ಸಾವಿನ ಸಂಖ್ಯೆ ಹೆಚ್ಚಳಕ್ಕೆ ಇಲ್ಲಿದೆ ಕಾರಣ
Team Udayavani, Jun 16, 2021, 6:22 PM IST
ಮೈಸೂರು: ಕೊರೊನಾ ಸೋಂಕು ದೃಢಪಟ್ಟು ಮನೆಯಲ್ಲಿಮೃತಪಟ್ಟವರೂ ಸೇರಿದಂತೆ ಹಲವು ಕೋವಿಡ್ ಸಾವುಗಳನ್ನುಪರಿಗಣನೆಗೆ ತೆಗೆದುಕೊಳ್ಳುತ್ತಿರುವ ಕಾರಣ ಕಳೆದ ಕೆಲ ದಿನಗಳಿಂದ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕು ದೃಢಪಟ್ಟು ಮನೆಯಲ್ಲಿ ಸಾವು ಸಂಭವಿಸಿದಸಂದರ್ಭದಲ್ಲಿ ಕಮ್ಯೂನಿಟಿ ಡೆತ್ ಆಡಿಟ್ನಲ್ಲಿ ವರದಿಮಾಡಿಕೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಮೈಸೂರುಜಿÇÉೆಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಪ್ರಕರಣಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದರೂ, ಸಾವಿನಪ್ರಮಾಣ ಹೆಚ್ಚಾಗಿ ದಾಖಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೆಲವು ಆಸ್ಪತ್ರೆಗಳು ಕೋವಿಡ್ನಿಂದ ಮೃತರಾದವರಪಟ್ಟಿಯನ್ನು ಒಂದು ವಾರದ ನಂತರ ತಡವಾಗಿ ಒಂದೇಬಾರಿಗೆ ಜಿಲ್ಲಾ ಸರ್ವೇಕ್ಷಣಾ ಘಟಕಕ್ಕೆ ನೀಡುತ್ತಿರುವುದರಿಂದ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ. ಕೋವಿಡ್-19 ಮರಣದ ಮಾಹಿತಿಯನ್ನು ಟ್ರಯಾಜ್ತಂಡದಿಂದ 10 ದಿನಗಳ ನಂತರ ಕರೆ ಮಾಡಿದಾಗ ಲಭ್ಯವಾದ ಮಾಹಿತಿಯನ್ನು ಪಡೆದು ರಾಜ್ಯಕ್ಕೆ ಕಳುಹಿಸಲಾಗಿದೆ. ಜೊತೆಗೆ ಸಿಟಿಸ್ಕ್ಯಾನ್ ಮೂಲಕ ಕೋವಿಡ್-19 ದೃಢೀಕೃತ ಮರಣದ ವರದಿಯನ್ನು ಕೂಡ ಸಾಸ್ಟ್ ಮೂಲಕ ಸಲ್ಲಿಸಲಾಗುತ್ತಿದೆ. ಈ ಕಾರಣದಿಂದ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿದೆ ಎಂದುಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ