ಗಾರೆ ಕೆಲಸಗಾರನ ಪುತ್ರಿ ಪಿಎಸ್‌ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಂ.2


Team Udayavani, Jul 9, 2019, 3:00 AM IST

gaare-kel

ಕೆ.ಆರ್‌.ನಗರ: ಬಡತನವಿದ್ದರೇನು, ಛ‌ಲವೊಂದಿದ್ದರೆ ಏನು ಬೇಕಾದರೂ ಸಾಧಿಸಿಯೇ ತೀರಬಹುದು ಎಂಬುದನ್ನು ತೋರಿಸಿ ಕೊಟ್ಟಿರುವ ಗಾರೆ ಕಾರ್ಮಿಕನ ಪುತ್ರಿ, ರಾಜ್ಯದ ರಕ್ಷಣೆ ಹೊತ್ತಿರುವ ಪೊಲೀಸ್‌ ಇಲಾಖೆಯ 2018-19ನೇ ಸಾಲಿನಲ್ಲಿ ನಡೆದ ಪಿಎಸ್‌ಐ(ಸಿವಿಲ್‌) ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್‌ ಪಡೆದು ಮಾದರಿಯಾಗಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಪದವಿ ಶಿಕ್ಷಣ ಪಡೆದುಕೊಳ್ಳುವುದೇ ದುಸ್ತರವಾಗಿದ್ದು, ಇದರ ನಡುವೆಯೂ ಪೊಲೀಸ್‌ ಸಬ್‌ ಇನ್ಸ್‌ಪೆ‌ಕ್ಟರ್‌ ಹುದ್ದೆಗೆ ಏರುವುದು ಸವಾಲಾಗಿದೆ. ಇಂತಹ ಸವಾಲನ್ನು ಕೆ.ಆರ್‌.ನಗರ ತಾಲೂಕಿನ ಕರ್ತಾಳು ಗ್ರಾಮದ, ಗಾರೆ ಕಾರ್ಮಿಕ ಮೂರ್ತಿಗೌಡ ಮತ್ತು ಶಶಿಕಲಾ ದಂಪತಿಯ ಪುತ್ರಿ ಶ್ಯಾಮಲ ಮೆಟ್ಟಿನಿಂತು ಹುದ್ದೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯಕ್ಕೆ 2ನೇ ರ್‍ಯಾಂಕ್‌ ಪಡೆದಿರುವ ಶ್ಯಾಮಲಾ ಕೆ.ಆರ್‌.ನಗರ ತಾಲೂಕಿನ ಹೊಸೂರುಕಲ್ಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕೇರಳಾಪುರದ ವಿದ್ಯಾಗಣಪತಿ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಣ, ಪಟ್ಟಣದ ಸರ್ಕಾರಿ ಬಾಲಕಿಯರ ಪದಪೂರ್ವ ಕಾಲೇಜಿನಲ್ಲಿ ಪಿಯುಸಿ, ಮೈಸೂರಿನ ಜೆಎಸ್‌ಎಸ್‌ ಮಹಿಳಾ ಕಾಲೇಜಿನಲ್ಲಿ ಪದವಿ ಹಾಗೂ ಉನ್ನತ ಶಿಕ್ಷಣವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪಡೆದುಕೊಂಡಿದ್ದಾರೆ.

ಪಿಎಸ್‌ಐ ಹುದ್ದೆಗೆ 60 ಸಾವಿರ ಅರ್ಜಿ: 190 ಮಹಿಳಾ ಪಿಎಸ್‌ಐ ಹುದ್ದೆ ಭರ್ತಿಗೆ ಪೊಲೀಸ್‌ ಇಲಾಖೆ ಅರ್ಜಿ ಅಹ್ವಾನಿಸಿತ್ತು. 60 ಸಾವಿರಕ್ಕೂ ಹೆಚ್ಚು ಮಂದಿ ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಕಳೆದ ನವೆಂಬರ್‌ನಲ್ಲಿ ನಡೆದ ಕ್ರೀಡಾ ಸ್ಫರ್ಧೆಯಲ್ಲಿ 35 ಸಾವಿರ ಮಂದಿ ಆಯ್ಕೆಯಾಗಿ ಮುಂದಿನ ಸುತ್ತಿನ ಆಯ್ಕೆಗೆ ಅರ್ಹತೆ ಪಡೆದಿದ್ದರು. ಬಳಿಕ ಜನವರಿ 13ರಂದು ನಡೆದ ಲಿಖೀತ ಪರೀಕ್ಷೆಯಲ್ಲಿ 380 ಮಂದಿ ಆಯ್ಕೆಯಾಗಿದ್ದರು. ಅಂತಿಮವಾಗಿ ಸಂದರ್ಶನ ನಡೆಸಿ ಪ್ರಕಟವಾದ ಫ‌ಲಿತಾಂಶದಲ್ಲಿ ಶ್ಯಾಮಲಾ ರಾಜ್ಯಕ್ಕೆ 2ನೇ ರ್‍ಯಾಂಕ್‌ ಪಡೆದು ಪಿಎಸ್‌ಐ ಆಗಿ ಆಯ್ಕೆಯಾಗಿದ್ದಾರೆ.

ಸತತ ಅಧ್ಯಯನ: ಸಿವಿಲ್‌ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಿದ ಶ್ಯಾಮಲಾ ಅವರು ಈ ಪರೀಕ್ಷೆಯನ್ನು ಎದುರಿಸಲು ಪೂರ್ವ ತಯಾರಿ ನಡೆಸಿದ್ದರು. ಜಯಪುರದ ಚಾಣಕ್ಯ ಅಕಾಡೆಮಿಯಲ್ಲಿ ತರಬೇತಿ ಪಡೆದು ಮನೆಯಲ್ಲಿ ನಿತ್ಯ 12ರಿಂದ 13 ಗಂಟೆಯವರೆಗೆ ಅಭ್ಯಾಸ ನಡೆಸುತ್ತಿದ್ದ ಇವರು ಕೆಲ ಸಮಯದಲ್ಲಿ ಗ್ರಂಥಾಲಯಗಳಿಗೆ ತೆರಳಿ ಮತ್ತು ವಿವಿಧ ಸ್ವರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳನ್ನು ಅಧ್ಯಯನ ಮಾಡುತ್ತಿದ್ದರು.

ತಂದೆ ಆಸೆ ಈಡೇರಿಕೆ: ಕಡು ಬಡತನದಲ್ಲಿ ಹುಟ್ಟಿದ ಶ್ಯಾಮಲಾ ಅವರ ತಂದೆ ಮೂರ್ತಿಗೌಡ ಅವರು ತಮ್ಮ ಕುಟುಂಬದ ಜೀವನದ ಬಂಡಿ ಎಳೆಯಲು ಗಾರೆ ಕೆಲಸ ಮಾಡುತ್ತಿದ್ದು, ಇರುವ ಇಬ್ಬರು ಪುತ್ರಿಯರಲ್ಲಿ ಒಬ್ಬಳನ್ನಾದರೂ ಪೊಲೀಸ್‌ ಕೆಲಸಕ್ಕೆ ಸೇರಿಸಬೇಕೆಂದು ದುಡಿದ ಹಣವನ್ನು ಶ್ಯಾಮಲಾ ಅವರ ಓದಿಗೆ ಮುಡಿಪಾಗಿಟ್ಟಿದ್ದು, ಬಡತದಲ್ಲಿ ಬೆಳೆದಿದ್ದ ಶ್ಯಾಮಲಾ ಪಿಎಸ್‌ಐ ಹುದ್ದೆ ಪಡೆಯುವ ಮೂಲಕ ತಂದೆಯ ಕನಸು ನನಸು ಮಾಡಿದ್ದಾರೆ.

ಪಿಎಸ್‌ಐ ಹುದ್ದೆಗೆ ತಮ್ಮ ಪುತ್ರಿ ಅರ್ಜಿ ಸಲ್ಲಿಸುವಾಗ ಆಯ್ಕೆಯಾಗುತ್ತಾಳೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಇದನ್ನು ಹುಸಿ ಮಾಡದೆ ಕಠಿಣ ಪರಿಶ್ರಮದಿಂದ ತಮ್ಮ ಪುತ್ರಿ ಶ್ಯಾಮಲಾ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಆಯ್ಕೆಯಾಗಿರುವುದು ಸಂತಸ ತಂದಿದೆ.
-ಮೂರ್ತಿಗೌಡ, ಶ್ಯಾಮಲಾ ತಂದೆ

ನನ್ನ ತಂದೆ ಗಾರೆ ವೃತ್ತಿ ಮತ್ತು ನನ್ನ ತಾಯಿ ಹಸು ಸಾಕಾಣಿಕೆ ಮಾಡಿ ನನ್ನ ಓದಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.ಇವರ ಶ್ರಮಕ್ಕೆ ನಾನು ಪ್ರತಿಫ‌ಲ ನೀಡಲೇಬೇಕೆಂದು ತೀರ್ಮಾನಿಸಿ ಶ್ರಮ ವಹಿಸಿ ಓದಿದ್ದು ಆಯ್ಕೆಯಾಗಲು ಸ್ಫೂರ್ತಿಯಾಗಿದೆ.
-ಶ್ಯಾಮಲಾ, ಪಿಎಸ್‌ಐ

* ಗೇರದಡ ನಾಗಣ್ಣ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.