ನಿತ್ಯ 2 ಸಾವಿರ ರೆಮ್ಡೆಸಿವಿಯರ್ ಚುಚ್ಚುಮದ್ದಿಗೆ ಬೇಡಿಕೆ: ಸಚಿವ
Team Udayavani, May 11, 2021, 1:32 PM IST
ನಂಜನಗೂಡು: ಮೈಸೂರು ಜಿಲ್ಲೆಯ ಕೋವಿಡ್ ರೋಗಿಗಳಿಗೆ ಪ್ರತಿನಿತ್ಯ ಬೇಕಾಗಬಹುದಾದ ರೆಮ್ಡೆಸಿವಿಯರ್ ಕುರಿತು ಬೇಡಿಕೆ ಇಟ್ಟಿದ್ದೇವೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸೋಮವಾರ ನಂಜನಗೂಡು ಕೈಗಾರಿಕಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಯುಬಿಲಿಯಂಟ್ಸ್ ಜೆನರಿಕ್ ಕಾರ್ಖಾನೆಗೆ ಮೈಸೂರಿನ ಸಂಸದ ಪ್ರತಾಪಸಿಂಹ ಅವರೊಡಗೂಡಿ ಆಗಮಿಸಿ ಮಾತನಾಡಿದರು.
ನಮಗೆ ರೆಮ್ಡೆಸಿವಿಯರ್ ಅತ್ಯಂತ ಅವಶ್ಯಕತೆಗಳಲ್ಲೊಂದಾಗಿದೆ. ಅದನ್ನು ಉತ್ಪಾದಿಸುವ ಕಂಪನಿಗಳಲ್ಲೊಂದಾದ ಜ್ಯುಬಿಲಿಯಂಟ್ಸ್ ಜೆನರಿಕ್ ಕಾರ್ಖಾನೆ ನಮ್ಮಲ್ಲೇ ಇದ್ದು ಅವರೊಂದಿಗೆ ಚರ್ಚಿಸಿದರೆ ಕೊರತೆ ನೀಗಬಹುದು ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದರಿಂದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದ್ದೇವೆಂದರು.
ಜಿಲ್ಲೆಗೆ ಬೇಕಾಗಬಹುದಾದ 2000 ರೆಮ್ಡೆಸಿವಿಯರ್ ಅನ್ನು ನೇರವಾಗಿ ಜಿಲ್ಲೆಗೇ ನೀಡುವಂತೆ ಬೇಡಿಕೆ ಸಲ್ಲಿಸಿದ್ದೇವೆ. ಆಡಳಿತ ಮಂಡಳಿಯೂ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದೆ ಎಂದರು.
ಬೇಡಿಕೆ ಪತ್ರ ಸಿದ್ಧಪಡಿಸಿ ಕಾರ್ಖಾನೆಯವರಿಗೆ ನೀಡುತ್ತಿದ್ದು ಶೀಘ್ರ ಕೊರತೆಗೆ ಮುಕ್ತಿಸಿಗಬಹುದು ಎಂಬ ಆಶಯ ವ್ಯಕ್ತಪಡಿಸಿದರು.ನಂಜನಗೂಡು ಶಾಸಕ ಹರ್ಷವರ್ಧನ್,ಕಾರ್ಖಾನೆಯ ಎಚ್ಆರ್ ವಿಭಾಗದ ನಿರ್ದೇಶಕ ಸುಬ್ರಹ್ಮಣ್ಯ, ಲಕ್ಷ್ಮೀ ನಾರಾಯಣ ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ನಂಜನಗೂಡು ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ,ನಂಜನಗೂಡು ತಾಲೂಕು ಅಧ್ಯಕ್ಷ ಮಹೇಶ, ನಗರಾಧ್ಯಕ್ಷ ಶ್ರೀನಿವಾಸರೆಡ್ಡಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ವಂತ್, ಡಿವೈಎಸ್ಪಿ ಗೋವಿಂದರಾಜ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಸಾಯಿಖಾನೆಗೆ ಪೊಲೀಸರ ದಾಳಿ : 31 ಹಸುಗಳ ರಕ್ಷಣೆ, 200 ಕೆಜಿ ಮಾಂಸ ಜಪ್ತಿ, ಆರೋಪಿಗಳು ಪರಾರಿ
ದೌರ್ಜನ್ಯ ನಡೆದ್ರೆ ಮುಚ್ಚಿಡಬೇಡಿ: ಅರುಂಧತಿ
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು
ಆನೆ ದಂತ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ, ಪ್ರಮುಖ ಆರೋಪಿ ಎಸ್ಕೇಪ್
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್
ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್