ಕೊರೊನಾ ಸೋಂಕು ಭೀತಿ: ಮೈಸೂರು ಸ್ತಬ್ಧ


Team Udayavani, Mar 15, 2020, 3:00 AM IST

corona-bhiti

ಮೈಸೂರು: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶದಂತೆ ಶನಿವಾರ ಮೈಸೂರಿನ ಶಾಪಿಂಗ್‌ ಮಾಲ್‌, ಚಿತ್ರಮಂದಿರಗಳು, ಉದ್ಯಾನ, ಶಾಲಾ ಕಾಲೇಜುಗಳು ಬಂದ್‌ ಆಗಿದ್ದ ಹಿನ್ನೆಲೆ ಮೈಸೂರು ಸಂಪೂರ್ಣ ಸ್ತಬ್ಧವಾಗಿತ್ತು. ಪ್ರತಿನಿತ್ಯ ಸಹಸ್ರಾರು ಮಂದಿ ಶಾಪಿಂಗ್‌ ಮಾಲ್‌, ಚಿತ್ರಮಂದಿರ, ಉದ್ಯಾನಗಳಿಗೆ ಭೇಟಿ ನೀಡುತ್ತಿದ್ದರು. ಜೊತೆಗೆ ವಾರಾಂತ್ಯಕ್ಕೆ ಭೇಟಿ ನೀಡುವವರ ಸಂಖ್ಯೆ ದ್ವಿಗುಣವಾಗುತ್ತಿತ್ತು.

ಆದರೆ, ಕೊರೊನಾ ಸೋಂಕು ಹರಡದಂತೆ ಸಾರ್ವಜನಿಕ ಸಂಪರ್ಕ ತಪ್ಪಿಸುವ ನಿಟ್ಟಿನಲ್ಲಿ ಒಂದು ವಾರಗಳ ಕಾಲ ಬಂದ್‌ ಘೋಷಿಸಿರುವುದರಿಂದ ನಗರದ ಮಾಲ್‌, ಚಿತ್ರಮಂದಿರಗಳು ಹಾಗೂ ಉದ್ಯಾನಗಳು ಸ್ತಬ್ಧವಾಗಿದ್ದವು. ಜೊತೆಗೆ ಎರಡನೇ ಶನಿವಾರವಾಗಿದ್ದ ಕಾರಣ ಸರ್ಕಾರಿ ಕಚೇರಿಗಳಿಗೂ ರಜೆ ಇತ್ತು. ಆದ್ದರಿಂದ ಸರ್ಕಾರಿ ಕಚೇರಿಗಳ ಸುತ್ತಮುತ್ತ ಜನರು ಕಾಣಲಿಲ್ಲ. ಇನ್ನು ರೈಲು ನಿಲ್ದಾಣ, ಬಸ್‌ ನಿಲ್ದಾಣ ಸಹ ಬಿಕೋ ಎನ್ನುತ್ತಿತ್ತು. ನಗರ ಸಾರಿಗೆ ಬಸ್‌ಗಳು ಪ್ರಯಾಣಿಕರಿಲ್ಲದೆ ಭಣಗುಟ್ಟುತ್ತಿದ್ದವು.

ಬಾಗಿಲು ತೆರೆಯದ ಉದ್ಯಾನಗಳು: ನಗರದ ಹೃದಯಭಾಗದಲ್ಲಿರುವ ರಾಜಕುಮಾರ್‌, ವಿಷ್ಣುವರ್ಧನ್‌ ಹಾಗೂ ಗನ್‌ಹೌಸ್‌ ಬಳಿಯಿರುವ ವಿಶ್ವಮಾನವ ಕುವೆಂಪು ಉದ್ಯಾನವನ, ಕರ್ಜನ್‌ ಪಾರ್ಕ್‌ ಸೇರಿದಂತೆ ಹೆಚ್ಚು ಜನರು ಭೇಟಿ ನೀಡುವಂತಹ ಉದ್ಯಾನವನಗಳನ್ನು ಮುಚ್ಚಲಾಗಿತ್ತು.

ಕೆರೆಗಳಿಗೆ ಪ್ರವೇಶ: ನಗರದೊಳಗೆ ಕಾರಂಜಿಕೆರೆಯು ವಿಶೇಷ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಕಾರಂಜಿಕೆರೆ ಪ್ರವೇಶಕ್ಕೆ ಯಾವುದೇ ನಿರ್ಬಂಧ ವಿಧಿಸಿರಲಿಲ್ಲ. ಎಂದಿನಂತೆ ಪ್ರವಾಸಿಗರು ಕಾರಂಜಿಕೆರೆ ಸೌಂದರ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ, ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಚಾಮರಾಜೇಂದ್ರ ಮೃಗಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ರವಿ ತಿಳಿಸಿದರು.

ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ನಿತ್ಯ ಮುಂಜಾನೆ ಹಾಗೂ ಸಂಜೆ ವಾಯುವಿಹಾರಿಗಳು ಸಂಚರಿಸುವುದು ಸಾಮಾನ್ಯ. ಹಾಗಿದ್ದರೂ, ಇಲ್ಲಿ ಯಾವುದೇ ರೀತಿಯ ನಿರ್ಬಂಧ ಹೇರಿರಲಿಲ್ಲ. ಯುವಕರಿಂದ ಹಿಡಿದು ವೃದ್ಧರು, ಮಹಿಳೆಯರು ಹೀಗೆ ಎಲ್ಲರೂ ಕುಕ್ಕರಳ್ಳಿ ಕೆರೆ ಆವರಣದಲ್ಲಿ ಎಂದಿನಂತೆ ವಿಹರಿಸಿದರು.

ಮಾರುಕಟ್ಟೆಯಲ್ಲಿ ಜನರೇ ಇಲ್ಲ: ದೇವರಾಜ ಮಾರುಕಟ್ಟೆ, ಎಂ.ಜಿ.ರೋಡ್‌ ಮಾರುಕಟ್ಟೆ ಸೇರಿದಂತೆ ಸಯ್ನಾಜಿರಾವ್‌ ರಸ್ತೆ, ದೇವರಾಜ ಅರಸ್‌ ರಸ್ತೆ ಹೀಗೆ ಅನೇಕ ಕಡೆ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು. ಆದರೆ, ಜನಸಂಖ್ಯೆ ಎಂದಿಗಿಂತ ವಿರಳವಾಗಿರುವುದು ಕಂಡು ಬಂತು.

ಸತತ ಒಂದು ವಾರ ಶಾಲಾ ಕಾಲೇಜುಗಳಿಗೆ ರಜೆ ಇರುವ ಕಾರಣ ಮೈಸೂರಿನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿರುವ ಬೇರೆ ಊರುಗಳ ವಿದ್ಯಾರ್ಥಿಗಳು ತಮ್ಮ ಊರಿಗೆ ಮರಳಿದರು. ಎಲ್ಲರೂ ಬಸ್‌ ಮೊರೆ ಹೋಗಿದ್ದ ಕಾರಣ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಸ್‌ ನಿಲ್ದಾಣ ಜನರಿಂದ ತುಂಬಿತ್ತು. ಸಂಜೆಯಾಗುತ್ತಿದ್ದಂತೆ ಯಥಾ ಪ್ರಕಾತರ ಖಾಲಿಯಾಗಿತ್ತು.

ಕೊರೊನಾ ಶಂಕಿತರ ಸಂದರ್ಶನಕ್ಕೆ ನಿಬಂಧ: ಕೊರೊನಾ ಶಂಕಿತ ವ್ಯಕ್ತಿಯ ಸಂದರ್ಶನ ಹಾಗೂ ಫೋಟೋ, ವೀಡಿಯೋ ಮಾಡಲು ಪತ್ರಕರ್ತರು ತೆರಳಿದರೆ ಅಂತಹ ಪತ್ರಕರ್ತರನ್ನೂ ಸಹ ಮನೆಯಲ್ಲಿ ದಿಗ್ಬಂಧನ ದಲ್ಲಿ 14 ದಿನಗಳ ಕಾಲ ಇರಿಸಲಾಗುತ್ತದೆ. ಆದ್ದರಿಂದ ಯಾರೂ ಸಹ ಅಂತಹ ಪ್ರಯತ್ನ ಮಾಡಬಾರದು. ಕೊರೊನಾ ಬಗ್ಗೆ ಯಾವುದೇ ಪ್ರಕರಣ ಪತ್ತೆಯಾದರೂ ಸಹ ಸಾರ್ವಜನಿಕರ ಮಾಹಿತಿಗಾಗಿ ಸರ್ಕಾರವೇ ಮಾಹಿತಿ ನೀಡುತ್ತದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ತಿಳಿಸಿದ್ದಾರೆ.

ಮಾಲ್‌, ಚಿತ್ರಮಂದಿರಕ್ಕೆ ಆರ್ಥಿಕ ನಷ್ಟ: ಪ್ರತಿದಿನ ಸಹಸ್ರಾರು ಮಂದಿ ಮಾಲ್‌ಗ‌ಳಿಗೆ ಭೇಟಿ ನೀಡಿ ವಿವಿಧ ವಸ್ತುಗಳ ಖರೀದಿಯಲ್ಲಿ ನಿರತರಾಗುತ್ತಿದ್ದರು. ಲಕ್ಷಗಟ್ಟಲೆ ವ್ಯವಹಾರ ನಡೆಯುತ್ತಿತ್ತು. ಚಿತ್ರಮಂದಿರಗಳಿಗೂ ಸಿನಿಮಾ ಪ್ರೇಕ್ಷಕರು ತೆರಳಿ ಚಿತ್ರ ವೀಕ್ಷಿಸುತ್ತಿದ್ದರು. ಆದರೆ, ಕೊರೊನಾ ಎಫೆಕ್ಟ್ನಿಂದಾಗಿ ಮಾಲ್‌ ಆಫ್ ಮೈಸೂರು, ಗರುಡಮಾಲ್‌ ಸೇರಿದಂತೆ ಮೋರ್‌, ಬಿಗ್‌ಬಜಾರ್‌ ಮಾಲ್‌ಗ‌ಳು ಮತ್ತು ಗಾಯತ್ರಿ, ಶಾಂತಲಾ, ಲಕ್ಷ್ಮೀ ಸೇರಿದಂತೆ ಎಲ್ಲಾ ಚಿತ್ರಮಂದಿರಗಳು ಬಂದ್‌ ಆಗಿದ್ದವು.

ಪ್ರಮುಖ ರಸ್ತೆಗಳು ಖಾಲಿ ಖಾಲಿ: ದೇವರಾಜ ಅರಸು ರಸ್ತೆ, ಸಯ್ನಾಜಿರಾವ್‌ ರಸ್ತೆ ಮತ್ತು ಕೆ.ಆರ್‌.ವೃತ್ತದ ಸುತ್ತಲಿನ ಕೆಲ ರಸ್ತೆಗಳನ್ನು ಹೊರತುಪಡಿಸಿ, ಮಿಕ್ಕೆಲ್ಲಾ ರಸ್ತೆಗಳು ಬಹುತೇಕ ಖಾಲಿಯಾಗಿದ್ದವು. ರಸ್ತೆ ಬದಿ ಆಹಾರ ಪದಾರ್ಥಗಳನ್ನಂತೂ ಕೊಳ್ಳುವವರೇ ಇರಲಿಲ್ಲ. ಹೋಟೆಲ್‌ಗ‌ಳು ತೆರೆದಿದ್ದರೂ ಅಷ್ಟಾಗಿ ಜನರು ಕಾಣಲಿಲ್ಲ. ಪ್ರವಾಸಿ ಸ್ಥಳಗಳಲ್ಲೂ ಹೇಳಿಕೊಳ್ಳುವಷ್ಟು ಜನರಿರಲಿಲ್ಲ. ಸಾಮಾನ್ಯವಾಗಿ ವಾರಾಂತ್ಯದಲ್ಲಿ ತುಂಬಿ, ತುಳುಕುವ ರಸ್ತೆಗಳೆಲ್ಲಾ ಶನಿವಾರ ಖಾಲಿಯಾಗಿತ್ತು.

ಚಿತ್ರಮಂದಿರಗಳ ಸ್ವಚ್ಛತಾ ಕಾರ್ಯ: ಒಂದು ವಾರ ಬಂದ್‌ ಹಿನ್ನೆಲೆಯಲ್ಲಿ ನಗರದ ಹಲವು ಚಿತ್ರಮಂದಿರಗಳನ್ನು ಡೆಟೈಲ್‌, ಪೆನಾಯಿಲ್‌ ಹಾಕಿ ಪ್ರದರ್ಶನ ಸಭಾಂಗಣವನ್ನು ಹಾಗೂ ಕುರ್ಚಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯಿತು. ಮಾಲ್‌ಗ‌ಳು ಮತ್ತು ಚಿತ್ರಮಂದಿರಗಳ ಮುಂದೆ ಒಂದು ವಾರಗಳ ಕಾಲ ರಜೆ ಎಂಬ ನಾಮಫ‌ಲಕ ಪ್ರದರ್ಶಿಸಲಾಗಿತ್ತು. ಕಚೇರಿ ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸಿದ್ದು ಕಂಡು ಬಂತು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.