ಮೈಸೂರು ಪ್ರಕರಣ: ಮೊಬೈಲ್ ಟವರ್ ಲೊಕೇಶನ್ ಮೂಲಕ ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು
Team Udayavani, Aug 26, 2021, 12:55 PM IST
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರ ತನಿಖೆ ಚುರುಕುಗೊಂಡಿದ್ದು, ಎಡಿಜಿಪಿ ಪ್ರತಾಪ್ ರೆಡ್ಡಿ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ತನಿಖೆ ಪ್ರಗತಿ ಬಗ್ಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಮಾಹಿತಿ ಪಡೆದಿದ್ದಾರೆ.
ಅತ್ಯಾಚಾರ ನಡೆದ ಸ್ಥಳದಲ್ಲಿ ಈ ಹಿಂದೆ ಆಗಿರುವ ಕೆಲವು ಘಟನೆಗಳ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಮದ್ಯ ಪಾರ್ಟಿಗಳು ನಡೆಯುತ್ತಿದ್ದವೆ? ಯುವಕ, ಯುವತಿ ಈ ಸ್ಥಳಕ್ಕೆ ಬರುವುದಕ್ಕೆ ಕಾರಣವೇನು? ಪ್ರತಿಯೊಂದು ವಿಚಾರದ ಬಗ್ಗೆಯೂ ಎಡಿಜಿಪಿ ಪ್ರತಾಪ್ ರೆಡ್ಡಿ ಮಾಹಿತಿ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮೈಸೂರು: ವಿದ್ಯಾರ್ಥಿನಿಯ ಅತ್ಯಾಚಾರ ಮಾಡಿ 3 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಕಿರಾತಕರು!
ಮೊಬೈಲ್ ಟವರ್ ಲೊಕೇಶನ್ ನಿಂದ ಆರೋಪಿ ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದು ಸದ್ಯ ಸ್ಥಳದಲ್ಲಿ ಸಾವಿರಾರು ಮೊಬೈಲ್ ನಂಬರ್ ಬಳಕೆಯಾಗಿರುವುದು ಪತ್ತೆಯಾಗಿದೆ. ಮೊಬೈಲ್ ನಂಬರ್ ಗಳನ್ನು ಫಿಲ್ಟರ್ ಮಾಡಲಾಗುತ್ತಿದೆ. ಮೊದಲಿಗೆ ಸಂತ್ರಸ್ತೆಯ ಸ್ನೇಹಿತನ ಮೊಬೈಲ್ ಬಳಕೆಯಾಗಿರುವ ಸುಳಿವು ಸಿಕ್ಕಿರಲಿಲ್ಲ. ಇಂದು ಯುವಕ ನಂಬರ್ ಬಳಕೆ ಮಾಹಿತಿ ಸಿಕ್ಕಿದೆ. ಸದ್ಯ ನಂಬರ್ ಆಧಾರದಲ್ಲಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ನೊಂದು ವಾರದಲ್ಲಿ ಮಂಡ್ಯದಲ್ಲಿ ಬಿಜೆಪಿ ಮ್ಯಾಜಿಕ್!: ಗೋ ಮಧುಸೂಧನ್
ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ
ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನಿಗೆ ಗಾಯ
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅನುತ್ತೀರ್ಣ : ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು
ಬ್ರ್ಯಾಂಡ್ ಬೆಂಗಳೂರು ಬಂದಿದ್ದು ದೇವೇಗೌಡರ ಕಾಲದಲ್ಲಿ: ಎಸ್ಎಂಕೆ ಗೆ ಹೆಚ್ ಡಿಕೆ ಟಾಂಗ್