15 ದಿನದಲ್ಲಿ 3 ಲಕ್ಷ ಮಂದಿಗೆ ಲಸಿಕೆ ಗುರಿ


Team Udayavani, Apr 6, 2021, 1:28 PM IST

15 ದಿನದಲ್ಲಿ 3 ಲಕ್ಷ  ಮಂದಿಗೆ ಲಸಿಕೆ ಗುರಿ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಶುರುವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಹಾನ್‌ ಸಂಸ್ಥೆಯ ಖಾಸಗಿ ಆಸ್ಪತ್ರೆಯ ವತಿಯಿಂದ ಮೈಸೂರು ನಗರದಲ್ಲಿ15 ದಿನದೊಳಗಾಗಿ 3 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಮೈಸೂರಿನ ಹೆಬ್ಬಾಳ್‌ ನಗರದಲ್ಲಿರುವ ಆಶಾಕಿರಣ ಆಸ್ಪತ್ರೆಗೆ ಸೋಮವಾರ ಭೇಟಿನೀಡಿ ಮಾತನಾಡಿದ ಅವರು, ನಗರದ 65 ವಾರ್ಡ್‌ಗಳಲ್ಲಿ ಮಹಾನ್‌ ಒಕ್ಕೂಟ(ಖಾಸಗಿಆಸ್ಪತ್ರೆಗಳ ಒಕ್ಕೂಟ) ನಮ್ಮ ಕೇಂದ್ರಗಳಲ್ಲಿಉಚಿತವಾಗಿ ಲಸಿಕೆ ನೀಡಲು ಬಂದಿದ್ದಾರೆ. ಈಗಾಗಲೇ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳುಲಸಿಕೆ ನೀಡಲು ಮುಂದೆ ಬಂದಿದ್ದು, ಒಂದುವಾರದಲ್ಲಿ 50 ಖಾಸಗಿ ಆಸ್ಪತ್ರೆಗಳು ಇದಕ್ಕೆಸೇರಲಿದೆ. ಖಾಸಗಿ ಆಸ್ಪತ್ರೆಯವರು ಜನರಿಗೆಉಚಿತವಾಗಿ ಲಸಿಕೆ ನೀಡಲು ತಾವಾಗಿಯೇಮುಂದೆ ಬರುತ್ತಿರುವುದು ಶ್ಲಾಘನೀಯ ಎಂದರು.

ಮೈಸೂರು ನಗರದಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣ ಸಂಖ್ಯೆಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಜನರುಲಸಿಕೆ ಪಡೆದುಕೊಂಡರೆ ಕೊರೊನ ತಗಲುವಸಂಭವ ಕಡಿಮೆ ಇರುತ್ತದೆ. ಮೈಸೂರು ಜಿಲ್ಲೆಯಲ್ಲಿ 8 ಲಕ್ಷಕ್ಕೂ ಅಧಿಕ ಮಂದಿ 45ವರ್ಷಕ್ಕೂ ಮೇಲ್ಪಟ್ಟವರಿದ್ದು, ಮೊದಲಹಂತದಲ್ಲಿ 2ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಈಗಾಗಲೇ 53 ಲಸಿಕೆ ಕೇಂದ್ರಗಳನ್ನು ಬಹುತೇಕ ವಾರ್ಡ್‌ಗಳಲ್ಲಿ ತೆರೆದಿದ್ದು,ಮುಂದಿನ ದಿನಗಳಲ್ಲಿ ಲಸಿಕೆ ಕೇಂದ್ರಗಳನ್ನು ಹೆಚ್ಚಾಗಿ ತೆರೆಯುವ ಕಾರಣ ಲಸಿಕೆ ಪಡೆಯಲುಅರ್ಹರಿರುವವರು ಹತ್ತಿರವಿರುವ ಕೇಂದ್ರಗಳಿಗೆತೆರಳಿ ಲಸಿಕೆ ಪಡೆದುಕೊಳ್ಳಲು ಸೂಚಿಸಿದರು.ಮಾರುಕಟ್ಟೆ ಹಾಗೂ ಸಿನಿಮಾ ಮಂದಿರಗಳಲ್ಲಿ ಜನರು ಗುಂಪಾಗಿ ಸೇರುತ್ತಿದ್ದು,ಕೋವಿಡ್‌ ಮಾರ್ಗಸೂಚಿಯ ಪ್ರಕಾರಮಾರುಕಟ್ಟೆಗಳನ್ನು ಹಿಂದಿನಂತೆಯೇ ವಿಕೇಂದ್ರೀಕರಣ ಮಾಡಲು ಸೂಚಿಸಲಾಗಿದೆ. ಸರ್ಕಾರದ ಆದೇಶದಂತೆ ಏ.07ರ ನಂತರಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗೆ ಅವಕಾಶ ನೀಡಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಆರೋಗ್ಯಾಧಿಕಾರಿ ಡಾ.ನಾಗರಾಕ್‌, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ಸಿರಾಜ್‌, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ರವಿ ಸೇರಿದಂತೆ ಇತರರು ಹಾಜರಿದ್ದರು.

 

ಜಿಲ್ಲೆಗೆ 5 ಲಕ್ಷ ಲಸಿಕೆ ಬೇಕಿದೆ :

ಜಿಲ್ಲೆಯಲ್ಲಿ 45ರಿಂದ 60 ವರ್ಷದೊಳಗಿನವರು 8 ಲಕ್ಷ ಜನರಿದ್ದಾರೆ. ನಮಗೆ ಈಗ ಮೂರು ದಿನಗಳಿಗೆಸಾಕಾಗುವಷ್ಟು ಲಸಿಕೆ ಇದೆ. ಕೊವ್ಯಾಕ್ಸಿನ್‌-ಕೊವಿಶೀಲ್ಡ್‌ ಲಸಿಕೆ ಹಾಕುತ್ತಿದ್ದು, ಶಿಕ್ಷಿತರು, ನಗರ ಪ್ರದೇಶದವರು ಕೊವ್ಯಾಕ್ಸಿನ್‌ ಲಸಿಕೆ ಹಾಕುವಂತೆ ಕೇಳುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್‌ ತಿಳಿಸಿದರು. ಜಿಪಂ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಲಸಿಕಾ ಕಾರ್ಯಕ್ರಮದ ಕುರಿತ ಅಧಿಕಾರಿಗಳ ಸಭೆ ನಡೆಸಿ ಈ ವಿಷಯ ಪ್ರಸ್ತಾಪಿಸಿದ ಅವರು,ನಮಗೆ 5 ಲಕ್ಷ ಲಸಿಕೆ ಬೇಕಿದೆ. ಲಸಿಕೆ ಬಂದರೆ 10 ದಿನಗಳೊಳಗೆ ಲಸಿಕೆ ಹಾಕುವ ಪ್ರಮಾಣ ಹೆಚ್ಚಿಸಬಹುದು ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಜೊತೆ ದೂರವಾಣಿ ಮೂಲಕ ಮಾತುಕತೆನಡೆಸಿದರು.ಜಿಲ್ಲೆಗೆ 5 ಲಕ್ಷ ಲಸಿಕೆ ಬೇಕಿದ್ದು, ಈಗ 2 ಲಕ್ಷ ಕಳುಹಿಸಿ, ಉಳಿದ 3 ಲಕ್ಷ ಲಸಿಕೆಯನ್ನು ಮುಂದಿನ ವಾರ ಕಳುಹಿಸಿ. ಮೈಸೂರಿನಲ್ಲಿ ಸೋಂಕು ಜಾಸ್ತಿಯಾಗಿರುವುದರಿಂದ ತಲ್ಲಣವಾಗಿದೆ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟರು. ತಕ್ಷಣವೇ ಒಂದು ಲಕ್ಷ ಲಸಿಕೆ ಕಳುಹಿಸಿಕೊಡಲು ಆಶ್ವಾಸನೆ ನೀಡಿದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.