ಯುಗಾದಿ ಸಡಗರಕ್ಕೆ ಕೋವಿಡ್ 19 ಕರಿನೆರಳು


Team Udayavani, Mar 24, 2020, 5:04 PM IST

ಯುಗಾದಿ ಸಡಗರಕ್ಕೆ ಕೋವಿಡ್ 19 ಕರಿನೆರಳು

ಮೈಸೂರು: ವರ್ಷದ ಮೊದಲ ಹಬ್ಬವಾದ ಯುಗಾದಿ ವರ್ಷದಿಂದ ವರ್ಷಕ್ಕೆ ಸಡಗರ ಸಂಭ್ರಮದಿಂದ ಆಚರಿಸಲ್ಪಡುವುದು ವಾಡಿಕೆ. ಆದರೆ ಈ ಬಾರಿ ಕೋವಿಡ್ 19 ಭೀತಿಯಿಂದಾಗಿ ಯುಗಾದಿ ಸಡಗರಕ್ಕೆ ಬ್ರೇಕ್‌ ಬಿದ್ದಂತಾಗಿದೆ.

ಯುಗಾದಿ ನಮ್ಮೆಲ್ಲರಿಗೂ ಹರ್ಷದ ಸಂಕೇತ. ಅದರಲ್ಲೂ ಹಿಂದೂ ಧರ್ಮೀಯರಿಗೆ ಶುಭದ ಸಂಕೇತ. ಎಲ್ಲಾ ಸಕಲ ಕಾರ್ಯ ಗಳಿಗೂ ಮುನ್ಸೂಚನೆ. ಆದರೆ, ಜಗತ್ತಿನೆಲ್ಲಡೆ ತನ್ನ ಕಬಂಧ ಬಾಹು ವಿಸ್ತರಿಸುತ್ತಿರುವ ಕೋವಿಡ್‌ -19 ಭೀತಿಯಿಂದ ಇಡೀ ರಾಜ್ಯವೇ ಲಾಕ್‌ಡೌನ್‌ ಆಗಿರುವುದರಿಂದ ಜನರು ಸಂಭ್ರಮದಿಂದ ಹಬ್ಬ ಆಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಜಿಲ್ಲಾಡಳಿತ ಮೈಸೂರನ್ನು ಲಾಕ್‌ಡೌನ್‌ ಮಾಡಿರುವುದರಿಂದ ಸಭೆ, ಸಮಾರಂಭ, ಉತ್ಸವ, ಜಾತ್ರೆ ಮಾಡದಂತೆ ಕರೆ ನೀಡಿದ್ದು, ಗುಂಪು ಸೇರದಂತೆ ಎಚ್ಚರಿಕೆ ನೀಡಿದೆ. ಈ ನಡುವೆ ಅಗತ್ಯ ವಸ್ತುಗಳಾದ ಹಣ್ಣು, ತರಕಾರಿ, ಆಹಾರ ಸಾಮಗ್ರಿ ಸೇರಿ ದಿನಸಿ ಪದಾರ್ಥಗಳ ಮಾರಾಟಕ್ಕೆ ಅನುವು ಮಾಡಿದೆಯಾದರೂ, ವಾಣಿಜ್ಯ ವಹಿವಾಟಿಗೆ ನಿರ್ಬಂಧ ವಿಧಿಸಿದೆ. ಪರಿಣಾಮ ಹೊಸ ಬಟ್ಟೆ ಖರೀದಿಸಿ ಹಬ್ಬ ಆಚರಿಸುವ ಜನರ ಕನಸಿಗೆ ತಣ್ಣೀರು ಎರಚಿದಂತಾಗಿದೆ.

ಮನೆಯಲ್ಲೇ ಹಬ್ಬ: ಪ್ರತಿ ವರ್ಷ ಹಬ್ಬದಂದು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸುವ ವಾಡಿಕೆಗೂ ಕೊರೊನಾ ಕರಿ ನೆರಳು ಬಿದ್ದಿದೆ. ಈಗಾಗಲೇ ಎಲ್ಲಾ ದೇಗುಲಗಳ ಬಾಗಿಲು ಮುಚ್ಚಿಸಿರುವುದರಂದ ಜನ ಮನೆಯಲ್ಲೇ ಹಬ್ಬ ಆಚರಿಸಿಕೊಳ್ಳಲು ಅಣಿಯಾಗುತ್ತಿದ್ದಾರೆ.

ಹೂ ಬೆಳೆದ ರೈತರಿಗೆ ಸಂಕಷ್ಟ: ಯುಗಾದಿ ಹಬ್ಬಕ್ಕೆಂದೇ ರೈತರು ವಿವಿಧ ಭಾಗಗಳಲ್ಲಿ ಸೇವಂತಿಗೆ, ಮಲ್ಲಿಗೆ, ಕಾಕಡ, ಚೆಂಡು ಹೂ ಮತ್ತಿತರೆ ಹೂ ಬೆಳೆಯುವುದು ವಾಡಿಕೆ. ಅದರಂತೆ ಈ ಬಾರಿಯ ಯುಗಾದಿಗೆ ಹೂಗಳನ್ನು ಹತ್ತಾರು ಎಕರೆಗಳಲ್ಲಿ ರೈತರು ಬೆಳೆದಿದ್ದರು. ಆದರೆ ಕಳೆದ ಹದಿನೈದು ದಿನಗಳಿಂದ ವಿಶ್ವಾದ್ಯಂತ ಕೋವಿಡ್ 19 ಆವರಿಸಿದ ಹಿನ್ನೆಲೆ ದೇಶಾದ್ಯಂತ ದೇವಸ್ಥಾನ ಪ್ರವೇಶ ಹಾಗೂ ಹೂ ಮಾರಾಟಕ್ಕೂ ಸರ್ಕಾರ ನಿರ್ಬಂಧ ಹೇರಿದೆ. ಇದರಿಂದಾಗಿ ಹೂ ಬೆಳೆದ ರೈತರ ಬದುಕು ಬೀದಿಗೆ ಬಂದಿದೆ.

ವಸ್ತು ಖರೀದಿಗೆ ಮುಗಿಬಿದ್ದ ಜನ: ಯುಗಾದಿ ಇನ್ನೆರೆಡು ದಿನ ಇರುವಾಗಲೇ ಮೈಸೂರು ಲಾಕ್‌ ಡೌನ್‌ ಮಧ್ಯೆಯೂ ನಗರದ ದೇವರಾಜ ಮಾರುಕಟ್ಟೆ, ಅಗ್ರಹಾರ ಮಾರುಕಟ್ಟೆಗಳಲ್ಲಿ ಜನ ಜಮಾಯಿಸಿ ಹಬ್ಬಕ್ಕೆ ಬೇಕಾಗುವ ಪೂಜಾ ಸಾಮಗ್ರಿ ಖರೀದಿಸಿದರು. ಈ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಸರತಿ ಸಾಲಿನಲ್ಲಿ ನಿಂತು ಸಾಮಗ್ರಿ ಖರೀದಿಸಿದರು.

ಆಚರಣೆಗಳಿಗೆ ಬ್ರೇಕ್‌: ಯುಗಾದಿ ಅಂಗವಾಗಿ ನಾನಾ ಭಾಗದ ಗ್ರಾಮೀಣ ಪ್ರದೇಶ ಗಳಲ್ಲಿ ವಿವಿಧ ಸಂಪ್ರದಾಯ ಆಚರಣೆಗಳಿದ್ದು, ಹೊನ್ನಾರು, ಕೋಲಾಟ, ದೇಗುಲಗಳಲ್ಲಿ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಕೋವಿಡ್ 19 ಭೀತಿಯಿಂದ ಸರ್ಕಾರ ಸಂಪ್ರದಾಯಿಕ ಆಚರಣೆಗಳಿಗೆ ನಿರ್ಬಂಧ ಹೇರಿದ್ದು ಹಳ್ಳಿಗಳಲ್ಲಿ ಹೊನ್ನಾರು ಕಟ್ಟುವುದು, ಕೋಲಾಟ, ನೃತ್ಯ ಇತರೆ ಚಟುವಟಿಕೆಗಳಿಗೂ ಬ್ರೇಕ್‌ ಬಿದ್ದಂತಾಗಿದೆ.

 

ಸತೀಶ್‌ ದೇಪುರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.