ಅವಳಿ ಕಟ್ಟಡಗಳ ಭವಿಷ್ಯ ನಿರ್ಧಾರ ಜ.3ಕ್ಕೆ


Team Udayavani, Dec 25, 2019, 3:00 AM IST

avali-katta

ಮೈಸೂರು: ನಗರದ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್‌ ಕಟ್ಟಡಗಳ ಸಂರಕ್ಷಣೆ ಅಥವಾ ಕೆಡುವುದರ ಬಗ್ಗೆ ಜ.3ರೊಳಗೆ ಒಂದು ತೀರ್ಮಾನಕ್ಕೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಜಿಲ್ಲಾಡಳಿತ ಮತ್ತು ಪಾಲಿಕೆಗೆ ಸೂಚನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಸೀವೇಜ್‌ ಫಾರಂ ಕುರಿತ ಸಭೆಯಲ್ಲಿ ಮಾತನಾಡಿ, ಲ್ಯಾನ್ಸ್‌ಡೌನ್‌ ಕಟ್ಟಡದಲ್ಲಿ ನಡೆದ ದುರಂತದ ನಂತರ ಬಾಗಿಲು ಮುಚ್ಚಿದೆ. ಅದೇ ರೀತಿ ದೇವರಾಜ ಮಾರುಕಟ್ಟೆಯಲ್ಲೂ ಅವಘಡ ಸಂಭವಿಸಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಮತ್ತು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆಗೆ ಸೂಚಿಸಿದರು.

ಇದಕ್ಕೂ ಮೊದಲು ಮತನಾಡಿದ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌, ಈ ಎರಡೂ ಕಟ್ಟಡಗಳ ಬಗ್ಗೆ ಒಂದು ತೀರ್ಮಾನಕ್ಕೆ ಬರಲು ತಜ್ಞರ ಸಮಿತಿ ನೇಮಿಸಿ, ಅಧ್ಯಯನ ಮಾಡುವಂತೆ ಕೋರ್ಟ್‌ ಸೂಚಿಸಿತ್ತು. ಅದರಂತೆ ತಜ್ಞರ ಸಮಿತಿ ನೇಮಿಸಿ, ಅವರಿಂದ ಎರಡೂ ಕಟ್ಟಡಗಳ ಸದ್ಯದ ಸ್ಥಿತಿಗತಿ ಹಾಗೂ ಅದನ್ನು ಸಂರಕ್ಷಣೆ ಮಾಡಬಹುದೇ ಅಥವಾ ಕೆಡವಬೇಕೆ ಎಂಬ ಬಗ್ಗೆ ವರದಿ ಪಡೆದಿದ್ದೇವೆ.

ವರದಿಯಲ್ಲಿ ಎರಡೂ ಕಟ್ಟಡಗಳನ್ನು ಒಡೆಯುವಂತೆ ಸಲಹೆ ನೀಡಲಾಗಿದೆ ಎಂದರು. ಸಾಮಾಜಿಕ ಕಾರ್ಯಕರ್ತ ಭಾಮಿ ಶೆಣೈ ಮಾತನಾಡಿ, ಈ ಸಮಸ್ಯೆಯಲ್ಲಿ ಬಗೆಹರಿಸುವಂತಹದ್ದೇನಿಲ್ಲ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕಟ್ಟಡ ಹಾಗೆ ಉಳಿಸಿಕೊಳ್ಳುವ ಅವಶ್ಯಕತೆಯಿದೆ ಎಂದರು. ತಕ್ಷಣ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ನಂಜನಗೂಡು ದೇವಸ್ಥಾನ 1300 ವರ್ಷಗಳಷ್ಟು ಹಳೆಯದು.

ಆ ಕಟ್ಟಡವನ್ನೇ ಉಳಿಸಿಕೊಂಡ ಮೇಲೆ ನೂರು ವರ್ಷದಷ್ಟು ಇತಿಹಾಸವಿರುವ ಈ ಕಟ್ಟಡ ಉಳಿಸಿಕೊಳ್ಳಬಹುದುಲ್ಲವೇ? ಎಂಬ ಅಭಿಪ್ರಾಯಗಳು ಬಂದಿವೆ. ಆದರೆ ಈ ವಿಚಾರಗಳು ಪರಸ್ಪರ ಬೇರೆ ಬೇರೆಯಾಗಿವೆ. ಈಗಿರುವ ದೇವರಾಜ ಮಾರುಕಟ್ಟೆಗೆ ನೂರು ವರ್ಷವಾದರೂ ಅದು ಹೆಚ್ಚು ಭಾರ ಮತ್ತು ಒತ್ತಡ ತಡೆಯುವುದಿಲ್ಲ. ಕಳೆದ 20-30 ವರ್ಷಗಳಿಂದ ನಿರ್ವಹಣೆಯಿಲ್ಲದೆ ಶಿಥಿಲವಾಗಿದೆ ಎಂದು ಹೇಳಿದರು.

ಎಂಡಿಎ ಅಧಿಕಾರಿ ಗಿರೀಶ್‌ ನೇತೃತ್ವದಲ್ಲಿ ತಂಡವೊಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ ಮತ್ತು ಪುರಾತತ್ವ ಇಲಾಖೆಯಿಂದ ನೇಮಿಸಲ್ಪಟ್ಟ ಪರಿಣತರ ತಂಡ ಕೂಡ ತಮ್ಮ ಅಭಿಪ್ರಾಯ ಸಲ್ಲಿಸಿದೆ. ಕರ್ನಾಟಕ ಎಂಜಿನಿಯರ್ಸ್‌ ರಿಸರ್ಚ್‌ ಸ್ಟೇಷನ್‌ (ಕೆಇಆರ್‌ಸಿ) ಅಧಿಕಾರಿಗಳ ತಂಡವೂ ಪರಿಶೀಲಿಸಿದೆ. ಹೀಗಾಗಿ ಒಟ್ಟಾರೆ ಕೂಲಂಕಷವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಡಿಸಿ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಅಭಿರಾಮ್‌ ಮಾತನಾಡಿ, ಈ ಸಂಬಂಧ ಕಸ ಸಂಸ್ಕರಣಾ ಘಟಕಕ್ಕೆ ಸಂಸ್ಥೆಯವರನ್ನು ಕರೆದುಕೊಂಡು ಹೋಗಿ ವಿವರಿಸಿದ ನಂತರ ನಾಗ್ಪುರಕ್ಕೆ ಹೋಗುವ ತೀರ್ಮಾನ ಮಾಡಬಹುದು. ಜೊತೆಗೆ ನಗರ ಹೊರ ವರ್ತುಲ ರಸ್ತೆಯ ಆಜುಬಾಜಿನಲ್ಲಿರುವ 12 ಗ್ರಾಪಂಗಳನ್ನು ಯುಎಲ್‌ಬಿಗೆ ಸೇರಿಸಲು ಚಿಂತನೆ ನಡೆಸುತ್ತಿದ್ದೇವೆ. ಹೀಗಾಗಿ ಕಸ ಸಂಸ್ಕರಣೆ ಯೋಜನೆಯನ್ನು ಮುಂದಿನ ದಿನಗಳಲ್ಲಿ ಅನ್ವಯಿಸುವಂತೆ ರೂಪಿಸಬೇಕಾಗಿದೆ ಎಂದು ಸಚಿವರಿಗೆ ತಿಳಿಸಿದರು.

ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಮೈಸೂರಿನ ರಿಂಗ್‌ ರಸ್ತೆಯಲ್ಲಿರುವ ಕೆಲವು ಹಳ್ಳಿಗಳಲ್ಲೂ ಕಸ ಸಂಸ್ಕರಣೆಗೆ ಕಷ್ಟವಾಗುತ್ತಿದೆ. ಅವುಗಳನ್ನು ಸೇರಿಸಿಕೊಂಡು ನಗರದಲ್ಲಿ ಉತ್ಪತ್ತಿಯಾಗುವ ಕಸ ಸಂಸ್ಕರಣೆಗೆ ಈ ಯೋಜನೆ ಪೂರಕವಾಗಿದೆ ಎಂದು ಸಲಹೆ ನೀಡಿದರು. ಶಾಸಕ ಎಲ್‌. ಎಲ್‌. ನಾಗೇಂದ್ರ ಮಾತನಾಡಿ, ಖಾಸಗಿ ಬಡಾವಣೆಗಳ ನಿರ್ವಹಣೆ ಇಲ್ಲದೆ ಪಾಲಿಕೆ ವ್ಯಾಪ್ತಿಗೆ ನೀಡುವುದು ಸರಿಯಲ್ಲ. ಇದರಿಂದ ಪಾಲಿಕೆಗೆ ಹೆಚ್ಚು ಹೊರೆಯಾಗುತ್ತಿದೆ ಎಂದರು. ಪಾಲಿಕೆ ಮೇಯರ್‌ ಪುಷ್ಪಲತಾ ಜಗನ್ನಾಥ್‌, ಜಿಪಂ ಸಿಇಒ ಕೆ. ಜ್ಯೋತಿ, ಪಾಲಿಕೆ ಆಯುಕ್ತ ಗುರುದತ್‌ ಹೆಗ್ಡೆ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತ್ಯಾಜ್ಯ ವೈಜ್ಞಾನಿಕ ವಿಲೇವಾರಿಗೆ 18 ಕೋಟಿ ಯೋಜನೆ – ಸಂಸದ: ಮೈಸೂರು ನಗರದಲ್ಲಿ ಉತ್ಪತ್ತಿಯಾಗುವ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ನಾಗ್ಪುರ ಮೂಲದ “ಜಿಗ್ಮಾ ಸಂಸ್ಥೆ’ ಯೋಜನೆ ರೂಪಿಸಿ, ಗುಜರಾತ್‌ನ ವಡೋದರಲ್ಲಿ ಅನುಷ್ಠಾನಗೊಳಿಸಿದೆ. ಈ ಬಗ್ಗೆ ತಿಳಿದುಕೊಳ್ಳಲು ಮೈಸೂರು ನಿಯೋಗವು ನಾಗ್ಪುರಕ್ಕೆ ತೆರಳಿ ಪರಿಶೀಲಿಸಿ ಬಂದರೆ ಒಳ್ಳೆಯದು. ಅದೇ ರೀತಿ ನಗರದಲ್ಲಿ ಪ್ರತಿದಿನ 450 ಟನ್‌ ಕಸ ಉತ್ಪತ್ತಿಯಾಗಲ್ಲಿದ್ದು, ಅದರ ಸಂಸ್ಕರಣೆಗೆ ಈ ಯೋಜನೆ ಪೂರಕವಾಗಲಿದೆ.

ಮುಡಾ 5 ಕೋಟಿ, ನಗರಪಾಲಿಕೆ 3 ಕೋಟಿ ಮತ್ತು ರಾಜ್ಯ ಸರ್ಕಾರ 10 ಕೋಟಿ ಹಣ ಈ ಯೋಜನೆಗೆ ವ್ಯಯಿಸಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ಸಭೆಗೆ ತಿಳಿಸಿದರು. ಜಿಗ್ಮಾ ಸಂಸ್ಥೆಯ ಪ್ರತಿನಿಧಿ ಪ್ರಭು ಮಾತನಾಡಿ, ಈಗಾಗಲೇ ನಗರದ ಸುಯೇಜ್‌ ಫಾರಂನಲ್ಲಿ 2 ಲಕ್ಷ ಟನ್‌ ತ್ಯಾಜ್ಯ ಸಂಗ್ರಹವಾಗಿದ್ದು, ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕಿದೆ. 18 ತಿಂಗಳಲ್ಲಿ ಇದನ್ನು ಕಾರ್ಯರೂಪಕ್ಕೆ ತರಬಹುದು. ಮೈಸೂರಿನಿಂದ ನಿಯೋಗ ಬಂದರೆ ನಾಗ್ಪುರದಲ್ಲಿ ಪ್ರಾಯೋಗಿಕವಾಗಿ ತಿಳಿಸಿಕೊಡಲಾಗುವುದು ಎಂದು ಹೇಳಿದರು.

ರಿಂಗ್‌ ರಸ್ತೆ ದೀಪ ಉರಿಸಿ: ನಗರದಲ್ಲಿ ನಿರ್ಮಾಣವಾಗುವ ಖಾಸಗಿ ಬಡಾವಣೆಗಳ ನಿರ್ವಹಣೆಯ ಜವಾಬ್ದಾರಿ ಮುಡಾ ವ್ಯಾಪ್ತಿಗೆ ಬರುತ್ತದೆ. ಆದರೆ ರಿಂಗ್‌ ರಸ್ತೆಯಲ್ಲಿ ದೀಪಗಳು ಉರಿಯುತ್ತಿಲ್ಲ. ದಸರಾ ವೇಳೆ ಉರಿದ ದೀಪಗಳಿಗೆ ಈಗ ಏನಾಗಿದೆ? ಇಂತಹದ್ದಕ್ಕೆಲ್ಲ ಆಯುಕ್ತರು ಅವಕಾಶ ನೀಡಬಾರದು. ಖಾಸಗಿ ಬಡವಾಣೆ ನಿರ್ವಹಣೆ ಮಾಡಿ, ನಂತರ ಪಾಲಿಕೆಗೆ ಒಪ್ಪಿಸಬೇಕು.

ಯಾವುದೇ ಕಾನೂನು ಬದಲಾವಣೆ ಇದ್ದರೂ ನಾನು ನೋಡಿಕೊಳ್ಳುತ್ತೇನೆ ಎಂದು ಸಚಿವ ವಿ.ಸೋಮಣ್ಣ ಮುಡಾ ಆಯುಕ್ತರಿಗೆ ತಾಕೀತು ಮಾಡಿದರು. ಅವರ ಮಾತಿಗೆ ಪ್ರತಿಕ್ರಿಯಿಸಿದ ಮುಡಾ ಆಯುಕ್ತ ಎಚ್‌.ಎಂ.ಕಾಂತರಾಜ್‌, ಈಗ ಕಾನೂನು ಬದಲಾವಣೆಯಾಗಿದ್ದು, ಕೆಲವು ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಲು ಮುಂದಾದರು. ಆದರೆ ಸಚಿವರು ಆಸ್ಪದ ನೀಡದೆ ಮೊದಲು ಕೆಲಸ ಮಾಡುವಂತೆ ಸೂಚಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.