ವರುಣಾ ಕ್ಷೇತ್ರದಲ್ಲಿ ಧ್ರುವ ಬಿರುಸಿನ ಪ್ರಚಾರ


Team Udayavani, Apr 4, 2019, 3:00 AM IST

VARUNA

ತಿ.ನರಸೀಪುರ: ವರುಣಾ ವಿಧಾನಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಆರ್‌.ಧ್ರುವನಾರಾಯಣ ಅವರು ಶಾಸಕ ಡಾ.ಎಸ್‌.ಯತೀಂದ್ರ ಜೊತೆ ಬುಧವಾರ ಬಿರುಸಿನ ಮತಯಾಚನೆ ನಡೆಸಿದರು.

ಗ್ರಾಪಂ ಮಟ್ಟದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಜನಪ್ರತಿನಿಧಿಗಳು ಹಾಗೂ ಮತದಾರನ್ನು ಭೇಟಿ ಬೆಂಬಲ ಕೋರಿದರು. ಸಂಸದರು, ಶಾಸಕರ ಬರುಕೆಗಾಗಿಯೇ ಕಾದು ಕುಳಿತಿದ್ದ ಜನರಿಂದಲೂ ಉತ್ತಮ ಪ್ರತಿಕ್ರಿಯೆ ದೊರೆಯಿತು. ಕಳೆದೆರಡು ಲೋಕಸಭಾ ಚುನಾವಣೆಗಿಂತಲೂ ಈ ಬಾರಿ ವರುಣಾ ಕ್ಷೇತ್ರದಿಂದ ಅತ್ಯಧಿಕ ಮತಗಳ ಅಂತರವನ್ನು ನೀಡುವುದಾಗಿ ಕಾರ್ಯಕರ್ತರು ಭರವಸೆ ನೀಡಿದರು.

ನಂಜನಗೂಡು ತಾಲೂಕಿನ ರಾಂಪುರ ಗ್ರಾಪಂ ಕೇಂದ್ರದಿಂದ ಆರಂಭಗೊಂಡ ಚುನಾವಣಾ ಪ್ರಚಾರ ಮರಳೂರು, ಗೊದ್ದನಪುರ, ತಾಂಡವಪುರ, ಕೆಂಪಸಿದ್ದನಹುಂಡಿ, ಹುಳಿಮಾವು, ಹದಿನಾರು, ತಾಯೂರು, ಬಿಳೆಗೆರೆ, ಸುತ್ತೂರು, ನಗರ್ಲೆ, ಆಲಂಬೂರು, ಮಲ್ಲೂಪುರ, ತಗಡೂರು, ಕಾರ್ಯ, ದಾಸನೂರು ಹಾಗೂ ಕೋಣನೂರು ಗ್ರಾಮಗಳಲ್ಲಿ ನಡೆಯಿತು.

ಮೋದಿ ವಿಫ‌ಲ: ಈ ವೇಳೆ ಶಾಸಕ ಡಾ.ಎಸ್‌.ಯತೀಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫ‌ಲರಾಗಿದ್ದಾರೆ. ದುಡಿಯುವ ಯುವಕರ ಕೈಗೆ ಕೆಲಸವನ್ನೂ ಕೊಡಲಿಲ್ಲ. ರೈತರ ಆದಾಯವನ್ನೂ ವೃದ್ಧಿಗೊಳಿಸಲಿಲ್ಲ.

ಬದಲಿಗೆ ಹಿಂದುತ್ವ, ದೇಶಭಕ್ತಿಯ ನೆಪದಲ್ಲಿ ಜನರನ್ನು ವಿಭಜಿಸಿ, ಭಾವನಾತ್ಮಕವಾಗಿ ಕೆರಳಿಸಿ ಮತ್ತೆ ಅಧಿಕಾರ ಹಿಡಿಯಲು ಹುನ್ನಾರ ನಡೆಸುತ್ತಿದ್ದಾರೆ. 10 ವರ್ಷಗಳ ಕಾಲ ಸಂಸದರಾಗಿ ಜನಮೆಚ್ಚುವ ಕೆಲಸವನ್ನು ಮಾಡಿರುವ ಆರ್‌.ಧ್ರುವನಾರಾಯಣ ಅಭಿವೃದ್ಧಿಗೆ ಹಗಲಿರುಳುತ್ತಿದ್ದಾರೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಸಚಿವರಾಗುವ ಅವಕಾಶರುವುದರಿಂದ ಈ ಬಾರಿಯೂ ಕಾಂಗ್ರೆಸ್‌ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಮತ್ತಷ್ಟು ಅಭಿವೃದ್ಧಿ: ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಧ್ರುವನಾರಾಯಣ ಮಾತನಾಡಿ, ಹಿಂದಿನ ಯುಪಿಎ ಕೇಂದ್ರ ಸರ್ಕಾರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜನರ ಬದುಕನ್ನು ಹಸನುಗೊಳಿಸಲು ಜಾರಿಗೆ ತಂದಂತಹ ಹತ್ತಾರು ಶಾಶ್ವತ ಯೋಜನೆಗಳನ್ನು ಜನರ ಮುಂದಿಡುವ ಮೂಲಕ ಮತದಾರರ ಮನವೊಲಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು.

ಚುನಾವಣೆಯ ನಂತರ ಮುಂದಿನ ದಿನಗಳಲ್ಲಿಯೂ ಶಾಸಕರ ಜೊತೆಗೂಡಿ ಅಭಿವೃದ್ಧಿ ಕೆಲಸವನ್ನು ಮಾಡುತ್ತೇವೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರು ಬೆಂಬಲ ನೀಡಬೇಕೆಂದು ಕೋರಿದರು. ಈ ವೇಳೆ ವಿಧಾನ ಪರಿಷತ್‌ ಸದಸ್ಯ ಆರ್‌.ಧರ್ಮಸೇನಾ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು,

ಮಾಜಿ ಸದಸ್ಯ ಎಂ.ಸುಧಾ ಮಹದೇವಯ್ಯ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ.ಬಸವರಾಜು, ಜೆಡಿಎಸ್‌ ಕ್ಷೇತ್ರಾಧ್ಯಕ್ಷ ತಾಯೂರು ಪ್ರಕಾಶ್‌, ಮಹದೇವ, ಕೆಂಪಯ್ಯನಹುಂಡಿ ಎಂ.ಶಿವಪ್ರಸಾದ್‌, ಚನ್ನೇಗೌಡ, ಬೀರಿಹುಂಡಿ ಚಿನ್ನಸ್ವಾಮಿ, ಟಿ.ಸಿ.ಮಾದೇಶ್‌, ಲಾರಿ ಸ್ವಾಮಿ, ಬಸವರಾಜು, ಸಿದ್ದರಾಜು, ರಾಜನಾಯಕ, ದೊರೆಸ್ವಾಮಿಗೌಡ, ಮುದ್ದಬೀರನಹುಂಡಿ ನಿಂಗರಾಜು ಇತರರಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.