ಡೆಂಘೀ ಜ್ವರ: ಸ್ವಚ್ಛತೆ ಕಾಪಾಡಿ

ಎಚ್.ಡಿ.ಕೋಟೆ ತಾಲೂಕಿನಲ್ಲಿ ಮೂವರಿಗೆ ಡೆಂಘೀ ಸೋಂಕು, ಹಲವರಿಗೆ ಜ್ವರ

Team Udayavani, Jul 5, 2019, 11:40 AM IST

mysuru-tdy-1..

ಎಚ್.ಡಿ.ಕೋಟೆ: ತಾಲೂಕಿನ ವಿವಿಧ ಭಾಗಗಳಲ್ಲಿ ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೂವರಿಗೆ ಡೆಂಘೀ ಜ್ವರದ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ.

ಎಚ್.ಡಿ.ಕೋಟೆ ಪಟ್ಟಣದ ಸರ್ವಮಂಗಳಮ್ಮ ಹಾಗೂ ತಾಲೂಕಿನ ಜಿ.ಎಂ.ಹಳ್ಳಿ ಗ್ರಾಮದ ರಾಜು, ಕಲ್ಲಹಟ್ಟಿ ಗ್ರಾಮದ ಲಕ್ಷ್ಮಣ್‌ ನಾಯಕ್‌ ಡೆಂಘೀ ಜ್ವರದಿಂದ ಬಳಲುತ್ತಿದ್ದು, ಎಲ್ಲರೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಮೈಸೂರಿನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಡಿಸ್‌ ಈಜಿಫೈ ಸೊಳ್ಳೆಯ ಕಚ್ಚುವಿಕೆ ಯಿಂದ ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಮಾರಣಾಂತಿಕ ಡೆಂಘೀ ಜ್ವರ ತಾಲೂಕಿನಲ್ಲಿ ಪತ್ತೆಯಾಗುತ್ತಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯ ಇಲಾಖೆ, ಪುರಸಭೆ ಸೇರಿದಂತೆ ತಾಲೂಕಿನ ಎಲ್ಲಾ 39 ಗ್ರಾಮ ಪಂಚಾಯಿತಿ ಗಳಲ್ಲೂ ಜನರಿಗೆ ತಮ್ಮ ಸುತ್ತಮುತ್ತಲ ಸ್ವಚ್ಛ ಪರಿಸರದ ಬಗ್ಗೆ ಅರಿವು ಮೂಡಿಸಿ, ಡೆಂಘೀ ಜ್ವರದ ಬಗ್ಗೆ ಜನರಲ್ಲಿ ಮನೆ ಮಾಡಿರುವ ಭಯವನ್ನು ದೂರವಾಗಿಸಬೇಕಿದೆ.

ಡೆಂಘೀ ವರದಿಯಾಗಿಲ್ಲ: ಅದರೆ, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ತಾಲೂಕಿನಲ್ಲಿ ಡೆಂಘೀ ಪ್ರಕರಣ ವರದಿಯಾಗಿಲ್ಲ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಇಲಾಖೆ ಸಿಬ್ಬಂದಿ ಪ್ರತಿ ಜನವಸತಿ ಪ್ರದೇಶಕ್ಕೆ ತೆರಳಿ ಲಾರ್ವಾ ಸರ್ವೆ ಕೈಗೊಂಡು ಕುಟುಂಬಗಳ ಜನರಲ್ಲಿ ಶುಚಿತ್ವದ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಜನರು ಜ್ವರ ಬಂದ ಕೂಡಲೇ ಡೆಂಘೀ, ಚಿಕೂನ್‌ಗುನ್ಯಾ ಜ್ವರ ಎಂದು ಭಾವಿಸುತ್ತಾರೆ. ಜ್ವರ ಬಂದು ಮೂರ್‍ನಾಲ್ಕು ದಿನ ಕಳೆದರೂ ಗುಣವಾಗದಿದ್ದಲ್ಲಿ, ಆರೋಗ್ಯ ಇಲಾಖೆಯಲ್ಲಿ ವಿವಿಧ ಪರೀಕ್ಷೆ ನಡೆಸಲಾಗುತ್ತದೆ. ಎಲೀಜಾ ಟೆಸ್ಟ್‌ನಲ್ಲಿ ಪಾಸಿಟಿವ್‌ ಬಂದಾಗ ಮಾತ್ರ ಡೆಂಘೀ ಸೋಂಕು ಪತ್ತೆ ದೃಢಪಡುತ್ತದೆ. ಡೆಂಘೀ ಪತ್ತೆಯಾದರೂ ಸೂಕ್ತ ಚಿಕಿತ್ಸೆ ಲಭ್ಯವಿದ್ದು, ಭಯಪಡಬೇಕಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ:

ಡೆಂಘೀ ಸೋಂಕಿಗೆ ಸೂಕ್ತ ಚಿಕಿತ್ಸೆಯಿದ್ದು, ಯಾರೂ ಎದರುವ ಅಗತ್ಯವಿಲ್ಲ. ತಾವು ವಾಸಿಸುವ ಸುತ್ತಮುತ್ತಲ ಪರಿಸರದಲ್ಲಿ ಎಳೆನೀರು ಚಿಪ್ಪು, ಬೇಡವಾದ ಪ್ಲಾಸ್ಟಿಕ್‌ ವಸ್ತುಗಳು, ಟೈರ್‌ಗಳಲ್ಲಿ ಮತ್ತು ಒಳ ಕಲ್ಲಿನಲ್ಲಿ ಮಳೆ ನೀರು ಶೇಖರಣೆ ಯಾಗದಂತೆ ನೋಡಿಕೊಳ್ಳಬೇಕು. ಆಗಾಗ ಮನೆಯ ನೀರು ಶೇಖರಣಾ ತೊಟ್ಟಿಗಳನ್ನು ಶುಚಿಗೊಳಿಸಿ ಒಣಗಿಸಿ ಮತ್ತೆ ನೀರು ಸಂಗ್ರಹಿಸಬೇಕು. ಸಾಂಕ್ರಾಮಿಕ ರೋಗ ಉತ್ಪತ್ತಿ ಮಾಡಬಲ್ಲ ಸೊಳ್ಳೆ ಹತೋಟಿಗೆ ಸಾರ್ವಜನಿಕರೂ ಸಹಕರಿಸಬೇಕು. ಜ್ವರ ಕಾಣಿಸಿಕೊಂಡಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವಿ.ಉದಯಕುಮಾರ್‌ ತಿಳಿಸಿದ್ದಾರೆ.

ಪಟ್ಟಣದಲ್ಲಿ ಸ್ವಚ್ಛತೆ ಸವಾಲಿನ ಕೆಲಸ:

ಪುರಸಭೆಯಾಗಿ ಮೇಲ್ದರ್ಜೆಗೆರಿದ ಪರಿಣಾಮ ಹತ್ತಾರೂ ಗ್ರಾಮಗಳು ಪುರಸಭೆ ವ್ಯಾಪ್ತಿಗೆ ಸೇರಿವೆ. ಪೌರಕಾರ್ಮಿಕರ ಕೊರತೆ ಇರುವುದರಿಂದ ಶುಚಿತ್ವ ಕೆಲಸ ಸವಾಲಾಗಿ ಪರಿಣಮಿಸಿದೆ. ಅದರೂ ತಾತ್ಕಾಲಿಕವಾಗಿ ಹೆಚ್ಚಿನ ಸಿಬ್ಬಂದಿ ನೇಮಿಸಿ ಎಲ್ಲಾ ವಾರ್ಡ್‌ಗಳಲ್ಲೂ ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ತೆರೆದ ಚರಂಡಿಗಳನ್ನು ಸ್ವಚ್ಛಗೊಳಿಸಿ ಬ್ಲಿಚಿಂಗ್‌ ಪೌಡರ್‌ ಸಿಂಪಡಿಸಲು ಸೂಚಿಸಿದ್ದೇನೆ ಎಂದು ಎಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿ ಡಿ.ಎನ್‌.ವಿಜಯಕುಮಾರ್‌ ತಿಳಿಸಿದ್ದಾರೆ.
● ಬಿ.ನಿಂಗಣ್ಣ ಕೋಟೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.