ಬೆಳೆ ನಷ್ಟ: ಗದ್ದೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ


Team Udayavani, Jun 18, 2018, 12:41 PM IST

m7-bele.jpg

ಮೈಸೂರು: ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಜಲಾಶಯಗಳ ಭರ್ತಿಗೆ ಕಾರಣವಾದರೆ, ಮತ್ತೂಂದೆಡೆ ರೈತರು ಬೆಳೆದ ಬೆಳೆಗಳು ವರುಣನ ಅಬ್ಬರಕ್ಕೆ ನಾಶವಾಗುವ ಮೂಲಕ ಅನ್ನದಾತನ ಬದುಕು ಬೀದಿಗೆ ಬಂದಂತಾಗಿದೆ. ಜಿಲ್ಲೆಯಲ್ಲಿ ಸುರಿದ ಮಳೆಯ ಆರ್ಭಟಕ್ಕೆ ಉಂಟಾದ ಅನಾಹುತದ ಪರಿಣಾಮ ಜಿಲ್ಲೆಯ ರೈತನೊಬ್ಬ ಆತ್ಮಹತ್ಯೆ ದಾರಿ ಹಿಡಿದಿದ್ದ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. 

ನಂಜನಗೂಡು ತಾಲೂಕಿನ ಕುಪ್ಪರಹಳ್ಳಿ ಗ್ರಾಮದ ನಿವಾಸಿ ಬಸವಯ್ಯ ಆತ್ಮಹತ್ಯೆಗೆ ಯತ್ನಿಸಿದ ರೈತ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಜಿಲ್ಲೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಗೆ ಅಂದಾಜು 38 ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿತ್ತು.

ಹೀಗಾಗಿ ನದಿ ನೀರಿನ ಪ್ರಮಾಣ ಅಪಾಯದ ಮಟ್ಟವನ್ನು ಮೀರಿ ಮೈದುಂಬಿಗೊಂಡು ಹರಿಯಲು ಪ್ರಾರಂಭಿಸಿದ್ದು, ಇದರ ಪರಿಣಾಮ ನದಿಯ ಅಕ್ಕಪಕ್ಕದ ಗದ್ದೆಗಳು ಸಹ ನೀರಿನಲ್ಲಿ ಜಾಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ರೈತ ಬಸವಯ್ಯ ಅವರ ಗದ್ದೆಯಲ್ಲಿ ಬೆಳೆದಿದ್ದ ಭತ್ತ ಸಹ ನೀರು ಪಾಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬ ಸ್ಥಿತಿಗೆ ಕಾರಣವಾಗಿದೆ. 

ಗದ್ದೆಯಲ್ಲಿ ಬೆಳೆದಿದ್ದ ಬೆಳೆಯನ್ನು ಮಾರಾಟ ಮಾಡಿ ತನ್ನ ನಾಲ್ಕು ಲಕ್ಷ ರೂ. ಸಾಲವನ್ನು ತೀರಿಸುವ ಆಶಾಭಾವನೆ ಬಸವಯ್ಯ ಅವರದ್ದಾಗಿತ್ತು. ಆದರೆ ಏಕಾಏಕಿ ಸುರಿದ ಮಳೆಯಿಂದಾಗಿ ಗದ್ದೆಯಲ್ಲಿ ಬೆಳೆದು ನಿಂತಿದ್ದ ಬೆಳೆ ನಾಶವಾದ ಕಾರಣಕ್ಕೆ ಮನನೊಂದ ಬಸವಯ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅದರಂತೆ ತನ್ನ ಗದ್ದೆಯಲ್ಲಿ ಬೆಳೆದು ನಿಂತಿದ್ದ ಬೆಳೆ ನೀರುಪಾಲಾಗಿರುವಂತೆ ತಾನು ಸಹ ಅದೇ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ ಅದೃಷ್ಟವಾಶಾತ್‌ ಇದನ್ನು ಗಮನಿಸಿದ ಆತನ ಮಕ್ಕಳು ಕೂಡಲೇ ರಕ್ಷಿಸಿ, ಸಮಾಧಾನಪಡಿಸಿದ್ದಾರೆ.

ಈ ನಡುವೆ ರೈತ ಬಸವಯ್ಯ ಆತ್ಮಹತ್ಯೆಗೆ ಯತ್ನಿಸಿದ ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಅಕಾರಿಗಳು, ಗ್ರಾಮಕ್ಕೆ ಹಾಗೂ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಅದೇ ರೀತಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಸವಯ್ಯ ನಿವಾಸಕ್ಕೂ ಭೇಟಿ ನೀಡಿದ ಮೈಸೂರು ಉಪವಿಭಾಗಕಾರಿ ಶಿವೇಗೌಡ, ಬೆಳೆ ನಷ್ಟದ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. 

ಟಾಪ್ ನ್ಯೂಸ್

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.