ಮಾರಮ್ಮ ಜಾತ್ರೆಗೆ ದಲಿತರಿಗೆ ಪ್ರವೇಶ ನಿರಾಕರಣೆ


Team Udayavani, Mar 5, 2020, 3:00 AM IST

maramma-jatre

ಎಚ್‌.ಡಿ.ಕೋಟೆ: ಸರಗೂರು ತಾಲೂಕಿನ ಸಾಗರೆ ಗ್ರಾಮದಲ್ಲಿ ಮಾರಮ್ಮ ಜಾತ್ರಾ ಮಹೋತ್ಸವ ಗುರುವಾರದಿಂದ 12 ದಿನಗಳ ಕಾಲ ನಡೆಯಲಿದ್ದು, ಆಸ್ಪೃಶ್ಯತೆ ಆಚರಣೆ ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನಕ್ಕೆ ದಲಿತರ ಪ್ರವೇಶ ಮಾಡುವಂತಿಲ್ಲ ಎಂದು ಸವರ್ಣಿಯರು ತಿಳಿಸಿದ್ದಾರೆ ಎನ್ನಲಾಗಿದ್ದು, ಇದು ದಲಿತರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ನಡೆಯುವ ಜಾತ್ರೆಯಲ್ಲಿ ನಮಗೆ ಮುಕ್ತ ಅವಕಾಶ ನೀಡಬೇಕು ಎಂದು ದಲಿತ ಸಮುದಾಯದ ಮುಖಂಡರು ಪೊಲೀಸ್‌ ಠಾಣೆ ಮೆಟ್ಟಿಲಿರುವುದರ ಜೊತೆಗೆ ತಹಶೀಲ್ದಾರ್‌ ಗಮನ ಸೆಳೆದಿದ್ದಾರೆ. ಸಾಗರೆ ಗ್ರಾಮದಲ್ಲಿ ಮಾ.5ರಿಂದ ಆರಂಭಗೊಳ್ಳುವ ಜಾತ್ರಾ ಮಹೋತ್ಸವ 17ರಂದು ಮುಕ್ತಾಯಗೊಳ್ಳಲಿದೆ. ಜಾತ್ರೆ ಹಿನ್ನೆಲೆಯಲ್ಲಿ ಇತ್ತೀಚೆಗೆ ದೇವಸ್ಥಾನದ ಬಳಿ ಸಭೆ ನಡೆಸಿದ್ದ ಸವಣೀಯರು, “ಜಾತ್ರೆಯಲ್ಲಿ ದಲಿತರಿಗೆ ಅವಕಾಶ ನೀಡುವುದಿಲ್ಲ. ದೇವಾಲಯದಲ್ಲಿ ಪೂಜಾ ಕೈಂಕರ್ಯ ನಡೆಸುವಂತಿಲ್ಲ’ ಎಂದು ಸೂಚನೆ ನೀಡಿದ್ದಾರೆ ಎಂದು ದಲಿತರು ಆಪಾದಿಸಿದ್ದಾರೆ.

ಗ್ರಾಮದಲ್ಲಿ ಎಲ್ಲರಂತೆ ದಲಿತರಗೂ ಸಮಾನತೆ ಕಲ್ಪಿಸಬೇಕು. ದೇವಸ್ಥಾನ ಪೂಜಾ ಕೈಂಕರ್ಯ ಸೇರಿದಂತೆ ದೇವರ ದರ್ಶನಕ್ಕೆ ಅನುಮತಿ ನೀಡಬೇಕು. ಇದಕ್ಕೆ ಅವಕಾಶ ನೀಡಲು ನಿರಾಕರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್‌ ಆರ್‌.ಮಂಜುನಾಥ್‌ ಮತ್ತು ಸರ್ಕಲ್‌ ಇನ್ಸ್‌ಪೆಕ್ಟರ್‌ ಪುಟ್ಟಸ್ವಾಮಿ ಅವರಿಗೆ ದಲಿತ ಸಮುದಾಯದ ಮುಖಂಡರು ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.

ಅಸ್ಪೃಶ್ಯತೆ: ಸರಗೂರು ತಾಲೂಕಿನ ಸಾಗರೆ ಗ್ರಾಮದಲ್ಲಿ ಸುಮಾರು 12 ಕೋಮುಗಳ ಜನ ವಾಸವಾಗಿದ್ದಾರೆ. ಪ್ರಬಲ ಸಮುದಾಯಗಳ ಪಾರುಪತ್ಯ ಹೆಚ್ಚಿದ್ದು, ದಲಿತರನ್ನು ಅಸ್ಪೃಶ್ಯರನ್ನಾಗಿ ನೋಡಲಾಗುತ್ತಿದೆ. ದಲಿತರಿಗೆ ಕ್ಷೌರಿಕ ಅಂಗಡಿ, ಹೋಟೆಲ್‌, ಸಾರ್ವಜನಿಕ ದೇವಸ್ಥಾನ, ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಹೋಗದಂತೆ ನಿರ್ಬಂಧ ವಿ ಸಲಾಗಿದೆ ಎಂದು ಗ್ರಾಮದ ದಲಿತ ಸಮುದಾಯದವರು ಆರೋಪಿಸಿದ್ದಾರೆ.

ಅಲ್ಲದೇ ದಲಿತ ಮಹಿಳೆ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರಿಸಿದರೆ ಸವರ್ಣೀಯರು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ದೂರಿದ್ದಾರೆ. ಗ್ರಾಮದಲ್ಲಿ ಸವರ್ಣೀಯರು ಹಾಗೂ ದಲಿತ ಸಮುದಾಯಗಳ ನಡುವಿನ ಜಟಾಪಟಿ ಬೂದಿಮುಚ್ಚಿದ ಕೆಂಡದಂತಿದ್ದು, ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಾಲೂಕು ಅಡಳಿತ ಹಾಗೂ ಪೊಲೀಸ್‌ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡು ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ, ಸೌಹಾರ್ದಯುತ ವಾತಾವರಣ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಅಸ್ಪೃಶ್ಯತೆ ಆಚರಿಸದಂತೆ ಮನವೊಲಿಕೆ – ತಹಶೀಲ್ದಾರ್‌: ಸಾರ್ವಜನಿಕ ಕ್ಷೇತ್ರಕ್ಕೆ ಯಾರಿಗೆ ಆದರೂ ಪ್ರವೇಶ ನಿರ್ಬಂಧಿಸುವುದು ಕಾನೂನು ಬಾಹಿರ. ಈ ವಿಚಾರವಾಗಿ ಬುಧವಾರ ಸಂಜೆ ಪೊಲೀಸರೊಡನೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಸರ್ವ ಸಮುದಾಯದವರೂ ಒಗ್ಗೂಡಿ ಜಾತ್ರೆ ನಡೆಸುವಂತೆ ಹಾಗೂ ಅಸ್ಪೃಶ್ಯತೆ ಆಚರಣೆ ಮಾಡದಂತೆ ಗ್ರಾಮಸ್ಥರ ಮನ ಒಲಿಸಿ ಕಾನೂನು ಸಲಹೆ ನೀಡಿ ಅರಿವು ಮೂಡಿಸಲಾಗುವುದು ಎಂದು ತಹಶೀಲ್ದಾರ್‌ ಆರ್‌.ಮಂಜುನಾಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.