ದಸರಾ ಸಾಕು ಪ್ರಾಣಿಗಳ ಪ್ರದರ್ಶನಕ್ಕೆ ಮನಸೋತ ಪ್ರೇಕ್ಷಕ


Team Udayavani, Oct 15, 2018, 11:36 AM IST

m4-das-nayi.jpg

ಮೈಸೂರು: ಮೊದಲ ನೋಟದಲ್ಲೇ ನೋಡುಗರ ಮನಗೆದ್ದ ಮುದ್ದು ಪ್ರಾಣಿಗಳು, ಒಡೆಯನ ಜತೆ ಪ್ರೀತಿಯಿಂದ ಹೆಜ್ಜೆ ಹಾಕಿ ಗಮನ ಸೆಳೆದ ಶ್ವಾನಗಳು… ಇವೆಲ್ಲ ಕಂಡು ಬಂದಿದ್ದು ನಾಡಹಬ್ಬ ದಸರಾ ಅಂಗವಾಗಿ ಭಾನುವಾರ ನಡೆದ ಶ್ವಾನ ಅಥವಾ ಮುದ್ದು ಪ್ರಾಣಿಗಳ ಪ್ರದರ್ಶನದಲ್ಲಿ.

ಜಿಲ್ಲಾಡಳಿತ, ಪಶುಸಂಗೋಪನಾ ಇಲಾಖೆ ವತಿಯಿಂದ ನಗರದ ನ್ಪೋರ್ಟ್‌ ಪೆವಿಲಿಯನ್‌ ಮೈದಾನದಲ್ಲಿ ಏರ್ಪಡಿಸಿದ್ದ, ಶ್ವಾನ ಅಥವಾ ಮುದ್ದು ಪ್ರಾಣಿಗಳ ಪ್ರದರ್ಶನ ಪ್ರಾಣಿಪ್ರಿಯರನ್ನು ಆಕರ್ಷಿಸಿತು. ಪ್ರದರ್ಶನಲ್ಲಿ ಸ್ಥಳೀಯ ಹಾಗೂ ದೇಶ ವಿದೇಶಗಳ ಅಂದಾಜು 23 ತಳಿಗಳ ಶ್ವಾನಗಳು ಭಿನ್ನತೆ ಹಾಗೂ ಗಂಭೀರತೆಯಿಂದ ನೆರೆದಿದ್ದ ಜನರನ್ನು ಆಕರ್ಷಿಸಿದವು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶ್ವಾನಗಳು, ಅದರ ಮಾಲಿಕರು ಹಾಗೂ ಶ್ವಾನ ಪ್ರಿಯರು ಭಾನುವಾರದ ರಜೆಯನ್ನು ಸಂತಸದಿಂದ ಕಳೆದರು.

ನೂರಾರು ಶ್ವಾನಗಳು: ಭಾನುವಾರ ಬೆಳಗ್ಗೆ ಆರಂಭಗೊಂಡ ಶ್ವಾನ ಪ್ರದರ್ಶನದಲ್ಲಿ 23 ತಳಿಯ 300ಕ್ಕೂ ಹೆಚ್ಚು ಶ್ವಾನಗಳು ಮೈಸೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು. ಪ್ರಮುಖವಾಗಿ ಡಾಬರ್ಮನ್‌, ಜರ್ಮನ್‌ ಷಫ‌ರ್ಡ್‌, ಗ್ರೇಟ್‌ ಡೇನ್‌, ಪಗ್‌, ಪಮೋರಿಯನ್‌, ಜಾಕಿ ಹೆಸರಿನ ಜೂಜೂ, ಮುಧೋಳ್‌, ಡ್ಯಾಷೆಂಡ್‌, ಲ್ಯಾಬ್ರರ್ಡಾ, ರಾರಯಟ್‌ ವ್ಹಿರ್ಲ, ಪಿಟುºಲ…, ಸೇಂಟ್‌ ಬರ್ನಾಡ್‌, ಗೋಲ್ಡನ್‌ ರಿಟ್ರಿರ್ವ, ಡಾಲ್‌ ಮಿಷನ್‌, ಪಿಂಚರ್ಸ, ಸೈಬೀರಿಯನ್‌ ಹಸ್ಕಿ, ಬಾಕ್ಸì ಹೀಗೆ ವಿವಿಧ ತಳಿಗಳ ಶ್ವಾನಗಳು ಪ್ರದರ್ಶನದ ಆಕರ್ಷಣೆಗೆ ಕಾರಣವಾದವು.

ಕೆಲವು ಶ್ವಾನಗಳು ತಮ್ಮ ಗಾತ್ರ, ಬಣ್ಣ, ನಡಿಗೆ, ಚುರುಕುತನ ಹೀಗೆ ಬೇರೆ ಬೇರೆ ಕಾರಣಗಳಿಂದ ಗಮನ ಸೆಳೆದರೆ. ಇನ್ನೂ ಕೆಲವು ಶ್ವಾನಗಳು ಮಾಲಿಕರೊಂದಿಗೆ ಸ್ಪರ್ಧೆಯಲ್ಲಿ ವೈಯ್ನಾರದಿಂದ ಭಾಗವಹಿಸಿ ತಮ್ಮ ಜಾಣ್ಮೆ ಪ್ರದರ್ಶಿಸಿದವು. ಪ್ರದರ್ಶನದಲ್ಲಿ ಭಾಗವಹಿಸಿದ್ದ ಶ್ವಾನಗಳ ತಳಿ, ನಡಿಗೆ, ಹಲ್ಲು, ಬಾಲ, ದೇಹದ ರಚನೆ, ಗಾತ್ರ ಮತ್ತಿತರ ಅಂಶಗಳನ್ನಾಧರಿಸಿ ತೀರ್ಪುಗಾರರು ಶ್ವಾನಗಳಿಗೆ ಬಹುಮಾನ ವಿತರಿಸಿದರು. 

ಶ್ವಾನಗಳ ಮೇಲೆ ಅಕ್ಕರೆ: ಪ್ರದರ್ಶನದಲ್ಲಿ ತಮ್ಮ ಮುದ್ದಾದ ಶ್ವಾನಗಳೊಂದಿಗೆ ಭಾಗವಹಿಸಿದ್ದ ಸ್ಪರ್ಧಿಗಳು ಅವುಗಳಿಗೆ ಮಾಡುತ್ತಿದ್ದ ಆರೈಕೆ ಎಲ್ಲರ ಗಮನ ಸೆಳೆಯಿತು. ಕೆಲವು ಶ್ವಾನಗಳು ಆಕರ್ಷಕ ವಸ್ತ್ರ, ಕಣ್ಣಿಗೆ ಕನ್ನಡಕ, ತಲೆಗೆ ಹೆಲ್ಮೆಟ್‌, ಕೊರಳಿಗೆ ಮಣಿಗಳನ್ನು ಧರಿಸಿ ನೋಡುಗರನ್ನು ಆಕರ್ಷಿಸಿದವು. ಅಲ್ಲದೇ ನಾಯಿಗಳು ಇಲ್ಲಿನ ಬಿಸಿಲಿಗೆ ಹೊಂದಿಕೊಳ್ಳುವುದಕ್ಕೆ ತೊಂದರೆಯಾಗಿ ಸ್ಪರ್ಧೆಯಲ್ಲಿ ಹಿಂದೆ ಬೀಳಬಾರದು ಎಂಬ ಕಾರಣಕ್ಕೆ ಅದರ ಮಾಲಿಕರು ಶ್ವಾನಗಳನ್ನು ಕಾರಿನಲ್ಲಿರಿಸಿ, ಎಸಿ ಹಾಕಿ ಅವುಗಳ ಆರೈಕೆ ಮಾಡುತ್ತಿದ್ದರು. 

ಈ ವೇಳೆ ಮಕ್ಕಳು ದೈತ್ಯ ಗಾತ್ರದ ಶ್ವಾನಗಳಿಗೆ ಕೂದಲು ಬಾಚುವುದು, ಕುತ್ತಿಗೆಯ ಬೆಲ್ಟ… ಸರಿಪಡಿಸುವುದು, ಕಿವಿ ಸ್ವತ್ಛಗೊಳಿಸುತ್ತಿದ್ದ ದೃಶ್ಯಗಳು ಅವರ ನಡುವಿನ ಬಾಂಧವ್ಯವನ್ನು ಸಾರುತ್ತಿತ್ತು. ಶ್ವಾನ ಹಾಗೂ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ 23 ತಳಿಯ ಶ್ವಾನಗಳು, 5 ತಳಿಯ ಬೆಕ್ಕುಗಳು, ಬಣ್ಣಬಣ್ಣದ ಗಿಳಿಗಳು ಪ್ರದರ್ಶನಕ್ಕೆ ಮೆರಗು ನೀಡಿದವು. ಈ ಪೈಕಿ ಸನ್‌ ಕೂಲ್ಡ್‌ ಜಾತಿಯ ಹಳದಿ ಹಾಗೂ ಕೇಸರಿ ಮಿಶ್ರಿತ ಗಿಳಿ ಪ್ರಮುಖ ಆಕರ್ಷಣೆಯಾಗಿತ್ತು. ಪ್ರದರ್ಶನ ಆರಂಭಕ್ಕೂ ಮುನ್ನ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. 

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.