ದಸರಾ ವೆಬ್‌ಸೈಟ್‌, ಭಿತ್ತಿಚಿತ್ರ ಅನಾವರಣ


Team Udayavani, Sep 1, 2019, 3:00 AM IST

dasara

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸಲು ರೂಪಿಸಿರುವ ದಸರಾ ಮಹೋತ್ಸವ-2019ರ ವೆಬ್‌ಸೈಟ್‌ ಹಾಗೂ ಭಿತ್ತಿಚಿತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಬಿಡುಗಡೆ ಮಾಡಿದರು. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ವೆಬ್‌ಸೈಟ್‌ www.mysoredasara.gov.in ಅನಾವರಣ ಹಾಗೂ ಭಿತ್ತಿಚಿತ್ರ ಬಿಡುಗಡೆ ಗೊಳಿಸಿ ಮಾತನಾಡಿದರು.

ದಸರಾ ಮಹೋತ್ಸವಕ್ಕೆ ಬರುವ ಪ್ರವಾಸಿಗರಿಗೆ ದಸರಾ ಕಾರ್ಯಕ್ರಮಗಳ ಬಗ್ಗೆ ತಿಳಿಸಲು ಮೈಸೂರು ನಗರದ ಟ್ರಿಣ್‌ಟ್ರಿಣ್‌ ಸೈಕಲ್‌ ನಿಲ್ದಾಣ ಸೇರಿದಂತೆ ನಗರದ ವಿವಿಧೆಡೆ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ದಸರಾ ಪ್ರಚಾರದ ಹೋರ್ಡಿಂಗ್ಸ್‌ಗಳನ್ನು ಅಳವಡಿಸಲಾಗುವುದು. ದಸರಾ ಮಹೋತ್ಸವದ ವೆಬ್‌ಸೈಟ್‌ನಲ್ಲಿ ಕನ್ನಡ, ಇಂಗ್ಲಿಷ್‌ ಮಾತ್ರವಲ್ಲದೇ ಇತರೆ ಹತ್ತು ಭಾಷೆಗಳಲ್ಲಿ ಮಾಹಿತಿ ಲಭ್ಯವಿರುತ್ತದೆ. ವೆಬ್‌ಸೈಟ್‌ ಕಂಪ್ಯೂಟರ್‌, ಮೊಬೈಲ್‌, ಟ್ಯಾಬ್‌ಗಳಲ್ಲಿ ಪುಶ್‌ನೋಟಿಫೀಕೇಶನ್‌ ವ್ಯವಸ್ಥೆ ಹೊಂದಿದ್ದು, ಅಲರ್ಟ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ವೆಬ್‌ಸೈಟ್‌ನಲ್ಲಿ ದಸರಾ ಪೋಲ್‌ ಆಯ್ಕೆಯಿದ್ದು ಪ್ರವಾಸಿಗರು ತಮಗೆ ಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬಹುದು. ದಸರಾ ಕಾರ್ಯಕ್ರಮಗಳಿಗೆ ಗೂಗಲ್‌ ಕ್ಯಾಲೆಂಡರ್‌ ಜೊತೆ ಇಂಟಿಗ್ರೇಟ್‌ ಮಾಡಲಾಗಿದೆ. ಮೈಸೂರು ಹಾಗೂ ಸುತ್ತಮುತ್ತಲಿನ ಎಲ್ಲಾ ಪ್ರವಾಸಿ ತಾಣಗಳ ಮಾಹಿತಿಯನ್ನು ನೀಡಲಾಗಿದೆ. #MysuruDasara ಬಳಸಿ ದಸರಾ ಛಾಯಾಚಿತ್ರಗಳನ್ನು ಪ್ರವಾಸಿಗರು ಅಪ್‌ಲೋಡ್‌ ಮಾಡಬಹುದಾದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ದಸರಾ ಟಿಕೆಟ್‌ಗಳನ್ನು ಖರೀದಿಸಬಹುದು ಹಾಗೂ ದಸರಾದ ಪ್ರಮುಖ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗುವುದು ಎಂದರು.

ರಸಪ್ರಶ್ನೆ ಸ್ಪರ್ಧೆ: ಈ ಬಾರಿಯ ದಸರಾದಲ್ಲಿ 5 ಆನ್‌ಲೈನ್‌ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಪ್ರತಿ ಕ್ವಿಜ್‌ ನಿಂದ 5 ಮಂದಿ ವಿಜೇತರನ್ನು ಆಯ್ಕೆ ಮಾಡಿ ದಸರಾ ನೆನಪಿನ ಕಾಣಿಕೆಯನ್ನು ಬಹುಮಾನವಾಗಿ ನೀಡಲಾಗುವುದು.

ದಸರಾ ಕಾಲ್‌ಸೆಂಟರ್‌: ದಸರಾ ಮಹೋತ್ಸವದ ಎಲ್ಲ ಕಾರ್ಯಕ್ರಮಗಳ ಬಗ್ಗೆ ನಿರಂತರವಾಗಿ ಮಾಹಿತಿ ನೀಡಲಾಗುವುದು. ಪ್ರವಾಸಿಗರು ದಸರಾ ಮಹೋತ್ಸವದ ಬಗ್ಗೆ ಸಲಹೆ, ಅಭಿಪ್ರಾಯ ಹಂಚಿಕೊಳ್ಳಲು ಪ್ರತ್ಯೇಕ ವೆಬ್‌ಪುಟವನ್ನು ಮೀಸಲಿರಿಸಲಾಗಿದೆ ಹಾಗೂ ದಸರಾದ ಎಲ್ಲಾ ಉಪಸಮಿತಿಗಳ ಬಗ್ಗೆ ಮಾಹಿತಿ, ವಿವಿಧ ಪ್ರಮುಖ ಇಲಾಖೆಗಳ ಜಾಲತಾಣಗಳಿಗೆ ಲಿಂಕ್‌ ಕಲ್ಪಿಸಲಾಗಿದ್ದು ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ ಅವರು, ಸೆ.5ರಂದು ದಸರಾ ಕಾಲ್‌ಸೆಂಟರ್‌ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹ, ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ, ಮೇಯರ್‌ ಪುಷ್ಪಲತಾ ಜಗನ್ನಾಥ್‌, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ಜಿಪಂ ಸಿಇಒ ಕೆ.ಜ್ಯೋತಿ, ಅಪರ ಜಿಲ್ಲಾಧಿಕಾರಿ ಬಿ.ಆರ್‌.ಪೂರ್ಣಿಮಾ, ನಗರ ಪೊಲೀಸ್‌ ಆಯುಕ್ತ ಕೆ.ಟಿ.ಬಾಲಕೃಷ್ಣ, ಮುಡಾ ಆಯುಕ್ತ ಪಿ.ಎಸ್‌.ಕಾಂತರಾಜು, ಮಹಾ ನಗರಪಾಲಿಕೆ ಆಯುಕ್ತ ಗುರುದತ್‌ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.