ದಾಸನಪುರ ಪಿಕಪ್‌ ನಾಲೆ ಏರಿ ಒಡೆದು ಬೆಳೆಹಾನಿ


Team Udayavani, Aug 30, 2017, 11:50 AM IST

mys5.jpg

ಹುಣಸೂರು: ತಾಲೂಕಿನ ಹನಗೋಡು ಅಣೆಕಟ್ಟೆಯ ದಾಸನಪುರ ಪಿಕಪ್‌ ನಾಲಾ ಏರಿ ಒಡೆದುಹೋಗಿ ಸಾಕಷ್ಟು ಬೆಳೆ ನಷ್ಟ ಉಂಟಾಗಿದ್ದು. ರೆತರು ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ.

ಕೊಡಗು ಜಿಲ್ಲಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಲಕ್ಷಣ ತೀರ್ಥ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹನಗೋಡು ಅಣೆಕಟ್ಟೆಯಲ್ಲಿ ನೀರಿನ ಒಳಹರಿವು ಹೆಚ್ಚಿದೆ. ನಾಲೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗುತ್ತಿದ್ದು, ಜೊತೆಗೆ ಕಳೆದೆರಡು ದಿನಗಳಿಂದ ಬೀಳುತ್ತಿದ್ದ ಮಳೆಯಿಂದಾಗಿ ನಾಲೆಯಲ್ಲಿ ನೀರಿನ ಹರಿವು ಹೆಚ್ಚಾಗಿ ಏರಿ ಒಡೆದಿದೆ. ಆದರೆ ಈವರೆವಿಗೂ ಯಾವ ಎಂಜಿನಿಯರ್‌ಗಳು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ.

ಆಕ್ರೋಶ: ಕಿತ್ತೂರು ಹಾರಂಗಿ ವಿಭಾಗಕ್ಕೆ ಸೇರಿದ ನಾಲೆ ಇದಾಗಿದ್ದು, ಮುಂದೆ ಹತ್ತಾರು ಕೆರೆಗಳಿಗೆ ನೀರು ಹರಿಯುತ್ತಿತ್ತು. ರತ್ನಪುರಿ ಹತ್ತಿರದ ದಾಸನಪುರದ ಬಳಿ ಪಿಕಪ್‌ ನಾಲಾ ಏರಿ ಒಡೆದಿದ್ದರಿಂದ ಅಪಾರ ಪ್ರಮಾಣ ನೀರು ಅಕ್ಕ-ಪಕ್ಕದ ಜಮೀನುಗಳಿಗೆ ಹರಿದು ಪೋಲಾಗುತ್ತಿದೆ, ಇದೀಗ ರೆತರೇ ಮುಂದೆನಿಂತು ನೀರುಗಂಟಿ ಮೂಲಕ ನೀರಿನ ಹರಿವು ಕಡಿಮೆಗೊಳಿಸಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಬೆಳೆ ಹಾನಿ: ನಾಲೆ ಒಡೆದಿರುವ ಸ್ಥಳದ ಅಕ್ಕಪಕ್ಕದ ಜಮೀನಿನ ಮಾಲಿಕರಾದ ಬೋರೇಗೌಡ, ಕಷ್ಣೇಗೌಡ, ಶ್ರೀನಿವಾಸಗೌಡ, ದಾಸೇಗೌಡರಿಗೆ ಸೇರಿದ ಬಾಳೆ ಬೆಳೆಗೆ ಹಾನಿಯಾಗಿದ್ದರೆ, ಭತ್ತದ ನಾಟಿ ಹಲವೆಡೆ ಕೊಚ್ಚಿ ಹೋಗಿದೆ.

ಶಿಥಿಲಗೊಂಡ ಏರಿ: ಇದೊಂದು ಹಳೆಯ ಪ್ರಮುಖ ನಾಲೆಯಾಗಿದ್ದು, ಅಭಿವದ್ಧಿಕಂಡಿಲ್ಲ. ಸಕಾಲದಲ್ಲಿ ನಾಲೆಯ ಹೂಳೆತ್ತುವುದಿಲ್ಲ, ಅಲ್ಲಲ್ಲಿ ಶಿಥಿಲಗೊಂಡಿರುವ ಏರಿಯನ್ನು ದುರಸ್ತಿ ಪಡಿಸಿಲ್ಲವಾದ್ದರಿಂದಾಗಿ ಏರಿ ಒಡೆದಿದೆ, ಏರಿ ಒಡೆದ ಅನಿತಿ ದೂರದಲ್ಲೇ ವರ್ಷದ ಹಿಂದೆಯೂ ಸಹ ಏರಿ ಒಡೆದು ಅಪಾರ ಪ್ರಮಾಣದ ಬೆಳೆ ನಷ್ಟವಾಗಿತ್ತು.

ನಂತರ ಒಡೆದಿದ್ದ ಕೂನಿಯನ್ನು ನಿರ್ಮಿಸಿ, ನಾಲೆ ದುರಸ್ತಿ ಪಡಿಸಲಾಗಿತ್ತು. ಈ ಏರಿ ಅಪಾಯದಲ್ಲಿರುವ ಬಗ್ಗೆ ಹಲವಾರು ಬಾರಿ ಎಂಜಿನಿಯರ್‌ಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಯಾರೂ ಗಮನ ಹರಿಸಿಲ್ಲ, ಇದೀಗ ಮತ್ತೆ ಏರಿ ಒಡೆದು ರೈತರಿಗೆ ತೊಡಕಾಗಿದೆ.

ಎಂಜಿನಿಯರ್‌ಗಳು ನಾಪತ್ತೆ: ನಾಲೆ ಏರಿ ಒಡೆದು ಎರಡು ದಿನಗಳಾದವರೂ ಸ್ಥಳಕ್ಕೆ ಈವರೆವಿಗೆ ಸಂಬಂಧಿಸಿದ ಎಂಜಿನಿಯರ್‌ ಭೇಟಿ ನೀಡಿ, ದುರಸ್ತಿಗೆ ಮುಂದಾಗಿಲ್ಲ. ಈ ಸಂಬಂಧ ಪತ್ರಿಕೆಯು ಎಂಜಿನಿಯರ್‌ಗಳ ಸಂಪರ್ಕಕ್ಕೆ ಯತ್ನಿಸಿದರೂ ಯಾರೊಬ್ಬರೂ ಸಂಪರ್ಕಕ್ಕೆ ಸಿಕ್ಕಿಲ್ಲ.

ರೈತರ ಆಗ್ರಹ: ಇನ್ನಾದರೂ ಹಾರಂಗಿ ಎಂಜಿನಿಯರ್‌ ಸ್ಥಳಕ್ಕೆ ಭೇಟಿ ಇತ್ತು ತಕ್ಷಣಕ್ಕೆ ಏರಿ ದುರಸ್ತಿ ಪಡಿಸಬೇಕು, ಏರಿ ಅಗಲಗೊಳಿಸಿ ಕಾಂಕ್ರೀಟ್‌ ಲೈನಿಂಗ್‌ ಮಾಡಬೇಕು. ಶಾಸಕರು ಸಹ ಎಂಜಿನಿಯರ್‌ಗಳಿಗೆ ಅಗತ್ಯ ಕ್ರಮ ಕೆಗೊಳ್ಳಲು ಸೂಚಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ಈವರೆಗೆ ನನ್ನ ಗಮನಕ್ಕೆ ಬಂದಿಲ್ಲ ತಕ್ಷಣಕ್ಕೆ ಏರಿ ದುರಸ್ತಿಪಡಿಸಿ, ಮುಂದಿನ ಕೆರೆಗಳಿಗೆ ನೀರು ತುಂಬಿಸಲು ಎಂಜಿನಿಯರ್‌ ಗಳಿಗೆ ಸೂಚಿಸುತ್ತೇನೆ.
-ಶಾಸಕ ಎಚ್‌.ಪಿ.ಮಂಜುನಾಥ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.