ನಗರಗಳಲ್ಲಿ ದೀನ್ದಯಾಳ್ ಹಾಸ್ಟೆಲ್; ಹಿಂದುಳಿದ ವರ್ಗಗಳಿಗೆ ಅನುಕೂಲ: ಶ್ರೀನಿವಾಸ ಪೂಜಾರಿ
Team Udayavani, Apr 9, 2022, 6:35 AM IST
ಮೈಸೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದೀನ್ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಪ್ರತೀ ನಗರಗಳಲ್ಲೂ ಹಾಸ್ಟೆಲ್ ಆರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾನಸ ಗಂಗೋತ್ರಿಯ ವಿಲೇಜ್ ಹಾಸ್ಟೆಲ್ ಬಳಿ ಬಿಎಸಿಎಂ ಹಾಸ್ಟೆಲ್ನ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಉದ್ಘಾಟಿಸಿ ಸಚಿವ ಕೋಟ ಅವರು ಮಾತನಾಡಿದರು.
ಇದನ್ನೂ ಓದಿ:ಐಪಿಎಲ್: ಶುಭಮನ್ ಗಿಲ್ ಶತಕ ವಂಚಿತ; ಕೊನೆಯ ಎಸೆತದಲ್ಲಿ ಗೆದ್ದ ಗುಜರಾತ್ ಟೈಟಾನ್ಸ್
ಲಕ್ಷಕ್ಕೂ ಅಧಿಕ ಮಕ್ಕಳ ಬೇಡಿಕೆ
ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಬರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಊಟ, ವಸತಿ ಸಹಿತ ವಿದ್ಯಾರ್ಥಿ ನಿಲಯಗಳ ಸೌಲಭ್ಯವನ್ನು ನೀಡಲಾಗುವುದು. ಪ್ರಸ್ತುತ ರಾಜ್ಯದಲ್ಲಿ 1 ಲಕ್ಷಕ್ಕೂ ಅಧಿಕ ಮಕ್ಕಳು ಹಾಸ್ಟೆಲ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಪ್ರತೀ ನಗರ ಪ್ರದೇಶದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದೀನ್ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್