ಅರಣ್ಯ ಸಿಬ್ಬಂದಿಗೆ ಲಸಿಕೆ ನೀಡಿದ್ದಕ್ಕೆ ನೋಟಿಸ್‌ ಜಾರಿಗೊಳಿಸಿದ್ದು ಸರಿನಾ?


Team Udayavani, Jun 1, 2021, 12:40 PM IST

ಅರಣ್ಯ ಸಿಬ್ಬಂದಿಗೆ ಲಸಿಕೆ ನೀಡಿದ್ದಕ್ಕೆ ನೋಟಿಸ್‌ ಜಾರಿಗೊಳಿಸಿದ್ದು ಸರಿನಾ?

ಹುಣಸೂರು: ಅರಣ್ಯ ಇಲಾಖೆ ಸಿಬ್ಬಂದಿಗೆ ಲಸಿಕೆ ನೀಡಿರುವ ಕ್ರಮವನ್ನು ಪ್ರಶ್ನಿಸಿ ತಾಲೂಕು ಆರೋಗ್ಯಾಧಿಕಾರಿಗಳಿಗೆ (ಟಿಎಚ್‌ಒ) ಜಿಲ್ಲಾ ಆರೋಗ್ಯಾಧಿಕಾರಿಗಳು ನೋಟಿಸ್‌ ಜಾರಿಗೊಳಿಸಿರುವುದು ಅರಣ್ಯ ಇಲಾಖೆ ಸಿಬ್ಬಂದಿಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಜಿಲ್ಲೆಯ ಮೂರು ತಾಲೂಕುಗಳ ಆರೋಗ್ಯಾಧಿಕಾರಿಗಳು ಹಾಗೂ ಅರಣ್ಯಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ನೀಡಿರುವುದಕ್ಕೆ ರಾಜ್ಯ ಮಟ್ಟದ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಎಚ್‌.ಡಿ.ಕೋಟೆ ಮತ್ತು ನಂಜನಗೂಡುತಾಲೂಕುಆರೋಗ್ಯಾಧಿಕಾರಿಗಳಿಗೆ ತಕ್ಷಣವೇ ಸಮಜಾಯಿಷಿ ನೀಡುವಂತೆ ಸೂಚಿಸಿ ಮೇ 28ರಂದು ನೋಟಿಸ್‌ ನೀಡಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ನೀಡಿರುವುದನ್ನು ಪ್ರಶ್ನಿಸಿ ಜಾರಿಗೊಳಿಸಿರುವ ನೋಟಿಸ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಬಗ್ಗೆಪತ್ರಿಕೆಯೊಂದಿಗೆಮಾತನಾಡಿದನಾಗರಹೊಳೆ ಹುಲಿಯೋಜನೆ ನಿರ್ದೇಶಕ ಡಿ.ಮಹೇಶ್‌ ಕುಮಾರ್‌,”ಕಳೆದಒಂದುವರ್ಷದಿಂದ ಕೋವಿಡ್ ಮೈಸೂರು ಜಿಲ್ಲೆಯಲ್ಲಿ ಹೆಚ್ಚಿದ್ದು, ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆಯೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಡಂಚಿನ ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರ ಅರಣ್ಯ ಸಿಬ್ಬಂದಿಗಳನ್ನು ಕೋವಿಡ್ ವಾರಿಯರ್ಸ್ ಗಳೆಂದು ಪರಿಗಣಿಸಿದೆ. ಹೀಗಾಗಿ ಸಿಬ್ಬಂದಿ ಆಯಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲೇ ಲಸಿಕೆ ಪಡೆದಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಕಳೆದ 15 ತಿಂಗಳಿನಿಂದ ಅರಣ್ಯ ಸಿಬ್ಬಂದಿಗಳು ಸಂರಕ್ಷಿತಾರಣ್ಯದಲ್ಲಿಅಕ್ರಮ ಪ್ರವೇಶ, ಕಳ್ಳಬೇಟೆ ತಡೆ ಸೇರಿದಂತೆ ಉದ್ಯಾನದಂಚಿನ ಗ್ರಾಮಗಳಲ್ಲಿ ಎದುರಾದ ವನ್ಯಪ್ರಾಣಿ ಮಾನವನ ನಡುವಿನ ಸಂಘರ್ಷ ತಡೆಗಟ್ಟಲು ಕಾಡಂಚಿನ ಜನರೊಂದಿಗೆ ಸೇರಿ ಅವಿರತವಾಗಿ ಶ್ರಮ ಹಾಕುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಸೋಂಕು ತಗುಲಿದಲ್ಲಿ ವನ್ಯಪ್ರಾಣಿಗಳಿಗೂ ಸರಾಗವಾಗಿ ಹರಡಲಿದ್ದು. ಸಿಬ್ಬಂದಿಗೆ ಮೊದಲ ಆದ್ಯತೆಯಾಗಿ ಲಸಿಕೆ ನೀಡಬೇಕಿತ್ತು. ಹೀಗಿರುವ ವೇಳೆಯೇ ಕಾಡಂಚಿನ ತಾಲೂಕುಗಳಆರೋಗ್ಯಾಧಿಕಾರಿಗಳಿಗೆ ಲಸಿಕೆ ನೀಡಿರುವ ಬಗ್ಗೆ ನೋಟಿಸ್‌ ನೀಡಿರುವುದು ಬೇಸರ ಮೂಡಿಸಿದೆ ಎಂದರು.

ಅರ್ಧದಷ್ಟು ಮಂದಿಗೆ ಮಾತ್ರ ಲಸಿಕೆ:

ನಾಗರಹೊಳೆ ಹುಲಿಯೋಜನೆಯ ಹುಣಸೂರು ನಿರ್ದೇಶಕರ ಕಚೇರಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಹಾಗೂಸಿಬ್ಬಂದಿಗಳು ಸೇರಿ 605 ಮಂದಿಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ 310 ಮಂದಿ ಮಾತ್ರ ಮೊದಲ ಹಂತದ ಲಸಿಕೆ ಪಡೆದಿದ್ದರೆ, 22 ಮಂದಿಗೆ 2ನೇ ಹಂತದ ಲಸಿಕೆ ಸಿಕ್ಕಿದೆ. ಇನ್ನೂ 292 ಮಂದಿ ಲಸಿಕೆ ಪಡೆಯಬೇಕಿದೆ. ಇವರಲ್ಲಿ ಕೊಡಗು ಜಿಲ್ಲೆ ಹಾಗೂ ಕೇರಳ ಸಂಪರ್ಕ ಕಲ್ಪಿಸುವ ಆನೆಚೌಕೂರು ವಲಯದಲ್ಲಿ 151 ಮಂದಿಯಲ್ಲಿ ಮೂವರು ಮಾತ್ರ ಲಸಿಕೆ ಪಡೆದಿದ್ದಾರೆ. ಅಂತರ ಸಂತೆ ವಲಯದಲ್ಲಿ ಲಸಿಕೆಯನ್ನೇ ಪಡೆದಿಲ್ಲ. ಹುಣಸೂರು ವಲಯದಲ್ಲಿ ಕೆಲವರು ಲಸಿಕೆ ಪಡೆದಿದ್ದರೆ, ಪ್ರಾದೇಶಿಕ ಅರಣ್ಯ ವಿಭಾಗದಲ್ಲಿ ಅರ್ಧದಷ್ಟು ಮಂದಿ ಮಾತ್ರ ಲಸಿಕೆ ಪಡೆದಿದ್ದು, ಜೀವಭಯದ ನಡುವೆಯೂ ಅರಣ್ಯ ರಕ್ಷಣೆಯಲ್ಲಿ ಮುಂಚೂಣಿಯ ಸಿಬ್ಬಂದಿಗಳಿಗೆ ಲಸಿಕೆ ನೀಡಿರುವಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಿಂದ ಟಿಎಚ್‌ಒಒಗಳಿಗೆ ನೋಟಿಸ್‌ಜಾರಿಗಿಳಿಸಿರುವುದು ಆಕ್ರೋಶ ಮೂಡಿಸಿದೆ.

20 ಅರಣ್ಯ ಸಿಬ್ಬಂದಿಗೆ ಸೋಂಕು: ಕಳೆದ 10 ದಿನಗಳ ಹಿಂದೆ ಹುಲಿ ಪತ್ತೆ ಕಾರ್ಯಾಚರಣೆ ಮತ್ತಿತರ ಕಡೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ವೀರನಹೊಸಹಳ್ಳಿ-4, ಆನೆಚೌಕೂರು-7, ನಾಗರಹೊಳೆ-2, ಅಂತರಸಂತೆ, ಮೇಟಿಕುಪ್ಪೆ ತಲಾ ಒಂದು, ತಿತಿಮತಿ ಹಾಗೂ ಹ್ಯಾಂಡ್‌ ಪೋಸ್ಟ್‌ನ ಎಸ್‌ಟಿಪಿಎಫ್‌ನ 7 ಸೇರಿದಂತೆ 20 ಮಂದಿಗೆ ಸೋಂಕು ತಗುಲಿದೆ.

 

-ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.