ಕುಟುಂಬದ ಜಾತ್ರೆಯಂತೆ ಇತ್ತು ನಾಡ ಹಬ್ಬ ದಸರಾ
Team Udayavani, Oct 21, 2018, 6:00 AM IST
ಮೈಸೂರು: ಈ ಬಾರಿಯ ದಸರಾ ಅಪ್ಪ, ಮಕ್ಕಳು,ಹೆಂಡತಿ,ಮೊಮ್ಮಕ್ಕಳು ಪಾಲ್ಗೊಳ್ಳುವ ಜಾತ್ರೆಯಂತಿತ್ತು ಎಂದು ಕಾಂಗ್ರೆಸ್
ಶಾಸಕ ತನ್ವೀರ್ ಸೇಠ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ
ಹರಿಹಾಯ್ದರು. ದಸರಾ ನಾಡಹಬ್ಬವಾಗಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗದುಕೊಂಡು ಆಚರಿಸಬೇಕಿತ್ತು. ಹೀಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ದಸರಾ ತಮ್ಮ ಸ್ವತ್ತು, ತಮ್ಮ ಮನೆಯ ಕಾರ್ಯಕ್ರಮ ಎಂಬ ರೀತಿಯಲ್ಲಿ ವರ್ತಿಸಿದರು. ಹೀಗಾಗಿ, ಇದು ನಾಡಹಬ್ಬವಾಗುವ ಬದಲು ಅಪ್ಪ,ಮಕ್ಕಳು, ಹೆಂಡತಿ, ಮೊಮ್ಮಕ್ಕಳು ಪಾಲ್ಗೊಳ್ಳುವ ಜಾತ್ರೆಯಾಯಿತು. ರಾಜ್ಯದಲ್ಲಿ ಅಧಿಕಾರ ನಡೆಸುವಲ್ಲಿ ನಾವು ಒಂದಾಗಿದ್ದರೂ ಅದಕ್ಕೆ ಧಕ್ಕೆ ಬಾರದಂತೆ ಅವ್ಯವಸ್ಥೆಗಳ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಕಿಡಿ ಕಾರಿದರು.
ಜಿಲ್ಲಾಡಳಿತ ಕೂಡಾ ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಂತೆ ವರ್ತಿಸಿತು. ದಸರಾ ವೇಳೆ ಉಂಟಾದ ಶಿಷ್ಠಾಚಾರ ಉಲ್ಲಂಘನೆ, ಪಾಸ್ಗಳ ದುರ್ಬಳಕೆ ಮತ್ತು ಪೊಲೀಸರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ವರ್ತನೆ ಖಂಡಿಸಿ ಸ್ಥಳೀಯ ಕಾಂಗ್ರೆಸ್ ಪ್ರತಿನಿಧಿಗಳು ಈ ಬಾರಿ ದಸರಾದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ