ದಸರಾ, ನವರಾತ್ರಿ ಸಂಭ್ರಮಕ್ಕೆ ತೆರೆ


Team Udayavani, Oct 9, 2019, 3:00 AM IST

dasara-nav

ಹುಣಸೂರು: ಹಳೇ ಮೈಸೂರು ಭಾಗದಲ್ಲಿ ದಸರಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವ ಎಂದರೆ ಸಂಭ್ರಮಕ್ಕೆ ಪಾರವೇ ಇಲ್ಲ. ಪ್ರತಿ ಮನೆಗಳಲ್ಲೂ ಸಡಗರ, ಸಂಭ್ರಮ ಮನೆ ಮಾಡಿರುತ್ತದೆ. ನವರಾತ್ರಿ ಬಂತೆಂದರೆ ಮಕ್ಕಳಿಗೆ ಒಂದೆಡೆ ರಜೆ ಖುಷಿ, ಮತ್ತೊಂದೆಡೆ ದೇವಾಲಯಗಳಲ್ಲಿ ಶಕ್ತಿ ದೇವತೆಗಳ ಆರಾಧನೆ ಅಲಂಕಾರ, ಮನೆ ಮನೆಗಳಲ್ಲಿ ಬೊಂಬೆಗಳನ್ನು ಪ್ರತಿಷ್ಠಾಪಿಸುವುದು,

ಮನೆಗೆ ಬರುವವರಿಗೆ ಸಿಹಿತಿಂಡಿ ಹಂಚುವುದು ಇಲ್ಲಿನ ಸಾಂಪ್ರದಾಯವಾಗಿದೆ. ಕೊನೆ ದಿನ ಆಯುಧ ಪೂಜೆಯಂದು ವಿಶೇಷ ಪೂಜೆ ಸಲ್ಲಿಸಿದ ನಂತರ ಬೊಂಬೆಗಳನ್ನು ವಿಸರ್ಜಿಸಿ, ಸ್ವಸ್ಥಾನಕ್ಕೆ ಸೇರಿಸುತ್ತಾರೆ. ಜೊತೆಗೆ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ಮೂಲಕ ದಸರಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ತೆರೆ ಬೀಳುತ್ತದೆ.

ಅಲಂಕೃತ ಬೊಂಬೆಗಳು: ನಗರದ ಹಳೇ ಹೌಸಿಂಗ್‌ ಬೋರ್ಡ್‌ ನಿವಾಸಿ, ಶಿಕ್ಷಕಿ ನಾಗಜ್ಯೋತಿ ಮನೆಯಲ್ಲಿ ನವರಾತ್ರಿ ಅಂಗವಾಗಿ 100ಕ್ಕೂ ಹೆಚ್ಚು ಆಕರ್ಷಕ ಅಲಂಕೃತ ಬೊಂಬೆಗಳನ್ನಿಡಲಾಗಿತ್ತು. ನಿತ್ಯ ಬೊಂಬೆಯನ್ನು ವೀಕ್ಷಿಸಲು ಬರುವ ಮಹಿಳೆಯರು ಹಾಗೂ ಮಕ್ಕಳಿಗೆ ತಿಂಡಿಗಳನ್ನು ತಯಾರಿಸಿ, ವಿತರಿಸಿ ಧನ್ಯತಾ ಭಾವ ಮೆರೆಯುತ್ತಾರೆ.

ದೇಗುಲಗಳಲ್ಲಿ ವಿಶೇಷ ಪೂಜೆ: ನಗರದ ಶಕ್ತಿದೇವತೆ ಎಂದೇ ಪ್ರತೀತಿ ಇರುವ ಮುತ್ತುಮಾರಮ್ಮ ದೇವಾಲಯದಲ್ಲಿ ದೇವರನ್ನು ವಿವಿಧ ಹೂವುಗಳಿಂದ ಸಿಂಗರಿಸಿರುವುದಲ್ಲದೇ ದೇವಾಲಯಕ್ಕೆ ಜಗಮಗಿಸುವ ವಿದ್ಯುತ್‌ ದೀಪಾಲಂಕಾರ ಮಾಡಿರಲಾಗಿರುತ್ತದೆ. ದೇಗುಲದ ಆವರಣದಲ್ಲಿ ಕಲ್ಲು ಗುಡ್ಡದಂತೆ ನಿರ್ಮಿಸಿರುವ ಅಲಂಕೃತ ಮಂಟಪದಲ್ಲಿ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಸುತ್ತೆಲ್ಲಾ ಬೊಂಬೆಗಳನ್ನಿಟ್ಟು ತ್ರಿಕಾಲ ಪೂಜೆ ಸಲ್ಲಿಸಲಾಯಿತು. ಇನ್ನು ನಗರದ ಹೊರ ವಲಯದ ಮಡಿಕೇರಿ ಹೆದ್ದಾರಿಯಲ್ಲಿರುವ ಮೂರೂರಮ್ಮ ದೇವಾಲಯದಲ್ಲಿ ನವಧಾನ್ಯಗಳನ್ನು ಮೊಳಕೆ ಬರಿಸಿ, ನಿತ್ಯ ಪೂಜೆ ಸಲ್ಲಿಸಿ, ದೇವಸ್ಥಾಕ್ಕೆ ಬರುವ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಗುತ್ತಿದೆ.

ಭಜನೆ: ಶ್ರೀ ಮುತ್ತುಮಾರಮ್ಮ ದೇವಾಯಲದಲ್ಲಿ ದೇವರಿಗೆ ಶೈಲಪುತ್ರಿ, ಸಮಯಪುರ ಮಾರಿಯಮ್ಮ ಅಲಂಕಾರ, ದೇವರಿಗೆ ಕೊರವಂಜಿ ಅಲಂಕಾರ ಮಾಡಲಾಗಿತ್ತು. ಚಂದ್ರಘಂಟಾ, ಮಹಾಗೌರಿ, ಅರ್ಧನಾರೇಶ್ವರ, ಕೂಷ್ಮಾಂಡ, ವಾರಾಹಿ ಅಲಂಕಾರ, ಸ್ಕಂದಮಾತಾ, ಮಧುರೈ ಮೀನಾಕ್ಷಿ ಅಲಂಕಾರ, ಕಾತ್ಯಾಯಿನಿ, ರೇಣುಕಾ ಎಲ್ಲಮ್ಮದೇವಿ ಅಲಂಕಾರ, ಕಾಲರಾತ್ರಿ, ಸರಸ್ವತಿ ಅಲಂಕಾರ, ಮಹಾಗೌರಿ, ಕಾಳಿಕಾದೇವಿ ಅಲಂಕಾರ, ದೇವಧೂತೀ, ಮಹಿಷಾಸುರ ಮರ್ಧಿನಿಯ ಅಲಂಕಾರಗೊಳಿಸಿ, ನಿತ್ಯ ಪೂಜೆ ಸಲ್ಲಿಸಿ, ಪ್ರತಿದಿನ ಮಧ್ಯಾಹ್ನ ಮಹಾಮಂಗಳಾರತಿ, ಸಂಜೆ ಭಜನೆ ನಡೆಸಲಾಯಿತು. ಭಕ್ತರ ನೆರವಿನೊಂದಿಗೆ ಪ್ರಸಾದ ವಿನಿಯೋಗ ನಡೆಯಿತು.

ಕರಗ ಮಹೋತ್ಸವ: ಇನ್ನು ಮುನೇಶ್ವರಸ್ವಾಮಿ ದೇವಾಲಯದಲ್ಲಿ ಆಯುಧಪೂಜೆ ದಿನದಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ನಗರದ ಬ್ರಾಹ್ಮಣರ ಬಡಾವಣೆ, ಸ್ಕೋರ್‌ ಬೀದಿ, ಎಸ್‌.ಜೆ.ರಸ್ತೆಗಳಲ್ಲಿ ಕರಗ ಮಹೋತ್ಸವ ನಡೆಸಲಾಯಿತು. ಈ ಮೂಲಕ ನವರಾತ್ರಿ ಉತ್ಸವ ಸಂಪನ್ನವಾಯಿತು.

ಟಾಪ್ ನ್ಯೂಸ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್

Desi Swara- ಗುಪ್ತ ಗಾಮಿನಿ ಕಾಫಿ ಭೂಸುಧೆಯೋ…: ಕಾಫಿ ನಮ್ಮ ನಾಡಿಗೆ ಬಂದದ್ದು ರೋಚಕ ಕಥೆ

Desi Swara- ಗುಪ್ತ ಗಾಮಿನಿ ಕಾಫಿ ಭೂಸುಧೆಯೋ…: ಕಾಫಿ ನಮ್ಮ ನಾಡಿಗೆ ಬಂದದ್ದು ರೋಚಕ ಕಥೆ

Mohammed Aashiq from Mangalore, emerged victorious in MasterChef India 2023

Master Chef India ಪ್ರಶಸ್ತಿ ಮುಡಿಲಿಗೇರಿಸಿದ ಮಂಗಳೂರಿನ ಮುಹಮ್ಮದ್ ಆಶಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಪಟ್ಲ ಫೌಂಡೇಶನ್‌ ಬಹ್ರೈನ್‌ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.