ಸಾಲಬಾಧೆ: ಆತ್ಮಹತ್ಯೆಗೆ ಶರಣಾದ ಇಬ್ಬರು ರೈತರು


Team Udayavani, Dec 6, 2017, 1:04 PM IST

m1-sucide.jpg

ಭೇರ್ಯ: ಸಾಲಬಾಧೆಯಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್‌.ನಗರ ತಾಲೂಕಿನಲ್ಲಿ ನಡೆದಿದೆ.  ಸಾಲಿಗ್ರಾಮ ಹೋಬಳಿಯ ಮುಂಡೂರು ಗ್ರಾಮದ ತಮ್ಮಣ್ಣೇಗೌಡರ ಮಗ ದಿನೇಶ್‌(26), ಹೊಸಅಗ್ರಹಾರ ಹೋಬಳಿಯ ಮಂಡಿಗನಹಳ್ಳಿ ಗ್ರಾಮದ ಚಲುವರಾಜು ಮಗ ಚನ್ನಕೇಶವ (26) ಮೃತ ರೈತರು.  

ಸಾಲಿಗ್ರಾಮ ಹೋಬಳಿಯ ಮುಂಡೂರು ಗ್ರಾಮದ ತಮ್ಮಣ್ಣೇಗೌಡರ ಮಗ ದಿನೇಶ್‌ ತನ್ನ ಎರಡು ಎಕರೆ ಜಮೀನಿನಲ್ಲಿ ತಂಬಾಕು ಬೆಳೆಗಾಗಿ ಸಾಲಿಗ್ರಾಮದ ಗ್ರಾಮೀಣ ಬ್ಯಾಂಕ್‌ನಲ್ಲಿ ತಂಬಾಕು ಬೆಳೆ ಹದಮಾಡಲು ಮತ್ತು ತಂಬಾಕು ಬ್ಯಾರಲ್‌ಗಾಗಿ 2ಲಕ್ಷ ಸಾಲ, ಕೈಸಾಲ 3 ಲಕ್ಷ ಮಾಡಿದ್ದ, ಕಳೆದ ವಾರದಿಂದ ತಂಬಾಕು ಬೆಲೆ ಕುಸಿದ ಹಿನ್ನಲೆಯಲ್ಲಿ ಮನನೊಂದು ತನ್ನ ಜಮೀನಿನಲ್ಲಿ ಕ್ರೀಮಿನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದ,

ಅಸ್ವಸ್ಥನನ್ನು ಚಿಕ್ಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ಕರದೊಯ್ಯಲಾಗಿ ಚಿಕ್ಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾನೆ ಮೃತನಿಗೆ  ಪತ್ನಿ, ತಂದೆ, ತಾಯಿ ಇದ್ದಾರೆ. ಮತೊರ್ವ ರೈತ:  ಹೊಸಅಗ್ರಹಾರ ಹೋಬಳಿಯ ಮಂಡಿಗನಹಳ್ಳಿ ಗ್ರಾಮದ ಚಲುವರಾಜು ಮಗ ಚನ್ನಕೇಶವ ತನ್ನ ಒಂದೂವರೆ ಎಕರೆ ಜಮೀನಿನಲ್ಲಿ ರೇಷ್ಮೆ ಬೆಳಗಾಗಿ ಕೊಳವೆ ಬಾವಿ ಕೊರಿಸಿದ್ದು, ನೀರು ಬರದ ಕಾರಣ ಮತ್ತೆರಡು ಕೊಳವೆ ಬಾವಿ ಕೊರಿಸಿದ್ದಾನೆ.

ಅಲ್ಲಿಯೂ ಸಹ ನೀರು ಬರಲಿಲ್ಲ, ಕೊಳವೆ ಬಾವಿ ಕೊರೆಸಲು ಕೈಸಾಲ ಮೂರು ಲಕ್ಷ ಮಾಡಿದ್ದ, ರೇಷ್ಮೆ ನಾಟಿಗಾಗಿ ಹೊಸಅಗ್ರಹಾರ ಸಹಕಾರ ಸಂಘದಲ್ಲಿ 50 ಸಾವಿರ ಸಾಲ ಮಾಡಿದ್ದು, ಕೊಳವೆಬಾವಿ ಸಾಲದಿಂದ ಮನನೊಂದು ಜಮೀನಿನಲ್ಲಿ ಕ್ರೀಮಿನಾಶಕ ಸೇವಿಸಿದ್ದಾನೆ. ಅಸ್ವಸ್ಥಗೊಂಡು ಒದ್ದಾಡುತ್ತಿದ್ದ ರೈತನನ್ನು ಪಕ್ಕದ ಜಮೀನಿನವರು ನೋಡಿ ಕುಟುಂಬದವರಿಗೆ ತಿಳಿಸಿ,

ಹೆಚ್ಚಿನ ಚಿಕ್ಕಿತ್ಸೆಗಾಗಿ ಕೆ.ಆರ್‌.ನಗರ ತಾಲೂಕು ಆಸ್ಪತ್ರೆ ಕರೆದೊಯ್ಯುವಾಗ ಮೃತಪಟ್ಟಿದ್ದಾನೆ ಎಂದು ಚನ್ನಕೇಶವನ ತಾಯಿ ಶಾಂತಮ್ಮ ಸಾಲಿಗ್ರಾಮ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸಾಲಿಗ್ರಾಮ ಪೊಲೀಸ್‌ ಠಾಣೆಯ ಎಎಸ್‌ಐ ಕುಮಾರ್‌ ಎರಡು ರೈತ ಆತ್ಮಹತ್ಯೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಸಾಂತ್ವನ: ಮಂಡಿಗನಹಳ್ಳಿ ಗ್ರಾಮದ ಆತ್ಮಹತ್ಯೆ ಮಾಡಿ ಕೊಂಡ ರೈತ ಚನ್ನಕೇಶವನ ಶವವನ್ನು ಕೆ.ಆರ್‌.ನಗರ ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ಹೊಸಅಗ್ರಹಾರ ಹೋಬಳಿಯ ಉಪತಹಶೀಲ್ದಾರ್‌ ಯಧುಗಿರೀಶ್‌ ಮತ್ತು ರಾಜಸ್ವ ನಿರೀಕ್ಷಕ ತನುರಾಜ್‌, ಗ್ರಾಮಲೇಕ್ಕಿಗ ರವೀಂದ್ರ ಭೇಟಿ ನೀಡಿ, ನೊಂದ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಹೊಸ ಅಗ್ರಹಾರ ಗ್ರಾಪಂ ಅಧ್ಯಕ್ಷ ಡಿ.ವಿ.ಗುಡಿ ಯೋಗೇಶ್‌, ಸದಸ್ಯರಾದ ಶಂಕರ್‌, ರಾಮಯ್ಯ ಅವರುಗಳು ಶಾಸಕ ಸಾ.ರಾ.ಮಹೇಶ್‌ ಅವರ ಗಮನಕ್ಕೆ ತಂದು ಸರ್ಕಾರದಿಂದ ಸೂಕ್ತಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿ ಕುಟುಂಬದವರಿಗೆ ಸಾಂತ್ವ ಹೇಳಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.