ಧರ್ಮಗಳಿಂದ ಶಾಂತಿ, ಸುವ್ಯವಸ್ಥೆ ಹಾಳು


Team Udayavani, Jan 6, 2020, 1:15 PM IST

dharmagalionfa

ಮೈಸೂರು: ಶಾಂತಿ, ಸೌಹಾರ್ದತೆ ಹಾಗೂ ಏಕತೆ ಸಾರುವ ನಿಟ್ಟಿನಲ್ಲಿ ಸ್ಥಾಪಿತವಾಗಿದ್ದ ಧರ್ಮಗಳಿಂದ ಶಾಂತಿ ಸುವ್ಯವಸ್ಥೆ ಹಾಳಾಗುತ್ತಿದೆ ಎಂದು  ವಿಶ್ವ ಮೈತ್ರಿ ಬುದ್ಧ ವಿಹಾರದ ಕಲ್ಯಾಣ ಸಿರಿ ಭಂತೇಜಿ ವಿಷಾದ ವ್ಯಕ್ತಪಡಿಸಿದರು. ಜಾಗೃತಿ ಸಂಸ್ಥೆ ವತಿಯಿಂದ ಇನ್‌ಸ್ಟಿಟ್ಯೂಟ್‌ ಆಫ್ ಎಂಜಿನಿಯರ್ಸ್‌  ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ “ಶಾಂತಿ ಸೌಹಾರ್ದತೆಯಿಂದ ಸಮಾನತೆ ಮತ್ತು ಏಕತೆಯ ಕಡೆಗೆ’ ಎಂಬ ವಿಚಾರ ಸಂಕಿರಣದಲ್ಲಿ  ಮಾತನಾಡಿದರು.

ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿ ಹಾಗೂ ಮನುಷ್ಯತ್ವ ರೂಢಿಸಿಕೊಂಡರೆ ದೇಶದಲ್ಲಿ ಅಸಮಾನತೆ ಇರುವುದಿಲ್ಲ. ಸಮಾಜದ  ಒಗ್ಗೂಡುವಿಕೆಗಾಗಿ ಇಂತಹ ಕಾರ್ಯಕ್ರಮವನ್ನು ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ನಡೆಸಿ ಜನರಲ್ಲಿ ಶಾಂತಿ ಸೌಹಾರ್ದತೆ ಮೂಡಿಸಬೇಕು. ಜಾತಿ  ಧರ್ಮ ಬಿಟ್ಟು ನಾವೆಲ್ಲಾ ಒಂದು ಎಂಬ ಭಾವನೆ ಯುವ ಪೀಳಿಗೆಯಲ್ಲಿ ಮೂಡಿಸಬೇಕು ಎಂದು ಹೇಳಿದರು.

ವೈಯಕ್ತಿಕ ಸ್ವಾರ್ಥಕ್ಕಾಗಿ ಜನರಲ್ಲಿ  ಜಾತಿಧರ್ಮದ ಮೂಲಕ ದ್ವೇಷದ ಭಾವನೆ ಮೂಡಿಸುತ್ತಿದ್ದಾರೆ. ಈ ರೀತಿಯ ಭಾವನೆಗಳಿಗೆ ಜನರು ಒಳಗಾಗಬಾರದು. ಉನ್ನತ ಶಿಕ್ಷಣವನ್ನು  ಪಡೆದುಕೊಂಡು ಪ್ರಜ್ಞಾವಂತರಾಗಿ ಮತ್ತೂಬ್ಬರಿಗೆ ತೊಂದರೆಯಾಗದಂತೆ ಜೀವನವನ್ನು ಸಾಗಿಸಬೇಕು ಎಂದರು. ಮೈಸೂರು ವಿವಿ  ಪ್ರಾಚ್ಯ ವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ. ಎಸ್‌.ಶಿವರಾಜಪ್ಪ ಮಾತನಾಡಿ, ಎಲ್ಲರನ್ನು ಒಗ್ಗೂಡಿಸಿ ಸುಭದ್ರ ಸಮಾಜದತ್ತ ಸಾಗುವವರೆ  ಎಲ್ಲರಲ್ಲೂ ಧರ್ಮ ಹಾಗೂ ಜಾತಿಯ ವಿಷಬೀಜ ಬಿತ್ತಿ ಶಾಂತಿ ಸೌಹಾರ್ದ ಕದಡುತ್ತಿದ್ದಾರೆ.

ಜಾತಿ, ಸಂಘಟನೆಗಳು ವಿಜೃಂಭಿಸುತ್ತಿದ್ದು, ಇದರಿಂದ  ಭಾರತ ಛಿದ್ರವಾಗುವ ಸಾಧ್ಯತೆಯಿದೆ ಎಂದು ಬೇಸರವ್ಯಕ್ತಪಡಿಸಿದರು. ಬುದ್ಧ, ಬಸವ, ನಮಗೆಲ್ಲ ಜ್ಞಾನ ಹಾಗೂ ಸಮಾನತೆಯ ತತ್ವ ಬೋಧಿಸಿದರು.  ಗಾಂಧೀಜಿ ಶಾಂತಿ ಸೌಹಾರ್ದದ ಮೂಲಕ ಭವ್ಯ ಭಾರತ ನಿರ್ಮಾಣದ ಕನಸು ಕಂಡಿದ್ದರು. ಆದರೆ ಇಂದು ಈ ದೇಶದಲ್ಲಿ ಮೌಡ್ಯ,  ಅಸ್ಪ್ರಶ್ಯತೆ, ಸ್ತ್ರೀ ಶೋಷಣೆ, ಜಾತಿ ನಿಂದನೆ ಹೆಚ್ಚಾಗುತ್ತಿದೆ.

ಧರ್ಮಗಳ ನಡುವೆ ಹೊಂದಾಣಿಕೆ ಮಾಡುವ ಕೆಲಸ ವನ್ನು ಸರಕಾರ ಮಾಡುತ್ತಿಲ್ಲ.  ಹೊಂದಾಣಿಕೆ ಇಲ್ಲದೇ ದೇಶದ ಒಗ್ಗಟ್ಟು ಸಾಧ್ಯವಿಲ್ಲ ಎಂದು ಹೇಳಿದರು. ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌, ಹಜರತ್‌ ಮೌಲನಾ ಮೊಹಮ್ಮದ್‌  ಅಹಮದ್‌ ಖಾನ್‌, ಪ್ರಜಾಪಿತ ಬ್ರಹ್ಮಕುಮಾರಿ ಈಸ್ವರಿ ವಿದ್ಯಾಲಯದ ರಾಜಯೋಗ ಶಿಕ್ಷಕ ಬಿ.ಕೆ.ಶಿವಲೀಲಾ, ಕರ್ನಾಟಕ ಪ್ರದೇಶ ಕೃಷಿಕ ಸಮಾಜ  ಅಧ್ಯಕ್ಷ ಕಲ್ಮಳ್ಳಿ ಶಿವಕುಮಾರ್‌, ಜಾಗೃತಿ ಸಂಸ್ಥೆ ಅಧ್ಯಕ್ಷೆ ಕೆಂಪಾಮಣಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.