ಸಂಶೋಧನೆ ಪ್ರಗತಿಗೆ ಸಿಎಸ್‌ಐಆರ್‌-ಜೆಎಸ್‌ಎಸ್‌ ವಿವಿ ಒಪ್ಪಂದ


Team Udayavani, Jan 6, 2019, 6:01 AM IST

m4-sanmshodane.jpg

ಮೈಸೂರು: ನಗರದ ಸಿಎಸ್‌ಐಆರ್‌- ಸಿಎಫ್ಟಿಆರ್‌ಐ ಸಂಸ್ಥೆಯು ಜೆಎಸ್‌ಎಸ್‌ ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾಲಯದೊಂದಿಗೆ ಸಂಶೋಧನೆ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಂಡಿದೆ.

ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಜೆಎಸ್‌ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ಕುಲಪತಿ ಡಾ.ಬಿ.ಜಿ. ಸಂಗಮೇಶ್ವರ ಮತ್ತು ಸಿಎಫ್ಟಿಆರ್‌ಐ ನಿರ್ದೇಶಕ ಡಾ. ರಾಘವೇಂದ್ರರಾವ್‌ ಅವರು ಒಪ್ಪಂದಕ್ಕೆ ಸಹಿ ಹಾಕಿ, ಒಡಂಬಡಿಕೆಗಳನ್ನು ವಿನಿಮಯ ಮಾಡಿಕೊಂಡರು.

ಆರೋಗ್ಯ ರಕ್ಷಣೆಗೆ ಪೂರಕವಾದ ಆಹಾರ ತಯಾರಿಕೆ, ನ್ಯೂಟ್ರಸ್ಪುಟಿಕಲ್‌ ತಯಾರಿಕೆ ಇವುಗಳ ಮೇಲೆ ಮಿಷನ್‌ ಲರ್ನಿಂಗ್‌ ಮತ್ತು ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ನ ಪ್ರಭಾವ- ಈ ವಿಷಯಗಳ ಮೇಲೆ ಸಂಶೋಧನೆ ಮಾಡಲು ಹಾಗೂ ಜಂಟಿ ಕಾರ್ಯ ಯೋಜನೆಗಳು, ಕಾರ್ಯಾಗಾರಗಳು, ಅಧ್ಯಾಪಕರು ಬೋಧನಾಭಿವೃದ್ಧಿ ಕಾರ್ಯಕ್ರಮಗಳ ಆಯೋಜನೆಗೆ ಈ ಒಡಂಬಡಿಕೆ ನೆರವಾಗಲಿದೆ.

ಜಾಗತಿಕ ಸ್ಥಾನ: ಈ ಸಂದರ್ಭದಲ್ಲಿ ಜೆಎಸ್‌ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ಕುಲಪತಿ ಡಾ.ಬಿ.ಜಿ. ಸಂಗಮೇಶ್ವರ ಮಾತನಾಡಿ, ಆವಿಷ್ಕಾರ ಮತ್ತು ಸಂಶೋಧನಾ ಪ್ರಗತಿ ಈ ಒಡಂಬಡಿಕೆಯಿಂದ ಸಾಧ್ಯ. ಎಐಸಿಟಿ ಮತ್ತು ಯುಜಿಸಿ ಸಲಹೆಯಂತೆ ಭಾರತದ ವಿಶ್ವವಿದ್ಯಾಲಯಗಳು ಸಂಶೋಧನಾ ಕೇಂದ್ರಗಳಾಗಿ ಮಾರ್ಪಾಡಾಗುವುದರಿಂದ ಜಾಗತಿಕ ಮಟ್ಟದಲ್ಲಿ ಸ್ಥಾನ ಗಳಿಸಲು ಸಹಕಾರಿ ಆಗಲಿದೆ ಎಂದು ತಿಳಿಸಿದರು.

ಲಾಭದಾಯಕ: ಸಿಎಫ್ಟಿಆರ್‌ಐ ನಿರ್ದೇಶಕ ಡಾ. ರಾಘವೇಂದ್ರರಾವ್‌ ಮಾತನಾಡಿ, ಸಿಎಫ್ಟಿಆರ್‌ಐ ಮತ್ತು ಜೆಎಸ್‌ಎಸ್‌ ವಿಜ್ಞಾನ ಮತ್ತು ತಾಂತ್ರಿಕ ವಿವಿ ಒಡಂಬಡಿಕೆಯಿಂದ ಉತ್ತಮ ಸಂಶೋಧನಾ ಅವಕಾಶಗಳಿಗೆ ನೆರವಾಗಲಿದೆ. ಈ ಸಹಯೋಗವು ನೂತನ ಕೈಗಾರಿಕೆಗಳ ಅಗತ್ಯತೆ ಮತ್ತು ಸಮಾಜಕ್ಕೆ ಲಾಭದಾಯಕವಾಗಿರುತ್ತದೆ ಎಂದು ಹೇಳಿದರು.

ಈ ವೇಳೆ ಸಿಎಫ್ಟಿಆರ್‌ಐ ವಿಜ್ಞಾನಿಗಳಾದ ಡಾ. ಕೇಶವಪ್ರಕಾಶ್‌, ಡಾ. ಚೌಹಾನ್‌, ಡಾ. ಸತ್ಯೇಂದ್ರ ರಾವ್‌, ಮಣಿಲಾಲ್‌, ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‌ಎಸ್‌ ವಿಜ್ಞಾನ ಮತ್ತು ತಾಂತ್ರಿಕ ವಿವಿ ಕುಲಸಚಿವ ಡಾ.ಕೆ.ಎಸ್‌.ಲೋಕೇಶ್‌, ಮಲ್ಲಿಕಾರ್ಜುನ ಆರಾಧ್ಯ, ಎಸ್‌ಜೆಸಿಇ ಪ್ರಾಂಶುಪಾಲ ಡಾ.ಟಿ.ಎನ್‌. ನಾಗಭೂಷಣ್‌, ಡಾ.ಪಿ. ನಾಗೇಶ್‌, ಡಾ.ಎನ್‌. ಹರಪ್ರಸಾದ್‌, ಡಾ.ಎಂ. ಪ್ರದೀಪ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.