಲಗಳಲ್ಲಿ ಓಡಾಡಿ ತನ್ನ ಇರುವಿಕೆ ತೋರಿಸುತ್ತಿರುವು ದರಿಂದ ಒಂದೇ ಹುಲಿಯೋ ಅಥವಾ ಇತರೆ ಹುಲಿಗಳಿವೆ ಯೋ ಎಂಬುದು ರೈತರ ಆತಂಕಕ್ಕೆ ಕಾರಣವಾಗಿದೆ.

 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.