ಜಿಲ್ಲೆಯಲ್ಲಿ ಅತಿವೃಷ್ಟಿಗೆ 1,320 ಹೆಕ್ಟೇರ್‌ ಬೆಳೆ ಹಾನಿ


Team Udayavani, Dec 1, 2021, 2:27 PM IST

ಬೆಳೆ ಮಳೆ

ಮೈಸೂರು: ಇತ್ತೀಚೆಗೆ ಸುರಿದ ಹಿಂಗಾರು ಸತತ ಮಳೆಯಿಂದಾಗಿ ಮೈಸೂರು ಜಿಲ್ಲೆಯಲ್ಲಿ 1320 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಕೃಷಿ, ತೋಟಗಾರಿಕೆ ಫ‌ಸಲು ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತೆ, ವರ್ಷವಿಡೀ ಶ್ರಮಪಟ್ಟು ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆಯಿಂದಾಗಿ ನೆಲ ಕಚ್ಚಿದೆ.

ಸತತ ಒಂದು ತಿಂಗಳು ಕಾಲ ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಮೈಸೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ಬೆಳೆದಿದ್ದ ಬೆಳೆ ಹೊಲದಲ್ಲೇ ಕೊಳೆತು ಹೋಗಿದ್ದು, ರೈತರು ನಷ್ಟ ಅನುಭವಿಸಿದಂತಾಗಿದೆ.

945.7 ಹೆಕ್ಟೇರ್‌ನಲ್ಲಿ ಬೆಳೆ ನಾಶ: ಜಿಲ್ಲೆಯ ಹುಣಸೂರು, ಎಚ್‌.ಡಿ.ಕೋಟೆ, ಕೆ.ಆರ್‌. ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಶ್ರಿತ ಮತ್ತು ನೀರಾವರಿ ಆಶ್ರಿತ ಕೃಷಿ ಭೂಮಿಯಲ್ಲಿ 1,384 ರೈತರು 945.7 ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ರಾಗಿ, ಭತ್ತ, ಮೆಕ್ಕೆ ಜೋಳ, ಚಿಯಾ ಸೇರಿದಂತೆ ವಿವಿಧ ಬೆಳೆಗಳು ನಾಶವಾಗಿದ್ದು, ಸುಮಾರು 72.47 ಲಕ್ಷ ರೂ. ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

375 ಹೆಕ್ಟೇರ್‌ ತೋಟಗಾರಿಕೆ ಬೆಳೆ ನಾಶ: ಸತತ ಒಂದು ತಿಂಗಳು ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜಿಲ್ಲೆಯ ನಂಜನಗೂಡು, ಮೈಸೂರು ತಾಲೂಕು, ಪಿರಿಯಾಪಟ್ಟಣ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ 375 ಹೆಕ್ಟೇರ್‌ ತೋಟಗಾರಿಕೆ ಬೆಳೆ ನೆಲ ಕಚ್ಚಿದೆ. ಸರಿಸುಮಾರು 67 ಲಕ್ಷ ರೂ. ಮೌಲ್ಯದ ತರಕಾರಿ ಬೆಳೆ, ಬಾಳೆ, ಶುಂಠಿ ಕೊಳೆತು ಹೋಗಿದ್ದು, ಉತ್ತಮ ಫ‌ಸಲು ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗುವಂತಾಗಿದೆ.

ಅವೈಜ್ಞಾನಿಕ ಬೆಳೆ ಪರಿಹಾರ: ಕೃಷಿ ಭೂಮಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಫ‌ಸಲು ಕಳೆದುಕೊಂಡ ರೈತನಿಗೆ ವೈಜ್ಞಾನಿಕವಾಗಿ ಬೆಳೆ ಪರಿಹಾರ ನೀಡದ ಕೃಷಿ ಇಲಾಖೆ ಪ್ರತಿ ಹೆಕ್ಟೇರ್‌ಗೆ ಕೇವಲ 6,800 ರೂ. ಮತ್ತು 13,500 ರೂ. ನಂತೆ ಪರಿಹಾರ ವಿತರಿಸುತ್ತಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಎಂಬ ಗಾದೆ ಮಾತಿನಂತಾಗಿದೆ. ಜೊತೆಗೆ ತೋಟಗಾರಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ನೀಡುತ್ತಿರುವುದು ಯಾವುದೇ ಉಪಯೋಗಕ್ಕೆ ಬಾರದಂತಾಗಿದೆ ಎಂಬುದು ರೈತರ ಅಳಲಾಗಿದೆ.

ಇಕ್ಕಟ್ಟಿನ ಸ್ಥಿತಿಯಲ್ಲಿ ರೈತ: ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಕಡೆ ಭತ್ತ, ರಾಗಿ ಕಟಾವಿಗೆ ಬಂದಿದೆ. ಆದರೆ ಕಳೆದೊಂದು ವಾರದಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಳೆ ಬೀಳುವ ಆತಂಕದಲ್ಲಿರುವ ರೈತರು ಕೈಗೆ ಬಂದಿರುವ ಬೆಳೆಯನ್ನು ಮನೆಗೆ ಕೊಂಡೊಯ್ಯಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಪರಿಣಾಮ ಶೇ.90 ರಷ್ಟು ರೈತರ ಭತ್ತ ಮತ್ತು ರಾಗಿ ಗದ್ದೆ-ಹೊಲದಲ್ಲೇ ಮೊಳಕೆಯೊಡೆಯುತ್ತಿದ್ದು, ಇದರಿಂದ ಅನ್ನದಾತ ಕಂಗಾಲಾಗಿ¨ªಾನೆ. ಈಗಾಗಲೇ ರೈತರು ಉಳುಮೆ, ನಾಟಿ, ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳಿಗೆ ಮಾಡಿದ್ದ ಖರ್ಚು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

 ರೈತರ ಖಾತೆಗೆ ಶೀಘ್ರ ಬೆಳೆ ಪರಿಹಾರ ಹಣ ಜಮೆ

ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಶೀಘ್ರವೇ ರೈತರ ಖಾತೆಗೆ ಬೆಳೆ ಪರಿಹಾರ ಹಣವನ್ನು ಸರ್ಕಾರ ಬಿಡುಗಡೆ ಮಾಡಲಿದೆ.

ಜಿಲ್ಲೆಯಲ್ಲಿ 945.7 ಹೆಕ್ಟೇರ್‌ ಮಳೆಯಾಶ್ರಿತ ಮತ್ತು ನಿರಾವರಿ ಭೂಮಿಯಲ್ಲಿ ಬೆಳೆದಿದ್ದ ಫ‌ಸಲು ನಾಶವಾಗಿದ್ದು, ಮಳೆಯಾಶ್ರಿತ ಪ್ರತಿ ಹೆಕ್ಟೇರ್‌ ಗೆ 6800 ರೂ., ನೀರಾವರಿಯಾಶ್ರಿತ ಪ್ರತಿ ಹೆಕ್ಟೇರ್‌ಗೆ 13,500 ರೂ. ಪರಿಹಾರ ನೀಡಲಾಗುವುದು ಎಂದು ಕೃಷಿ ಇಲಾಖೆ ಉಪನಿರ್ದೇಶಕ ಮಹಂತೇಶಪ್ಪ ತಿಳಿಸಿದರು.

 ಅಕ್ಟೋಬರ್‌-ನವೆಂಬರ್‌ನಲ್ಲಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ 375 ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ನಾಶವಾಗಿರುವುದನ್ನು ಸರ್ವೆ ಮಾಡಲಾಗಿದೆ. ಸರ್ಕಾರದ ಆದೇಶದಂತೆ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ಬೆಳೆ ಪರಿಹಾರ ವಿತರಿಸಲಾಗುವುದು. ರುದ್ರೇಶ್‌, ಉಪನಿರ್ದೇಶಕ ತೋಟಗಾರಿಕೆ ಇಲಾಖೆ, ಮೈಸೂರು.

 – ಸತೀಶ್‌ ದೇಪುರ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.