ನೈಜ ಪರೀಕ್ಷೆ ಗೆಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಿ


Team Udayavani, Aug 13, 2019, 3:00 AM IST

nyje-raj

ಮೈಸೂರು: ಸಮಾಜದಲ್ಲಿರುವ ಸಮಸ್ಯೆ ಬಗೆಹರಿಸುವ ಸಂವೇಧನಾಶೀಲತೆ ಬೆಳೆಸಿಕೊಂಡಾಗ ಮಾತ್ರ ನೈಜ ಪರೀಕ್ಷೆ ಎದುರಿಸಲು ಸಾಧ್ಯ ಎಂದು ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯೀಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಹೇಳಿದರು. ಜ್ಞಾನಬುತ್ತಿ ಸಂಸ್ಥೆಯಿಂದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿರುವ 2019ರ ಐಎಎಸ್‌/ ಕೆಎಎಸ್‌ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ಮಾತನಾಡಿದರು.

ಸಮಾಜದ ಮೂಲ ಸಮಸ್ಯೆಗಳನ್ನು ಮೊದಲು ಪರಿಹರಿಸುವುದು, ಸಮಾಜದ ಕಟ್ಟ ಕಡೆ ವರ್ಗಕ್ಕೂ ಸೌಲಭ್ಯ ತಲುಪುವಂತೆ ಮಾಡುವುದು ಮುಖ್ಯ ಪರೀಕ್ಷೆಯಾಗಿದೆ. ಶೈಕ್ಷಣಿಕವಾಗಿ ಹಲವು ಪರೀಕ್ಷೆಗಳನ್ನು ನಾವು ಪಾಸ್‌ ಮಾಡುತ್ತೇವೆ. ಐಎಎಸ್‌ ಹಾಗೂ ಇತರೆ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗಳಲ್ಲಿ ಪಾಸ್‌ ಆಗುತ್ತೇವೆ. ಆದರೆ, ಸಮಾಜದ ಸಮಸ್ಯೆಗಳನ್ನು ಬಗೆಹರಿಸುವುದೇ ನೈಜ ಪರೀಕ್ಷೆಯಾಗಿದೆ. ನೈಜ ಪರೀಕ್ಷೆ ಗೆಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು.

ಇದೇ ವಿಚಾರ ಸಂದರ್ಶನದಲ್ಲೂ ಬರಬಹುದು. ಐಎಎಸ್‌ನಲ್ಲಿ ಹೀಗಿರುವ ಪತ್ರಿಕೆಯೊಂದಿಗೆ ಮೌಲ್ಯ(ಎಥಿಕ್ಸ್‌ ) ಎಂಬ ವಿಷಯ ಸೇರಿಸಲಾಗಿದ್ದು, ಮೌಲ್ಯ ಮೈಗೂಡಿಸಿಕೊಳ್ಳಿ. ಏಕೆ ಐಎಎಸ್‌ ಅಧಿಕಾರಿಯಾಗಬೇಕೆಂಬುದನ್ನು ಸ್ಪಷ್ಟಪಡಿಸಿಕೊಳ್ಳಿ ಎಂದರು. ರಾಜ್ಯದಲ್ಲಿರುವ 6 ಕೋಟಿ ಜನಸಂಖ್ಯೆಯಲ್ಲಿ 2 ಕೋಟಿಯಷ್ಟು ಬಡತನ ರೇಖೆಯಿಂದ ಕಡಿಮೆ ಇರುವ ಬಡವರಿದ್ದಾರೆ.

ಇವರಿಗೆ ಶಿಕ್ಷಣ, ಕೌಶಲಾಭಿವೃದ್ಧಿ, ಪಡಿತರ ಸೇರಿದಂತೆ ಇತ್ಯಾದಿಗಳನ್ನು ನೀಡುವುದರಿಂದ ಬಡತನ ನಿರ್ಮೂಲನೆಯಾಗುವುದೇ ಎಂಬುದನ್ನು ತಿಳಿದುಕೊಳ್ಳಬೇಕು. ಇವರೆಲ್ಲರನ್ನು ಒಳಗೊಳ್ಳುವ ಸಮಗ್ರ ಯೋಜನೆ ರೂಪಿಸುವ ದೂರದೃಷ್ಟಿ ಇರಬೇಕು ಎಂದರು. ಇಂದಿನ ಯುವ ಸಮುದಾಯದಲ್ಲಿ ಗುರಿ ಇಲ್ಲದೆ ಜೀವಿಸುವವರೇ ಹೆಚ್ಚಾಗಿದ್ದಾರೆ. ಗುರಿ ಮತ್ತು ಕನಸು ಇಲ್ಲದೆ ಹೇಗೆ ಬದುಕಿದರೆ ಆಯಿತು ಎಂಬ ಆಸಡ್ಡೆ ಭಾವನೆಯಲ್ಲಿ ಮುಳುಗಿದ್ದಾರೆ.

ಮೈಸೂರಿನಲ್ಲಿ ಯುವಶಕ್ತಿ ಎಷ್ಟಿದೆ?, ಇಲ್ಲಿ ತರಬೇತಿಗೆ ಬಂದಿರುವವರು ಎಷ್ಟು?. ಪ್ರಪಂಚದಲ್ಲೇ ಭಾರತದ ಅತಿ ಹೆಚ್ಚು ಯುವ ಸಮುದಾಯವನ್ನು ಹೊಂದಿರುವ ದೇಶ ಎಂದು ಹೇಳಲಾಗುತ್ತದೆ. ಆದರೆ, ಯುವ ಸಮುದಾಯದಲ್ಲಿ ಎಷ್ಟು ಮಾನವ ಸಂಪನ್ಮೂಲ ಸದ್ಬಳಕೆಯಾಗುತ್ತಿದೆ ಎಂಬುದನ್ನು ಮನ ಗಾಣಬೇಕಿದೆ ಎಂದರು.

ಯುವಕರಿಗೆ ಸರಿ ಮಾರ್ಗ ತೋರಿಸುವವರು ಕಡಿಮೆ ಇರುವ ಸಂದರ್ಭದಲ್ಲಿ ಜೈನಹಳ್ಳಿ ಸತ್ಯನಾರಾಯಣ ಗೌಡರಂತವರು ಯುವಕರಿಗೆ ತರಬೇತಿ ಶಿಬಿರ ಏರ್ಪಡಿಸಿ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದ‌ರು. ಈ ಸಂದರ್ಭ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ, ಜೈನಹಳ್ಳಿ ಸತ್ಯನಾರಾಯಣ ಗೌಡ ಇತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.