ಬಲಪಂಥೀಯರಿಂದ ವಿನಾಶ


Team Udayavani, Aug 25, 2018, 11:33 AM IST

m5-balapathi.jpg

ಮೈಸೂರು: ಉಗ್ರ ಬಲಪಂಥೀಯ ವಾದದಿಂದ ದೇಶಕ್ಕೆ ಗಂಡಾಂತರವಿದೆ. ಎಡಪಂಥೀಯ ವಾದದ ನಕ್ಸಲರಂತೆ, ಬಲಪಂಥೀಯರೂ ಅಪಾಯಕಾರಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರಮೋದಿ ಅವರು ಪ್ರಧಾನಿಯಾದ ಮೇಲೆ ಕಳೆದ ನಾಲ್ಕೂವರೆ ವರ್ಷಗಳಲ್ಲಿ ದೇಶದಲ್ಲಿ ವೈಷಮ್ಯದ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ಉದ್ಯೋಗ ಸೃಷ್ಟಿಯಾಗದೇ ಇರುವುದರಿಂದ ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ,

ರೈತರಿಗೆ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ, ಜನರನ್ನು ನಿರುದ್ಯೋಗಿಗಳನ್ನಾಗಿಸಿ ಆರ್ಥಿಕ ಸಂಕಷ್ಟದಲ್ಲಿಟ್ಟು, ಭಾವೋದ್ವೇಗಕ್ಕೆ ಒಳಪಡಿಸುವ ತರಬೇತಿ ನೀಡಲಾಗುತ್ತಿದೆ. ನಿರುದ್ಯೋಗಿ ಯುವಕರು ಭರವಸೆ ಇಲ್ಲದೆ, ದಾರಿತಪ್ಪುವ ಕೆಲಸ ವಾಗುತ್ತಿದೆ ಎಂದು ದೂರಿದರು.

ಮಾಜಿ ಪ್ರಧಾನಿ ವಾಜಪೇಯಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಹೋದ ಸ್ವಾಮಿ ಅಗ್ನಿವೇಶ್‌ರನ್ನು ಹೊಡೆಯುತ್ತಾರೆ. ದೇಶದಲ್ಲಿ ಲಿಂಚಿಂಗ್‌ ಎಂಬ ಪದ ಬಳಕೆಯೇ ಇರಲಿಲ್ಲ. ಇವರಿಂದ ಮಾಬ್‌ ಲಿಂಚಿಂಗ್‌ ಪದ ಹುಟ್ಟಿಕೊಂಡಿದೆ ಎಂದು ಆರೋಪಿಸಿದರು.

ಮೂಢನಂಬಿಕೆಯಿಂದ ಜನರನ್ನು ಹೊರತಂದು ಸಮಾಜ ಸುಧಾರಣೆಗೆ ಯತ್ನಿಸಿದ ದಾಭೋಲ್ಕರ್‌, ಕಲುºರ್ಗಿ ಅಂಥವರನ್ನೇ ಮುಗಿಸುತ್ತಾರೆಂದರೆ, ಇವರ ವಿರುದ್ಧ ಮಾತನಾಡುವವರನ್ನು ಮುಗಿಸುವುದೇ ಇವರ ಅಜೆಂಡಾ ಆಗಿದೆ. ನಿಡುಮಾಮಿಡಿ ಸ್ವಾಮೀಜಿ, ಗಿರೀಶ್‌ ಕಾರ್ನಾಡ್‌, ಕೆ.ಎಸ್‌.ಭಗವಾನ್‌ ಅಂಥವರು ಇವರ ಪಟ್ಟಿಯಲ್ಲಿದ್ದರು ಎಂಬುದು ಆತಂಕಕ್ಕೆ ಕಾರಣವಾಗಿದೆ ಎಂದರು.

ಪ್ರಧಾನಿ ಮೌನ: ಎಲ್ಲ ವಿಚಾರವನ್ನೂ ಮಾತನಾಡುವ, ಟ್ವೀಟ್‌ ಮಾಡುವ ಪ್ರಧಾನಿ ಮೋದಿ ಅವರು, ಬಲಪಂಥೀಯರು ಸಂವಿಧಾನ ಸುಟ್ಟಿದ್ದನ್ನು ಖಂಡಿಸುವ ಕೆಲಸ ಮಾಡುವುದಿಲ್ಲ. ತಮ್ಮದೇ ಸಚಿವರು ಸಂವಿಧಾನವನ್ನೂ ಬದಲಾಯಿಸಲೇ ನಾವು ಅಧಿಕಾರಕ್ಕೆ ಬಂದಿರುವುದು ಎಂದು ಹೇಳಿಕೆ ಕೊಟ್ಟರೂ ಮೌನವಹಿಸುತ್ತಾರೆ.

ಕಾಶ್ಮೀರದಲ್ಲಿ ಅತ್ಯಾಚಾರ ಆರೋಪಿಯ ಮೆರವಣಿಗೆಯಲ್ಲಿ ಸಚಿವರು ಪಾಲ್ಗೊಳ್ಳುತ್ತಾರೆ. ಇದ್ಯಾವುದರ ಬಗ್ಗೆಯೂ ಪ್ರಧಾನಿ ಮಾತನಾಡುವುದಿಲ್ಲ, ಖಂಡಿಸುವುದೂ ಇಲ್ಲ. ಪ್ರಧಾನಿ ಅವರದು ಮೌನಂ ಸಮ್ಮತಿ ಲಕ್ಷಣ ಎನ್ನುವಂತಿದೆ ಎಂದು ಟೀಕಿಸಿದರು. ಮೋದಿಯವರ ಸ್ನೇಹಿತರು ಬ್ಯಾಂಕ್‌ಗಳನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿ ಹೋಗಿದ್ದಾರೆ,

ಇದೆಲ್ಲಾ ಗೊತ್ತಿದ್ದೂ ಮೋದಿ ಏನೂ ಮಾಡಲಿಲ್ಲ, ನಾಲ್ಕೂವರೆ ವರ್ಷಗಳಿಂದ ಲೋಕಪಾಲ ನೇಮಕ ಮಾಡಲಿಲ್ಲ, ಮಹಾದಾಯಿ ವಿಚಾರದಲ್ಲಿ ರಾಜಕೀಯ ಮಾಡಿದ್ದೂ ಬಿಟ್ಟರೆ, ಸಮಸ್ಯೆಗೆ ಪರಿಹಾರ ಕಲ್ಪಿಸಲಿಲ್ಲ ಬಿಜೆಪಿಯನ್ನು ಟೀಕೆ ಮಾಡುವವರೆಲ್ಲಾ ದೇಶದ್ರೋಹಿಗಳಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಬೊಗಳೆ ದಾಸರ ಪಕ್ಷ ಎಂದು ಜರಿದರು.

ಸುಭದ್ರವಾಗಿದೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಈ ಸರ್ಕಾರ ರಚನೆಯಾದ ಮೊದಲ ದಿನದಿಂದಲೂ ಯಡಿಯೂರಪ್ಪ ಅವರು ಕಾಂಗ್ರೆಸ್‌ನಿಂದ ಇಷ್ಟು ಶಾಸಕರು ಬರುತ್ತಾರೆ ಎಂದು ಹೇಳುತ್ತಲೇ ಬಂದಿದ್ದಾರೆ. ಇದನ್ನು ನೋಡಿದರೆ, ಯಡಿಯೂರಪ್ಪ ಅವರು ಶಾಸಕರನ್ನು ಖರೀದಿ ಮಾಡಲು ತಯಾರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಸಂಸದ ಆರ್‌.ಧ್ರುವನಾರಾಯಣ, ಶಾಸಕರಾದ ತನ್ವೀರ್‌, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್‌ ಚಿಕ್ಕಮಾದು, ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌, ಎಐಸಿಸಿ ಮಾಜಿ ಕಾರ್ಯದರ್ಶಿ ಸೂರಜ್‌ ಹೆಗಡೆ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ನಗರ ಅಧ್ಯಕ್ಷ ಆರ್‌.ಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.