![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್: ಹೆಚ್ಚುವರಿ 25 ತಂಡ ರಚನೆಗೆ ಸೂಚನೆ
Team Udayavani, Sep 30, 2020, 1:39 PM IST
![ಕೋವಿಡ್: ಹೆಚ್ಚುವರಿ 25 ತಂಡ ರಚನೆಗೆ ಸೂಚನೆ](https://www.udayavani.com/wp-content/uploads/2020/09/Mysuru-tdy-1-23-620x372.jpg)
ಮೈಸೂರು: ಜಿಲ್ಲಾಧಿಕಾರಿಯಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡ ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ದಸರಾ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.
ಕೋವಿಡ್ ಪರೀಕ್ಷೆಗೆ ಈಗಾಗಲೇ ಜಿಲ್ಲೆಯಲ್ಲಿ 70 ಸ್ಥಾಯಿ ತಂಡಗಳು ಹಾಗೂ 30 ಸಂಚಾರಿ ತಂಡಗಳು ಕೆಲಸ ಮಾಡುತ್ತಿವೆ. ಇನ್ನೂ ಹೆಚ್ಚಿನ ತಂಡಗಳ ನಿಯೋಜನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅನುಮತಿ ಕೋರಿದರು. ಈ ಹಿನ್ನೆಲೆಯಲ್ಲಿ ಈಗಿರುವ 30 ಸಂಚಾರಿ ತಂಡಗಳ ಜೊತೆಗೆ ಇನ್ನೂ 25 ತಂಡಗಳಿಗೆ ಬೇಕಾದ ಲ್ಯಾಬ್ ಟೆಕ್ನಿಷಿಯನ್ ಹಾಗೂ ಡೇಟಾ ಎಂಟ್ರಿ ಆಪರೇಟರ್ಗಳನ್ನು ನಿಯೋಜಿಸಿಕೊಳ್ಳಲು ನೂತನ ಜಿಲ್ಲಾಧಿಕಾರಿಗಳು ಅನುಮತಿ ನೀಡಿದರು.
ಕೋವಿಡ್-19 ಮಾದರಿ ಸಂಗ್ರಹಕ್ಕೆ ಬೇಕಾದ ವಿಟಿಎಂ ಉಪಕರಣಗಳು ಆರೋಗ್ಯ ಇಲಾಖೆಯಿಂದ ಬರುವುದು ತಡವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅನುದಾನದಲ್ಲೇ 20 ಸಾವಿರ ವಿಟಿಎಂ ಉಪಕರಣಗಳನ್ನು ಖರೀದಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ತಿಳಿಸಿದರು.
ಕೋವಿಡ್ ನಿಂದಾಗುವ ಸಾವಿನ ಪ್ರಮಾಣ ಕಡಿಮೆ ಮಾಡಲು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋವಿಡ್ ನಿಯಂತ್ರಣಕ್ಕಾಗಿ ನಿಯೋಜಿಸಿರುವ ಎಲ್ಲಾ ನೋಡಲ್ ಅಧಿಕಾರಿಗಳ ಸಭೆಯನ್ನೂ ಆದಷ್ಟು ಬೇಗಕರೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್. ಮಂಜುನಾಥಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೆಂಕಟೇಶ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಶಿವಪ್ರಸಾದ್, ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವಿ ಮತ್ತಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.