ಕೋವಿಡ್ 19 ಸದ್ಯದ ಪರಿಸ್ಥಿತಿಯಲ್ಲಿ ನಿಯಂತ್ರಣ


Team Udayavani, Apr 26, 2020, 1:06 PM IST

mysuru-tdy-1

ಮೈಸೂರು: ಜಿಲ್ಲೆಯಲ್ಲಿ  ಕೋವಿಡ್ 19 ಸೋಂಕು ಸದ್ಯದ ಪರಿಸ್ಥಿತಿಯಲ್ಲಿ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್‌ ಹೇಳಿದರು. ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದಿಂದ ಸೋಂಕು ತಡೆಗೆ ನೂತನವಾಗಿ ರೂಪಿಸಿರುವ ಕೋವಿಡ್‌-19 ಮೊಬೈಲ್‌ ಫೀವರ್‌ ಕ್ಲಿನಿಕ್‌ ಬಸ್‌ ಸಂಚಾರಕ್ಕೆ ಡೀಸಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿ, ಶುಕ್ರವಾರ ತಡರಾತ್ರಿ ಒಬ್ಬ ಸೋಂಕಿತ ಗುಣಮುಖನಾಗಿದ್ದು, ಇನ್ನೂ ಕೆಲವರು ಡಿಸ್ಚಾರ್ಜ್‌ ಆಗುವ ಸಾಧ್ಯತೆ ಇದೆ. ನಂಜನಗೂಡಿನ ಜ್ಯುಬಿಲಿಯಂಟ್‌ ಹಾಗೂ ಹೆಬ್ಯಾ ಗ್ರಾಮದ ಸೋಂಕಿತರ ಜೊತೆ ಪ್ರಥಮ ಸಂಪರ್ಕ ಹೊಂದಿದ್ದವರಿಗೆ ಪರೀಕ್ಷೆ ಮಾಡಲಾಗುತ್ತಿದೆ. ಒಟ್ಟಾರೆ ಪರಿಸ್ಥಿತಿ ಅವಲೋಕಿಸಿದರೆ ಸದ್ಯ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ ಎಂದರು.

ಕೆಎಸ್‌ಆರ್‌ಟಿಸಿಯಿಂದ ಕೋವಿಡ್‌-19 ಮೊಬೈಲ್‌ ಫೀವರ್‌ ಕ್ಲಿನಿಕ್‌ ಬಸ್‌ ಆರಂಭಿಸಿದ್ದು, ಮೈಸೂರು ಗ್ರಾಮಾಂತರ, ನಗರ ವಿಭಾಗದ ಅಧಿಕಾರಿಗಳು ಕಡಿಮೆ ಅವಧಿಯಲ್ಲಿ ಫೀವರ್‌ ಕ್ಲಿನಿಕ್‌ ಬಸ್‌ ನಿರ್ಮಿಸಿದ್ದಾರೆ. ನಮ್ಮ ವೈದ್ಯರ ತಂಡ ಬಸ್‌ ಪರಿಶೀಲಿಸಿ ಚಿಕಿತ್ಸೆ ನೀಡಲು ಯೋಗ್ಯವಾಗಿದೆ ಎಂದು ಒಪ್ಪಿಗೆ ಸೂಚಿಸಿದ್ದಾರೆ. ಗ್ರಾಮೀಣ ಪ್ರದೇಶ ಮತ್ತು ಸೋಂಕು ಕಂಡುಬಂದ ಗ್ರಾಮಗಳಲ್ಲಿ ಬಸ್‌ ಸಂಚರಿಸಿ ತಪಾಸಣೆ ನಡೆಸಲಿದೆ. ಒಬ್ಬರು ವೈದ್ಯರು, ವೈದ್ಯಕೀಯ ಸಿಬ್ಬಂದಿ ಜ್ವರ, ನೆಗಡಿ, ಕೆಮ್ಮು, ಮಧುಮೇಹಕ್ಕೆ ಮಾತ್ರ ಚಿಕಿತ್ಸೆ ನೀಡುತ್ತಾರೆ ಎಂದರು.

ಜಿಪಂ ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರಾ, ಡಿಎಚ್‌ಒ ಡಾ.ವೆಂಕಟೇಶ್‌, ಕೆಎಸ್‌ ಆರ್‌ಟಿಸಿ ಮೈಸೂರು ಗ್ರಾಮಾಂತರ ವಿಭಾಗದ ಅಧಿಕಾರಿ ಆರ್‌.ಅಶೋಕ್‌ ಕುಮಾರ್‌, ಎಸ್‌. ಪಿ.ನಾಗರಾಜು ಇದ್ದರು.

ಸಂಚಾರಿ ಕ್ಲಿನಿಕ್‌ ಬಸ್‌ನಲ್ಲಿ ಏನೇನಿದೆ? :  ಸಂಚಾರಿ ಫೀವರ್‌ ಕ್ಲಿನಿಕ್‌ನಲ್ಲಿ ಅರಿವು ಮೂಡಿಸುವ ವಿವಿಧ ಪೋಸ್ಟರ್‌, ರೋಗದ ಲಕ್ಷಣ, ಹರಡುವ ಬಗ್ಗೆ ಮಾಹಿತಿ ಇದೆ. ಬಾಗಿಲ ಬಳಿ ಸ್ಯಾನಿಟೈಸರ್‌ ಇದ್ದು, ಮುನ್ನ ಕೈ ತೊಳೆದು ಬಸ್‌ ಹತ್ತಬೇಕು. ರೋಗಿಗಳಿಗೆ ಆಸನದ ವ್ಯವಸ್ಥೆ ಇದೆ. ಸಿಬ್ಬಂದಿಗಾಗಿ ಕುರ್ಚಿ ಟೇಬಲ್‌ ಅಳವಡಿಸಿದ್ದು, ಚುಚ್ಚುಮದ್ದು, ಚಿಕಿತ್ಸೆ ನೀಡಲು ಬೆಡ್‌ ಸೇರಿದಂತೆ ಹಲವು ವ್ಯವಸ್ಥೆ ಇದೆ.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.