ಅರಸು ಮನೆ, ಗ್ರಾಮ ಅಭಿವೃದ್ಧಿ ಮಾಡಿ


Team Udayavani, Aug 20, 2017, 11:50 AM IST

mys6.jpg

ಪಿರಿಯಾಪಟ್ಟಣ: ಡಿ.ದೇವರಾಜು ಅರಸ್‌ರವರ ಹುಟ್ಟೂರಾದ ಬೆಟ್ಟದತುಂಗ‌ ಗ್ರಾಮದಲ್ಲಿ ಮೂಲಸೌಕರ್ಯಗಳ ಕಡೆ ಒತ್ತು ನೀಡದೆ ಕೇವಲ ಶಾಲೆ ಮತ್ತು ಪಂಚಾಯಿತಿ ಕಾಂಪೌಂಡ್‌ ನಿರ್ಮಿಸಿರುವುದನ್ನು ಬಿಟ್ಟರೆ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ.

ಡಿ.ದೇವರಾಜು ಅರಸ್‌ರವರ 100ನೇ ಹುಟ್ಟುಹಬ್ಬದಂದು ವರ್ಷದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಬೆಟ್ಟದತುಂಗ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಬಂದು ಈ ಗ್ರಾಮದಲ್ಲಿರುವ ಅವರು ಹುಟ್ಟಿದ ಮನೆಯನ್ನು ಮತ್ತು ಗ್ರಾಮವನ್ನು ದತ್ತು ಪಡೆದು 20 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿ ಹೋಗಿದ್ದರು.

ಆದರೆ ಡಿ.ದೇವರಾಜ ಅರಸುರವರ ಅಭಿವೃದ್ಧಿ ನಿಗಮದಿಂದ ಕೆಲಸ ಪ್ರಾರಂಭಿಸಿರುವ ಅಧಿಕಾರಿಗಳು ಯಾವುದೇ ಗ್ರಾಮದಲ್ಲಿರುವ ಸಮುದಾಯ ಭವನ ಅರಸುರವರ ಹುಟ್ಟಿದ ಮನೆಯನ್ನು ಸ್ಮಾರಕ ಮಾಡುವುದಾಗಲಿ ಗ್ರಾಮದಲ್ಲಿ ಒಳಚರಂಡಿಗಳನ್ನು ನಿರ್ಮಿಸುವುದಾಗಲಿ ಸ್ವತ್ಛತೆಯನ್ನು ಕಾಪಾಡುವುದಾಗಲಿ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗವಿಯಲ್ಲಿ ಪೂಜೆ: ದೇವರಾಜ ಅರಸು ಅವರು ಹುಟ್ಟಿದ್ದ ಹುಲ್ಲಹಟ್ಟಿ ಎಂದು ಖ್ಯಾತಿ ಪಡೆದಿದ್ದ ಅವರ ಮನೆಯನ್ನು ವಂಶಸ್ಥರು ನವೀಕರಿಸಿಕೊಂಡು ಹೋಗುತ್ತಿದ್ದಾರೆ. ಗ್ರಾಮವು ಬೆಟ್ಟದಪುರದ ಬೆಟ್ಟಕ್ಕೆ ಹೊಂದಿಕೊಂಡಂತೆ ಇದ್ದ ಕಾರಣ ಡಿ.ದೇವರಾಜ ಅರಸ್‌ರವರು ಅವರ ತಾಯಿ ಗೌರಮ್ಮಣ್ಣಿ, ತಂದೆ ದೇವರಾಜೇ ಅರಸ್‌ ಜೊತೆ ಬೆಟ್ಟದಪುರದ ಬೆಟ್ಟದ ಮೂಡಲುಗವಿಯಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದರು.

ಬಂಡೆಯ ಮೇಲೆ ಸ್ವಂತ ಡಿ. ದೇವರಾಜ ಅರಸ್‌ ಅವರೇ ತಮ್ಮ ತಂದೆ-ತಾಯಿ ಹಾಗೂ ತಮ್ಮ ಹೆಸರನ್ನು ಕಲ್ಲಿನಿಂದ ಕೆತ್ತಿರುವ ಅಕ್ಷರಗಳು ಇಂದಿಗೂ ಅ ಗವಿಯಲ್ಲಿ ಕಾಣುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ದಿ.ದೇವರಾಜ ಅರಸ್‌ರವರು ಬಾಲ್ಯದಲ್ಲಿಯೇ ನೂರಾರು ಕಿಲೋಮೀಟರ್‌ ಗಳನ್ನ ಬರಿಗಾಲಲ್ಲಿ ನಡೆಯುತ್ತಿದ್ದರು. ಇವರು ತಮ್ಮ ತಾಯಿಯ ತವರೂರು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸಂತೆಮರೂರು.

ಬೆಟ್ಟದತುಂಗ ಮತ್ತು ಸಂತೆಮರೂರು ಗ್ರಾಮಕ್ಕೆ ಹಲವಾರು ಬಾರಿ ನಡೆದುಕೊಂಡು ಹೋಗುವಾಗ ಕಲ್ಲು, ಮುಳ್ಳು ತಾಗಿ ಗಾಯಗೊಳ್ಳುತ್ತಿದ್ದರು. ಇದರಿಂದ ವಿಚಲಿತರಾದ ದೇವರಾಜ ಅರಸರು, ತಮ್ಮ ಅಧಿಕಾರದ ಅವಧಿಯಲ್ಲಿ ಪ್ರತಿ ಹಳ್ಳಿಗೂ ರಸ್ತೆ ಮತ್ತು ಕೆರೆಗಳಲ್ಲಿ ಕುಡಿಯುವ ನೀರನ್ನು ಶೇಖರಿಸುವ ಬೃಹತ್‌ ಆಂದೋಲನವನ್ನು ಕೈಗೊಂಡರು.

ದೇವರಾಜ ಅರಸು ಅವರ ಮಾದರಿಯಲ್ಲಿಯೇ ಆಡಳಿತ ನಡೆಸುತ್ತಿರುವ ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ ತುಂಬಿಸುವ ಯೋಜನೆ ಕೈಗೊಂಡಿದ್ದಾರೆ. ಆದಷ್ಟು ಬೇಕ ಸರ್ಕಾರ ತಕ್ಷಣವೇ ಹಣ ಬಿಡುಗಡೆ ಮಾಡಿ ಡಿ.ದೇವರಾಜ ಅರಸ್‌ ಅವರ ಹುಟ್ಟಿದ ಮನೆ ಮತ್ತು ಗ್ರಾಮವನ್ನು ಅಭಿವೃದ್ಧಿ ಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.