ಹಳ್ಳಿಗಳಿಗೆ ಆತಂಕ ತಂದ ವಲಸಿಗರು


Team Udayavani, May 5, 2021, 3:24 PM IST

covid effect in village

ಮೈಸೂರು: ರಾಜ್ಯಾದ್ಯಂತ ಸರ್ಕಾರ ಕೊರೊನಾ ಕರ್ಫ್ಯೂಜಾರಿ ಮಾಡಿದ ನಂತರ ತಂಡೋಪ ತಂಡವಾಗಿ ತಮ್ಮ ತಮ್ಮಊರುಗಳಿಗೆ ಜನರು ಹಿಂದಿರುಗಿದ ಪರಿಣಾಮ ಜಿಲ್ಲೆಯ ಬಹುಪಾಲು ಗ್ರಾಮಗಳು ಕೊರೊನಾ ಸೋಂಕಿನಿಂದ ನರಳಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೊರೊನಾ 2ನೇ ಅಲೆ ಆರಂಭದಲ್ಲಿ ಗ್ರಾಮೀಣ ಭಾಗದ ಪಟ್ಟಣ ಹಾಗೂ ಹೋಬಳಿ ಮಟ್ಟದಲ್ಲಿ ಮಾತ್ರ ಕಾಣಿಸಿಕೊಂಡಿತ್ತು. ಇದೇ ಸಮಯದಲ್ಲಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಸೋಂಕಿನ ತೀವ್ರತೆ ಹೆಚ್ಚಾದ ಹಿನ್ನೆಲೆ ಸರ್ಕಾರಜಾರಿ ಮಾಡಿದ ಕೊರೊನಾ ಕರ್ಫ್ಯೂನಿಂದಾಗಿ ನಗರ ಪ್ರದೇಶದಲ್ಲಿ ನೆಲೆ ನಿಂತಿದ್ದ ಗ್ರಾಮೀಣಭಾಗದ ಜನರು ತಮ್ಮ ತಮ್ಮ ಊರುಗಳಿಗೆ ವಲಸೆಬಂದ ಪರಿಣಾಮ ಇಂದು ಬಹುಪಾಲು ಹಳ್ಳಿಗಳು ಕೊರೊನಾ ಹಾಟ್‌ಸ್ಪಾಟ್‌ಗಳಾಗಿ ಪರಿವರ್ತನೆಯಾಗಿವೆ.

ಮುಳುವಾದ ಹೋಂ ಐಸೋಲೇಷನ್‌: ಹಳ್ಳಿಯಲ್ಲಿರುವ ಸೋಂಕಿತರಿಗೆ ಮನೆಯಲ್ಲೇ ಹೋಂ ಐಸೋಲೇಷನ್‌ನಲ್ಲಿರುವಂತೆ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸೂಚನೆನೀಡುತ್ತಿರುವುದರಿಂದ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ.ಸೋಂಕಿತರು ಮನೆಯಲ್ಲೇ ಇರದೆ ಜಾನುವಾರು ಮೇಯಿಸುವುದು, ಕೃಷಿ ಕೆಲಸ ಸೇರಿದಂತೆ ಇತರರೊಂದಿಗೆ ಬೆರೆಯುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ಸೋಂಕು ಒಬ್ಬರಿಂದ ಮತ್ತೂಬ್ಬರಿಗೆ ವೇಗವಾಗಿ ಹರಡಲು ಕಾರಣವಾಗಿದೆ.

ಕ್ಲಿನಿಕ್‌ಗಳಲ್ಲಿ ನಿಲ್ಲದ ಚಿಕಿತ್ಸೆ: ಸೋಂಕು ಹರಡಿದ ಬಹುಪಾಲು ಮಂದಿ ಯಾರಿಗೂ ತಿಳಿಯದಂತೆ ಖಾಸಗಿ ಕ್ಲಿನಿಕ್‌ಗಳಿಗೆ ತೆರಳಿ ಇಂಜೆಕ್ಷನ್‌ ಮತ್ತು ಔಷಧ ಪಡೆದು ಸುಮ್ಮನಾಗುತ್ತಿರುವುದರಿಂದ ಸೋಂಕು ಹೆಚ್ಚಳಕ್ಕೆ ಕಾರಣವಾದರೆ, ಮತ್ತೂಂದೆಡೆ ಸೂಕ್ತ ಚಿಕಿತ್ಸೆ ಸಿಗದೆ ಹಲವರು ಮೃತಪಡುತ್ತಿದ್ದಾರೆ.

6064 ಮಂದಿ ಐಸೋಲೇಷನ್‌ನಲ್ಲಿ: ಜಿಲ್ಲೆಯ ಏಳುತಾಲೂಕಿನಿಂದ ಒಟ್ಟು 6064 ಮಂದಿ ಸೋಂಕಿತರು ಹೋಂಐಸೋಲೇಷನ್‌ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಎಚ್‌.ಡಿ.ಕೊಟೆ ತಾಲೂಕಿನಲ್ಲಿ 523, ಹುಣಸೂರಿನಲ್ಲಿ 613, ಕೆ.ಆರ್‌.ನಗರದಲ್ಲಿ 525, ನಂಜನಗೂಡು ತಾಲೂಕಿನಲ್ಲಿ 1013,ಪಿರಿಯಾಪಟ್ಟಣದಲ್ಲಿ 479, ತಿ.ನರಸೀಪುರದಲ್ಲಿ 1292ಹಾಗೂ ಮೈಸೂರು ತಾಲೂಕಿನಲ್ಲಿ 1619 ಮಂದಿಸೋಂಕಿತರು ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಸೂಕ್ತ ಚಿಕಿತ್ಸೆಗೆ ಸಜ್ಜು: ಗ್ರಾಮಿಣ ಭಾಗದ ಸೋಂಕಿತರಿಗೆ ತಾಲೂಕು ಮಟ್ಟದಲ್ಲೇ ಸಮರ್ಪಕ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಜ್ಜಾಗಿದ್ದು, ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ 40ರಿಂದ 50 ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಎ ಸಿಮrಮ್ಯಾಟಿಕ್‌ ಇರುವವರಿಗೆ ಚಿಕಿತ್ಸೆ ನೀಡಲು ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲಾಗಿದೆ. ಗ್ರಾಮೀಣ ಭಾಗದಲ್ಲಿ 6277 ಸೋಂಕಿತರು ಮೈಸೂರಿನಎಲ್ಲ ಏಳು ತಾಲೂಕುಗಳ ಗ್ರಾಮಾಂತರ ಪ್ರದೇಶದಲ್ಲಿ ಒಟ್ಟು 26,858 ಸೋಂಕಿತರಲ್ಲಿ 20,326 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 6277 ಮಂದಿ ಸಕ್ರಿಯ ಸೋಂಕಿತರಿದ್ದು,ಈವರೆಗೆ 255 ಮಂದಿ ಗ್ರಾಮೀಣ ಭಾಗದ ಸೋಂಕಿತರು ಮೃತಪಟ್ಟಿದ್ದಾರೆ.16 ಗ್ರಾಮಗಳು ಸೀಲ್‌ಡೌನ್‌ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರು ಕಂಡು ಬಂದ 16ಗ್ರಾಮಗಳನ್ನು ಕಂಟೈನ್ಮೆಂಟ್‌ ವಲಯಗಳ ನ್ನಾಗಿ ಮಾಡಿ ಇತರರು ಆ ಗ್ರಾಮಗಳಿಗೆ ತೆರಳದಂತೆ ಹಾಗೂಅಲ್ಲಿಯವರು ಬೇರೆಡೆ ಹೋಗದಂತೆ ಸೀಲ್‌ಡೌನ್‌ ಮಾಡಲಾಗಿದೆ. ಎಚ್‌.ಡಿ.ಕೋಟೆಯ 02 ಗ್ರಾಮ,ಹುಣಸೂರು ತಾಲೂಕಿನ 05, ಕೆ.ಆರ್‌. ನಗರದ 04,ಪಿರಿಯಾಪಟ್ಟಣದಲ್ಲಿ 01 ಹಾಗೂ ಮೈಸೂರು ತಾಲೂಕಿನಲ್ಲಿ 04 ಗ್ರಾಮಗಳನ್ನು ಕಂಟೈನ್ಮೆಂಟ್‌ ವಲಯಗಳನ್ನಾಗಿ ಮಾಡಲಾಗಿದೆ.

ಸತೀಶ್‌ ದೇಪುರ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.