ಮೈತ್ರಿ ಅಭ್ಯರ್ಥಿ ಸೋಲಲು ಚಿಕಣ್ಣ ತಂತ್ರ ನಡೆಸಿದರೇ?

ಮೈತ್ರಿ ಅಭ್ಯರ್ಥಿಗೆ ವರ್ಗಾವಣೆ ಆಗದ ಮತಗಳು • 2,17027 ಮತಗಳ ಪೈಕಿ ವಿಜಯಶಂಕರ್‌ಗೆ 89215 ಮತ

Team Udayavani, May 25, 2019, 4:52 PM IST

mysuru-tdy-1..

ಎಚ್.ಡಿ.ಕೋಟೆ: ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಧ್ರುವನಾರಾಯಣರಿಗೆ ಸೋಲಾಗಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಯೇ ಕಾರಣ ಎಂದು ತಾಲೂಕಿನ ಅಭಿಪ್ರಾಯವಾಗಿದೆ.

ಎಸ್‌.ಸಿ ಮಿಸಲು ಕ್ಷೇತ್ರವಾಗಿರುವ ಚಾಮರಾಜ ಲೋಕಸಭಾ ಕ್ಷೇತ್ರದಲ್ಲಿ ಕೋಟಿ ಕೋಟಿ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದರೂ, ಕೊನೆ ಹಂತದಲ್ಲಿ ಸೋಲಾಯಿತು. ಅತಿಯಾದ ಆತ್ಮವಿಶ್ವಾಸವೇ ಅಥವಾ ಚುನಾವಣಾ ಪೂರ್ವದಲ್ಲಿ ಆದ ಮೈತ್ರಿಯೇ ಎಂಬಿತ್ಯಾದಿ ಅಂಶಗಳ ಬಗ್ಗೆ ಕ್ಷೇತ್ರಾದ್ಯಂತ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಚರ್ಚೆಯಲ್ಲಿ ತೊಡಗಿದ್ದಾರೆ.

ಚಿಕ್ಕಣ್ಣ ಅನುಪಸ್ಥಿತಿ ಕಾಡಿತೇ?: ಮಾಜಿ ಸಂಸದ ಆರ್‌.ಧ್ರುವನಾರಾಯಣ ಅವರು 2 ಬಾರಿ ಸಂಸದರಾಗಿ ಆಯ್ಕೆಯಾದ ಸಂದರ್ಭ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಕಾಂಗ್ರೆಸ್‌ನಲ್ಲಿದ್ದರು. 2014ರ ಲೋಕಸಭೆ ಚುನಾವಣೆ ನಂತರ ತಾಲೂಕು ಕಾಂಗ್ರೆಸ್‌ನಲ್ಲಿ ಆದ ಕೆಲ ಅನಿರೀಕ್ಷಿತ ಬೆಳವಣಿಗೆ ಹಾಗೂ ಅಂದು ಸಂಸದರಾಗಿದ್ದ ಆರ್‌.ಧ್ರುವನಾರಾಯಣ್‌ ಅವರೊಂದಿಗೆ ಉಂಟಾದ ವೈಮನಸ್ಸಿನಿಂದ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ತಾವು 40 ವರ್ಷ ಪ್ರತಿನಿಧಿಸಿ 1 ಬಾರಿ ಕ್ಷೇತ್ರದ ಶಾಸಕರಾಗಿಯೂ ಆಯ್ಕೆಯಾಗಿದ್ದ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು.

ನಂತರ ನಡೆದ ಜಿಪಂ, ತಾಪಂ, ಗ್ರಾಪಂ ಚುನಾವಣೆಯಲ್ಲಿ ಬಿಜೆಪಿಯನ್ನು ಮುನ್ನಡೆ ತಂದು ಕೊಟ್ಟಿದ್ದರು. ತದ ನಂತರ ಕಳೆದ 2018ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಹಾಲಿ ಶಾಸಕ ಅನಿಲ್ ಚಿಕ್ಕಮಾದು ಅವರ ವಿರುದ್ಧ ಸೋತಿದ್ದರು.

ಈ ಬಾರಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಿದ್ದರೂ, ತಾವು 40 ವರ್ಷ ಪ್ರತಿನಿಧಿಸಿದ್ದ ಕಾಂಗ್ರೆಸ್‌ ಬಿಡಲು ಕಾರಣರಾಗಿದ್ದ ಆರ್‌.ಧ್ರುವನಾರಾಯಣ್‌ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಚಿಕ್ಕಣ್ಣ ಜೆಡಿಎಸ್‌ನಲ್ಲಿದ್ದರೂ ಅವರಾಗಲಿ, ಅವರ ಬೆಂಬಲಿಗರಾಗಲಿ, ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ವ್ಯಕ್ತವಾಗುತ್ತಿದೆ.

ಹೀಗಾಗಿ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ತಮಗಾದ ಸೋಲಿಗೆ ಆರ್‌.ಧ್ರುವನಾರಾಯಣ್‌ ವಿರುದ್ಧ ಸೇಡು ತೀರಿಸಿಕೊಂಡರಾ..? ಎಂಬ ಪ್ರಶ್ನೆ ಎರಡು ಪಕ್ಷಗಳ ಮುಖಂಡರು, ಕಾರ್ಯಕರ್ತರಲ್ಲಿ ಮೊಳಕೆಯೊಡೆದಿರುವುದಂತೂ ಸುಳ್ಳಲ್ಲ. ಮೈತ್ರಿ ಅಭ್ಯರ್ಥಿ ಸೋಲಿಗೆ ಏನು ಕಾರಣ, ಏಕೆ ಹೀಗಾಯ್ತು, ಜನಪ್ರಿಯ ಸಂಸದ ರಾಗಿ ಅಭಿವೃದ್ಧಿಯ ಹರಿಕಾರ ಎಂದು ಕ್ಷೇತ್ರದಲ್ಲಿ ಎನಿಸಿಕೊಂಡಿದ್ದರೂ ಸಂಸದ ಆರ್‌.ಧ್ರುವನಾರಾಯಣ್‌ ಸೋಲು ನ್ಯಾಯವೇ ಎಂಬುದಕ್ಕೆ ಮುಂದಿನ ದಿನಗಳಲ್ಲಿ ಕಾಲವೇ ಉತ್ತರಿಸಬೇಕಿದೆ.

● ಬಿ.ನಿಂಗಣ್ಣ ಕೋಟೆ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.