38 ದಿವ್ಯಾಂಗರಿಗೆ ತ್ರಿಚಕ್ರ ವಾಹನ ವಿತರಣೆ
Team Udayavani, Jul 23, 2018, 12:40 PM IST
ಹುಣಸೂರು: ತಾಲೂಕಿನ 38 ಮಂದಿ ದಿವ್ಯಾಂಗರಿಗೆ(ವಿಕಲಚೇತನ) ಒಟ್ಟು 30.40 ಲಕ್ಷರೂ ವೆಚ್ಚದಡಿ ತ್ರಿಚಕ್ರವಾಹನಗಳನ್ನು ಶಾಸಕ ಎಚ್.ವಿಶ್ವನಾಥ್ ವಿತರಿಸಿದರು.
ತಾಪಂ ಆವರಣದಲ್ಲಿ ಜಿಲ್ಲಾ ಅಂಗವಿಲಕರ ಕಲ್ಯಾಣಾ ಧಿಕಾರಿ ಕಚೇರಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನೀಡುವ ವಾಹನಗಳನ್ನು ವಿತರಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ವಿಕಲಚೇತನರನ್ನು ದಿವ್ಯಾಂಗರೆಂದು ಕರೆಯುವ ಮೂಲಕ ಕಾಳಜಿತೋರಿರುವುದು ಹೆಮ್ಮೆಯ ವಿಚಾರ.
ತಾವು ಸಂಸದರಾಗಿದ್ದ ವೇಳೆ ಸಂಸದರ ನಿಧಿ ಯಿಂದ ಈ ವರ್ಗದವರಿಗೆ ಯಾವುದೇ ಸವಲತ್ತು ವಿತರಿಸಲು ಅವಕಾಶವಿರಲಿಲ್ಲ, ಇದನ್ನು ಮನಗಂಡ ತಾವು ಹಿರಿಯ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ರ ಗಮನಕ್ಕೆ ತಂದ ವೇಳೆ ದಿವ್ಯಾಂಗರಿಗೂ ಸಂಸದರ ನಿಧಿ ಯಿಂದ ಸವಲತ್ತು
ಕಲ್ಪಿಸುವ ಅವಕಾಶ ನೀಡಿದ್ದರಿಂದಾಗಿ ಅಂದು ಮೈಸೂರು ಜಿಲ್ಲೆಯ 85 ಹಾಗೂ ಕೊಡಗಿನ 80ಕ್ಕೂ ಹೆಚ್ಚು ಮಂದಿಗೆ ಸವಲತ್ತು ವಿತರಿಸಲಾಗಿತ್ತು. 2016-17ನೇ ಸಾಲಿನಲ್ಲಿ ಆಯ್ಕೆಯಾಗಿದ್ದ ಜಿಲ್ಲೆಯ 400ಕ್ಕೂ ಹೆಚ್ಚು ಮಂದಿಗೆ ಅವಕಾಶ ಸಿಕ್ಕಿದ್ದರೆ, ತಾಲೂಕಿನ 38 ಮಂದಿಗೆ ನೀಡಲಾಗುತ್ತಿದೆ ಎಂದರು.
ರಾಜ್ಯದ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಹ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಬೋನ್ಮ್ಯಾರೋ ಕಾಯಿಲೆಗೊಳಗಾಗಿರುವವರ ಹೆಚ್ಚಿನ ಚಿಕಿತ್ಸೆಗಾಗಿ ಈ ಬಾರಿಯ ಬಜೆಟ್ನಲ್ಲಿ 12 ಕೋಟಿ ರೂ ಮೀಸಲಿರಿಸಿದ್ದಾರೆ.
ಎಲ್ಲರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಹಿಂದಿನ ಸರ್ಕಾರದಲ್ಲಿ ಕೈಗೊಂಡಿದ್ದ ಆರೋಗ್ಯ ಭಾಗ್ಯ ಯೋಜನೆಯಲ್ಲಿ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸಿದ ನಂತರ ಶೀಘ್ರ ಜಾರಿಗೆ ತರಲಾಗುತ್ತಿದೆ ಎಂದರು.
ಜಿ.ಪಂ.ಸದಸ್ಯ ಎಂ.ಬಿ.ಸುರೇಂದ್ರ, ತಾಪಂ ಅಧ್ಯಕ್ಷೆ ಪದ್ಮಮ್ಮ, ಉಪಾಧ್ಯಕ್ಷ ಪ್ರೇಮಕುಮಾರ್, ಕಾರ್ಯ ನಿರ್ವಹಣಾಧಿ ಕಾರಿ ಕೃಷ್ಣಕುಮಾರ್, ನಗರಸಭೆ ಅಧ್ಯಕ್ಷ ಎಂ.ಶಿವಕುಮಾರ್, ಸದಸ್ಯ ಶಿವರಾಜು, ಸಿಡಿಪಿಓ ನವೀನ್ಕುಮಾರ್, ದಿವ್ಯಾಂಗರ ಕಲ್ಯಾಣಾ ಧಿಕಾರಿ ದೇವರಾಜ್ ಹಾಗೂ ಫಲಾನುಭವಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ